ಬೆಳ್ಳಾರೆ : ಮುಹಿಯುದ್ದೀನ್ ಜುಮಾ ಮಸೀದಿ ಅತ್ತಿಕ್ಕರಮಜಲು ಇದರ ಅಂಗ ಸಂಸ್ಥೆಯಾದ ಮಿನ್ನತುಲ್ ಹುದಾ ಇದರ ಪಂಚವಾರ್ಷಿಕ ಪ್ರಯುಕ್ತ ಮಯ್ಯತ್ ಪರಿಪಾಲನ ದ್ವಿದಿನ ಪ್ರಭಾಷಣ ದ ಸಮಾಪನ ದಿನವು ನವಂಬರ್ 19 ರಂದು ನಡೆಯಿತು .
ಸಮಾಪನ ದಿನದ ಕಾರ್ಯಕ್ರಮ ದ ಅಧ್ಯಕ್ಷ ತೆಯನ್ನು ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಹಾಜಿ ಪಿ ಇಸ್ಹಾಕ್ ಸಾಹೇಬ್ ವಹಿಸಿದ್ದರು. ಮಸೀದಿಯ ಖತೀಬ ಯಾಸರ್ ಅರಫಾತ್ ಕೌಸರಿ ಉದ್ಘಾಟಿಸಿದರು. ಇರ್ಷಾದ್ ಫೈಝಿ ಪಾಲ್ತಾಡ್ ಪ್ರಾಸ್ತಾವಿಕ ಭಾಷಣ ಮಾಡಿದರು .
ದ್ವಿದಿನ ಪ್ರಭಾಷಣ ಸಮಾಪನ ದಿನದಂದು ಕೇರಳದ ಪ್ರಸಿದ್ದ ವಾಗ್ಮಿ ಉಸ್ತಾದ್ ವಲಿಯುದ್ದೀನ್ ಫೈಝಿ ಪ್ರಭಾಷಣ ಮಾಡಿದರು. ಪ್ರಸಕ್ತ ಕಾಲದಲ್ಲಿ ಮಯ್ಯತ್ ಪರಿಪಾಲನೆ ವಿಷಯ ನಾವೆಲ್ಲರೂ ಅರಿಯಬೇಕಾದ ವಿಷಯವಾಗಿದೆ.ನಮ್ಮ ಜೀವನದ ತಿಳಿಯಲೇಬೇಕಾದ ಅಂಶವಾಗಿದೆ. ಆದುದರಿಂದ ನಾವು ಇದರ ಕುರಿತು ಗಂಭೀರವಾಗಿ ಪರಿಗಣಿಸಿ ಬದುಕಿದರೆ ಜೀವನ ಸಾರ್ಥಕ ಎಂದು ಅವರು ಹೇಳಿದರು.
ತಾ.ಪಂ ಸದಸ್ಯ ಅಬ್ದುಲ್ ಗಫೂರ್ ಕಲ್ಮಡ್ಕ , ಹಮೀದ್ ಹಾಜಿ ಸುಳ್ಯ , ಬೆಳ್ಳಾರೆ ಝಕರಿಯಾ ಜುಮಾ ಮಸೀದಿ ಆಡಳಿತ ಮಂಡಳಿ ಉಪಾಧ್ಯಕ್ಷ ಯು ಹೆಚ್ ಅಬೂಬಕ್ಕರ್, ಕೋಶಾಧಿಕಾರಿ ಹಾಜಿ ಕೆ ಮಮ್ಮಾಲಿ , ಸದಸ್ಯ ಅಬ್ದುಲ್ ಖಾದರ್ ಹಾಜಿ ಬಾಯಂಬಾಡಿ ,ಝುಬೈರ್ ಮುಸ್ಲಿಯಾರ್ , ಝಕರಿಯಾ ಅಹ್ಸನಿ , ಅಬ್ದುಲ್ ರಹ್ಮಾನ್ ಅಲೆಕ್ಕಾಡಿ ,ಹನೀಫ್ ಸಾಹೇಬ್ ಪಾಜಪಳ್ಳ , ಶರೀಫ್ ಫ್ರಂಟ್ ಲೈನ್ , ಸುಳ್ಯ ವಿಖಾಯ ಚೇರ್ಮನ್ ಜಮಾಲುದ್ದೀನ್ ಕೆ ಎಸ್ , ಇಸ್ಮಾಯಿಲ್ ಪಡ್ಪಿನಂಗಡಿ , ಮಹಮೂದ್ ಶಾಹಿನ್ ಮಾಲ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮ ಸಂಯೋಜಕ ಕೆ ಎಂ ಇಕ್ಬಾಲ್ ಬಾಳಿಲ ಸ್ವಾಗತಿಸಿದರು .
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…