ಆನೆ ಬಂದರೆ ಅರಣ್ಯ ಇಲಾಖೆ ಸಿಬ್ಬಂದಿಗಳು ಬರುವುದಿಲ್ಲ….!

June 26, 2019
9:00 AM

ಸುಳ್ಯ:ಮಂಡೆಕೋಲಿನಲ್ಲಿ ಹಲವು ದಿನಗಳಿಂದ ಕಾಡಾನೆಗಳ ಹಿಂಡು ಬೀಡುಬಿಟ್ಟು ದಾಳಿ ನಡೆಸಿದರೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಬಂದಿಲ್ಲ ಮತ್ತು ಆನೆಗಳನ್ನು ಓಡಿಸಲು ಇಲಾಖೆ ಪಟಾಕಿಯನ್ನೂ ಒದಗಿಸಿಲ್ಲ ಎಂಬ ದೂರುಗಳು ಬಂದಿದೆ….! ಹೀಗೆಂದು ಅರಣ್ಯ ಇಲಾಖಾ ಸಿಬಂದಿಗಳನ್ನು ಪ್ರಶ್ನಿಸಿದ್ದು ತಾ ಪಂ ಅಧ್ಯಕ್ಷ ಚನಿಯ ಕಲ್ತಡ್ಕ.

ತಾ.ಪಂ.ಅಧ್ಯಕ್ಷ ಚನಿಯ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಆನೆಯ ವಿಷಯ ಚರ್ಚೆಯಾಯಿತು.  ಆನೆ ಬಂದರೂ ಬಾರದೇ ಇರುವುದು ಮಾತ್ರವಲ್ಲ ಜನಪ್ರತಿನಿಧಿಗಳಲ್ಲಿ  ಈ ಬಗ್ಗೆ ದೂರು ಹೇಳಿದ್ದು ಯಾಕೆ ಎಂದು ಅರಣ್ಯ ಸಿಬ್ಬಂದಿಗಳು ಸ್ಥಳೀಯರ ಮೇಲೆ ಸವಾರಿ ಮಾಡಿರುವ ಬಗ್ಗೆ ದೂರುಗಳಿವೆ. ಇದು ಯಾಕೆ, ಈ ರೀತಿ ವರ್ತಿಸಿದ ಸಿಬ್ಬಂದಿಯ ಮೇಲೆ ಕ್ರಮ ಜರುಗಿಸಿ ಎಂದು ಅಧ್ಯಕ್ಷರು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಹೇಳಿದರು. ಈ ಕುರಿತು ಸಿಬ್ಬಂದಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡುವುದಾಗಿ ವಲಯ ಅರಣ್ಯಾಧಿಕಾರಿ ಮಂಜುನಾಥ್ ಹೇಳಿದರು.

ಮಂಡೆಕೋಲು, ದೇಲಂಪಾಡಿಯಲ್ಲಿ ಸಭೆ:
ಗಡಿಪ್ರದೇಶದಲ್ಲಿ ಉಂಟಾಗಿರುವ ಆನೆ ಹಾವಳಿಯ ಕುರಿತು ಕೇರಳ ಮತ್ತು ಕರ್ನಾಟಕದ ಅಧಿಕಾರಿಗಳ ಜಂಟಿ ಸಭೆ ಮಂಗಳೂರಿನಲ್ಲಿ ನಡೆದಿತ್ತು. ಮುಂದಿನ ಹಂತದಲ್ಲಿ ಮಂಡೆಕೋಲು ಮತ್ತು ದೇಲಂಪಾಡಿಯಲ್ಲಿ ಎರಡೂ ರಾಜ್ಯಗಳ ಅಧಿಕಾರಿಗಳ ಸಭೆ ನಡೆಯಲಿದೆ ಎಂದು ಸುಳ್ಯ ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ತಿಳಿಸಿದರು. ಸಭೆ ನಡೆಸಿ ಸ್ಥಳೀಯ ಜನರ ಮತ್ತು ಜನಪ್ರತಿನಿಧಿಗಳ ಅಭಿಪ್ರಾಯ ಪಡೆದು ಅದನ್ನು ಕ್ರೂಡೀಕರಿಸಿ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ ನಡೆಸಿ ಶಾಶ್ವತ ಪರಿಹಾರ ಯೋಜನೆ ರೂಪಿಸಲಾಗುವುದು ಎಂದು ಅವರು ವಿವರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ
May 18, 2026
10:14 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!
May 18, 2026
8:11 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 18-05-2026 | ಮೇ 26ರಿಂದ ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕು..? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ಸೂಚನೆ
May 18, 2026
2:51 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?
May 18, 2026
9:44 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror