ಬೆಳ್ಳಾರೆ : ಮುಹಿಯುದ್ದೀನ್ ಜುಮಾ ಮಸೀದಿ ಅತ್ತಿಕ್ಕರಮಜಲು ಇದರ ಅಂಗ ಸಂಸ್ಥೆಯಾದ ಮಿನ್ನತುಲ್ ಹುದಾ ಇದರ ಪಂಚವಾರ್ಷಿಕ ಪ್ರಯುಕ್ತ ಮಯ್ಯತ್ ಪರಿಪಾಲನ ದ್ವಿದಿನ ಪ್ರಭಾಷಣ ದ ಸಮಾಪನ ದಿನವು ನವಂಬರ್ 19 ರಂದು ನಡೆಯಿತು .
ಸಮಾಪನ ದಿನದ ಕಾರ್ಯಕ್ರಮ ದ ಅಧ್ಯಕ್ಷ ತೆಯನ್ನು ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಹಾಜಿ ಪಿ ಇಸ್ಹಾಕ್ ಸಾಹೇಬ್ ವಹಿಸಿದ್ದರು. ಮಸೀದಿಯ ಖತೀಬ ಯಾಸರ್ ಅರಫಾತ್ ಕೌಸರಿ ಉದ್ಘಾಟಿಸಿದರು. ಇರ್ಷಾದ್ ಫೈಝಿ ಪಾಲ್ತಾಡ್ ಪ್ರಾಸ್ತಾವಿಕ ಭಾಷಣ ಮಾಡಿದರು .
ದ್ವಿದಿನ ಪ್ರಭಾಷಣ ಸಮಾಪನ ದಿನದಂದು ಕೇರಳದ ಪ್ರಸಿದ್ದ ವಾಗ್ಮಿ ಉಸ್ತಾದ್ ವಲಿಯುದ್ದೀನ್ ಫೈಝಿ ಪ್ರಭಾಷಣ ಮಾಡಿದರು. ಪ್ರಸಕ್ತ ಕಾಲದಲ್ಲಿ ಮಯ್ಯತ್ ಪರಿಪಾಲನೆ ವಿಷಯ ನಾವೆಲ್ಲರೂ ಅರಿಯಬೇಕಾದ ವಿಷಯವಾಗಿದೆ.ನಮ್ಮ ಜೀವನದ ತಿಳಿಯಲೇಬೇಕಾದ ಅಂಶವಾಗಿದೆ. ಆದುದರಿಂದ ನಾವು ಇದರ ಕುರಿತು ಗಂಭೀರವಾಗಿ ಪರಿಗಣಿಸಿ ಬದುಕಿದರೆ ಜೀವನ ಸಾರ್ಥಕ ಎಂದು ಅವರು ಹೇಳಿದರು.
ತಾ.ಪಂ ಸದಸ್ಯ ಅಬ್ದುಲ್ ಗಫೂರ್ ಕಲ್ಮಡ್ಕ , ಹಮೀದ್ ಹಾಜಿ ಸುಳ್ಯ , ಬೆಳ್ಳಾರೆ ಝಕರಿಯಾ ಜುಮಾ ಮಸೀದಿ ಆಡಳಿತ ಮಂಡಳಿ ಉಪಾಧ್ಯಕ್ಷ ಯು ಹೆಚ್ ಅಬೂಬಕ್ಕರ್, ಕೋಶಾಧಿಕಾರಿ ಹಾಜಿ ಕೆ ಮಮ್ಮಾಲಿ , ಸದಸ್ಯ ಅಬ್ದುಲ್ ಖಾದರ್ ಹಾಜಿ ಬಾಯಂಬಾಡಿ ,ಝುಬೈರ್ ಮುಸ್ಲಿಯಾರ್ , ಝಕರಿಯಾ ಅಹ್ಸನಿ , ಅಬ್ದುಲ್ ರಹ್ಮಾನ್ ಅಲೆಕ್ಕಾಡಿ ,ಹನೀಫ್ ಸಾಹೇಬ್ ಪಾಜಪಳ್ಳ , ಶರೀಫ್ ಫ್ರಂಟ್ ಲೈನ್ , ಸುಳ್ಯ ವಿಖಾಯ ಚೇರ್ಮನ್ ಜಮಾಲುದ್ದೀನ್ ಕೆ ಎಸ್ , ಇಸ್ಮಾಯಿಲ್ ಪಡ್ಪಿನಂಗಡಿ , ಮಹಮೂದ್ ಶಾಹಿನ್ ಮಾಲ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮ ಸಂಯೋಜಕ ಕೆ ಎಂ ಇಕ್ಬಾಲ್ ಬಾಳಿಲ ಸ್ವಾಗತಿಸಿದರು .
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…