Advertisement
ಜಿಲ್ಲೆ

ಆಧಾರ್ ನೋಂದಣಿ ಅಭಿಯಾನಕ್ಕೆ ಚಾಲನೆ : ಮೂರು ತಾಲೂಕಿನ 167 ಹಾಡಿಗಳ ಆದಿವಾಸಿಗಳಿಗೆ ಆಧಾರ್ ಭಾಗ್ಯ

Share

ಮಡಿಕೇರಿ: ಸರಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಹಾಡಿಯ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಆಧಾರ್ ಗುರುತಿನ ಚೀಟಿ ಕಡ್ಡಾಯವಾಗಿ ಅಗತ್ಯವಿರುವ ಹಿನ್ನೆಲೆ ಪ್ರತಿಯೊಬ್ಬ ಗಿರಿಜನ ಕುಟುಂಬದವರಿಗೆ ಆಧಾರ್ ಗುರುತಿನ ಚೀಟಿ ನೋಂದಾಯಿಸಲು 15 ದಿನಗಳ ಕಾಲ ಮೊಬೈಲ್ ಸಂಚಾರಿ ವಾಹನದ ಮೂಲಕ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಹಾಡಿಗಳಿಗೆ ತೆರಳಿ ಆಧಾರ್ ನೋಂದಣಿ ಮಾಡುವ ಪ್ರಕ್ರಿಯೆಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೋಮವಾರ ಚಾಲನೆ ನೀಡಿದರು.

ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಆಧಾರ್ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ರಾಜ್ಯದಲ್ಲಿ ಪ್ರಥಮ ಬಾರಿಗೆ ಹಾಡಿಗಳಿಗೆ ತೆರಳಿ ಆಧಾರ್ ನೋಂದಣಿ ಮಾಡಲಾಗುತ್ತಿದೆ. ಜಿಲ್ಲೆಯ ಮೂರು ತಾಲ್ಲೂಕಿನ ಸುಮಾರು 167 ಹಾಡಿಗಳಿಗೆ ಆಧಾರ್ ಕಿಟ್ಟುಗಳನ್ನು ತೆಗೆದುಕೊಂಡು ಹೋಗಿ ನೋಂದಣಿ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು. 

ವಸತಿ ಸೇರಿದಂತೆ ವೈಯಕ್ತಿಕ ಸೌಲಭ್ಯ ಪಡೆಯುವಂತಾಗಲು ಆಧಾರ್ ಕಡ್ಡಾಯವಾಗಿದ್ದು, ಕೆಲವು ಕುಟುಂಬದವರು ಇನ್ನೂ ಆಧಾರ್ ನೋಂದಣಿ ಮಾಡಿಸದೆ ಸರ್ಕಾರದ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ಇದನ್ನು ಮನಗಂಡು ಹಾಡಿಗಳಿಗೆ ತೆರಳಿ ಆಧಾರ್ ನೋಂದಣಿ ಮಾಡಿಸಲು ಮುಂದಾಗಲಾಗಿದೆ ಎಂದು ಐಟಿಡಿಪಿ ಇಲಾಖೆ ಅಧಿಕಾರಿ ಸಿ.ಶಿವಕುಮಾರ್ ಅವರು ತಿಳಿಸಿದರು.ಜಿಲ್ಲೆಯಲ್ಲಿ ಸುಮಾರು 65 ಸಾವಿರ ಆದಿವಾಸಿ ಜನರಿದ್ದು, ಇವರಿಗೆ ಸರ್ಕಾರದ ವೈಯಕ್ತಿಕ ಸೌಲಭ್ಯಗಳು ಇನ್ನೂ ಮರೀಚಿಕೆಯಾಗಿದೆ. ಎಲ್ಲಾ ಗಿರಿಜನರಿಗೆ ಸೌಲಭ್ಯ ತಲುಪಿಸಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ. ಆದರೆ ಬಳಸಿಕೊಳ್ಳಲು ಮುಂದೆ ಬಂದರೂ ಸಹ ಆಧಾರ್ ಗುರುತಿನ ಚೀಟಿ ಇಲ್ಲದಿರುವುದು ಕಂಡುಬಂದ ಹಿನ್ನೆಲೆ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದರು.

ಜಿಲ್ಲೆಯಲ್ಲಿ 15 ದಿನಗಳ ಕಾಲ ತಾಲ್ಲೂಕಿಗೆ ಒಂದರಂತೆ ಮೂರು ಸಂಚಾರಿ ವಾಹನಗಳನ್ನು ನಿಯೋಜಿಸಲಾಗಿದ್ದು, ಸಂಚಾರಿ ವಾಹನದಲ್ಲಿ ಆಧಾರ್ ಕಿಟ್ ಒಳಗೊಂಡ ಸಲಕರಣೆಗಳು ಇರಲಿದ್ದು, ಆಫ್‍ಲೈನ್ ಮೂಲಕ ಆಧಾರ್ ನೋಂದಣಿ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕಚೇರಿಯ ಆಧಾರ್ ನೋಂದಣಿ ವಿಭಾಗದ ಪ್ರಶಾಂತ್ ಹಾಗೂ ರಾಕೇಶ್ ಅವರು ಮಾಹಿತಿ ನೀಡಿದರು.

ಒಂದು ದಿನಕ್ಕೆ 60 ಜನರಿಗೆ ಆಧಾರ್ ನೋಂದಣಿ ಮಾಡುವ ಗುರಿ ಇದೆ. ಮೂಲ ನಿವಾಸಿ ಗಿರಿಜನರು ಆಧಾರ್ ನೋಂದಣಿ ಮಾಡಿಸಿ ಸೌಲಭ್ಯ ಪಡೆಯಲು ಮುಂದಾಗಬೇಕಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ತಾಲ್ಲೂಕು ಐಟಿಡಿಪಿ ಅಧಿಕಾರಿ ಚಂದ್ರಶೇಖರ್, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳಾದ ಚಿಕ್ಕಬಸವಯ್ಯ, ಶೇಖರ್, ದೇವರಾಜು, ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ಇತರರು ಹಾಜರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

3 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

4 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago