ಬೆಳ್ಳಾರೆ : ಮುಹಿಯುದ್ದೀನ್ ಜುಮಾ ಮಸೀದಿ ಅತ್ತಿಕ್ಕರಮಜಲು ಇದರ ಅಂಗ ಸಂಸ್ಥೆಯಾದ ಮಿನ್ನತುಲ್ ಹುದಾ ಇದರ ಪಂಚವಾರ್ಷಿಕ ಪ್ರಯುಕ್ತ ಮಯ್ಯತ್ ಪರಿಪಾಲನ ದ್ವಿದಿನ ಪ್ರಭಾಷಣ ದ ಸಮಾಪನ ದಿನವು ನವಂಬರ್ 19 ರಂದು ನಡೆಯಿತು .
ಸಮಾಪನ ದಿನದ ಕಾರ್ಯಕ್ರಮ ದ ಅಧ್ಯಕ್ಷ ತೆಯನ್ನು ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಹಾಜಿ ಪಿ ಇಸ್ಹಾಕ್ ಸಾಹೇಬ್ ವಹಿಸಿದ್ದರು. ಮಸೀದಿಯ ಖತೀಬ ಯಾಸರ್ ಅರಫಾತ್ ಕೌಸರಿ ಉದ್ಘಾಟಿಸಿದರು. ಇರ್ಷಾದ್ ಫೈಝಿ ಪಾಲ್ತಾಡ್ ಪ್ರಾಸ್ತಾವಿಕ ಭಾಷಣ ಮಾಡಿದರು .
ದ್ವಿದಿನ ಪ್ರಭಾಷಣ ಸಮಾಪನ ದಿನದಂದು ಕೇರಳದ ಪ್ರಸಿದ್ದ ವಾಗ್ಮಿ ಉಸ್ತಾದ್ ವಲಿಯುದ್ದೀನ್ ಫೈಝಿ ಪ್ರಭಾಷಣ ಮಾಡಿದರು. ಪ್ರಸಕ್ತ ಕಾಲದಲ್ಲಿ ಮಯ್ಯತ್ ಪರಿಪಾಲನೆ ವಿಷಯ ನಾವೆಲ್ಲರೂ ಅರಿಯಬೇಕಾದ ವಿಷಯವಾಗಿದೆ.ನಮ್ಮ ಜೀವನದ ತಿಳಿಯಲೇಬೇಕಾದ ಅಂಶವಾಗಿದೆ. ಆದುದರಿಂದ ನಾವು ಇದರ ಕುರಿತು ಗಂಭೀರವಾಗಿ ಪರಿಗಣಿಸಿ ಬದುಕಿದರೆ ಜೀವನ ಸಾರ್ಥಕ ಎಂದು ಅವರು ಹೇಳಿದರು.
ತಾ.ಪಂ ಸದಸ್ಯ ಅಬ್ದುಲ್ ಗಫೂರ್ ಕಲ್ಮಡ್ಕ , ಹಮೀದ್ ಹಾಜಿ ಸುಳ್ಯ , ಬೆಳ್ಳಾರೆ ಝಕರಿಯಾ ಜುಮಾ ಮಸೀದಿ ಆಡಳಿತ ಮಂಡಳಿ ಉಪಾಧ್ಯಕ್ಷ ಯು ಹೆಚ್ ಅಬೂಬಕ್ಕರ್, ಕೋಶಾಧಿಕಾರಿ ಹಾಜಿ ಕೆ ಮಮ್ಮಾಲಿ , ಸದಸ್ಯ ಅಬ್ದುಲ್ ಖಾದರ್ ಹಾಜಿ ಬಾಯಂಬಾಡಿ ,ಝುಬೈರ್ ಮುಸ್ಲಿಯಾರ್ , ಝಕರಿಯಾ ಅಹ್ಸನಿ , ಅಬ್ದುಲ್ ರಹ್ಮಾನ್ ಅಲೆಕ್ಕಾಡಿ ,ಹನೀಫ್ ಸಾಹೇಬ್ ಪಾಜಪಳ್ಳ , ಶರೀಫ್ ಫ್ರಂಟ್ ಲೈನ್ , ಸುಳ್ಯ ವಿಖಾಯ ಚೇರ್ಮನ್ ಜಮಾಲುದ್ದೀನ್ ಕೆ ಎಸ್ , ಇಸ್ಮಾಯಿಲ್ ಪಡ್ಪಿನಂಗಡಿ , ಮಹಮೂದ್ ಶಾಹಿನ್ ಮಾಲ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮ ಸಂಯೋಜಕ ಕೆ ಎಂ ಇಕ್ಬಾಲ್ ಬಾಳಿಲ ಸ್ವಾಗತಿಸಿದರು .
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…