Advertisement
ಸುದ್ದಿಗಳು

ಆನೆ ಬಂದರೆ ಅರಣ್ಯ ಇಲಾಖೆ ಸಿಬ್ಬಂದಿಗಳು ಬರುವುದಿಲ್ಲ….!

Share

ಸುಳ್ಯ:ಮಂಡೆಕೋಲಿನಲ್ಲಿ ಹಲವು ದಿನಗಳಿಂದ ಕಾಡಾನೆಗಳ ಹಿಂಡು ಬೀಡುಬಿಟ್ಟು ದಾಳಿ ನಡೆಸಿದರೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಬಂದಿಲ್ಲ ಮತ್ತು ಆನೆಗಳನ್ನು ಓಡಿಸಲು ಇಲಾಖೆ ಪಟಾಕಿಯನ್ನೂ ಒದಗಿಸಿಲ್ಲ ಎಂಬ ದೂರುಗಳು ಬಂದಿದೆ….! ಹೀಗೆಂದು ಅರಣ್ಯ ಇಲಾಖಾ ಸಿಬಂದಿಗಳನ್ನು ಪ್ರಶ್ನಿಸಿದ್ದು ತಾ ಪಂ ಅಧ್ಯಕ್ಷ ಚನಿಯ ಕಲ್ತಡ್ಕ.

ತಾ.ಪಂ.ಅಧ್ಯಕ್ಷ ಚನಿಯ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಆನೆಯ ವಿಷಯ ಚರ್ಚೆಯಾಯಿತು.  ಆನೆ ಬಂದರೂ ಬಾರದೇ ಇರುವುದು ಮಾತ್ರವಲ್ಲ ಜನಪ್ರತಿನಿಧಿಗಳಲ್ಲಿ  ಈ ಬಗ್ಗೆ ದೂರು ಹೇಳಿದ್ದು ಯಾಕೆ ಎಂದು ಅರಣ್ಯ ಸಿಬ್ಬಂದಿಗಳು ಸ್ಥಳೀಯರ ಮೇಲೆ ಸವಾರಿ ಮಾಡಿರುವ ಬಗ್ಗೆ ದೂರುಗಳಿವೆ. ಇದು ಯಾಕೆ, ಈ ರೀತಿ ವರ್ತಿಸಿದ ಸಿಬ್ಬಂದಿಯ ಮೇಲೆ ಕ್ರಮ ಜರುಗಿಸಿ ಎಂದು ಅಧ್ಯಕ್ಷರು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಹೇಳಿದರು. ಈ ಕುರಿತು ಸಿಬ್ಬಂದಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡುವುದಾಗಿ ವಲಯ ಅರಣ್ಯಾಧಿಕಾರಿ ಮಂಜುನಾಥ್ ಹೇಳಿದರು.

ಮಂಡೆಕೋಲು, ದೇಲಂಪಾಡಿಯಲ್ಲಿ ಸಭೆ:
ಗಡಿಪ್ರದೇಶದಲ್ಲಿ ಉಂಟಾಗಿರುವ ಆನೆ ಹಾವಳಿಯ ಕುರಿತು ಕೇರಳ ಮತ್ತು ಕರ್ನಾಟಕದ ಅಧಿಕಾರಿಗಳ ಜಂಟಿ ಸಭೆ ಮಂಗಳೂರಿನಲ್ಲಿ ನಡೆದಿತ್ತು. ಮುಂದಿನ ಹಂತದಲ್ಲಿ ಮಂಡೆಕೋಲು ಮತ್ತು ದೇಲಂಪಾಡಿಯಲ್ಲಿ ಎರಡೂ ರಾಜ್ಯಗಳ ಅಧಿಕಾರಿಗಳ ಸಭೆ ನಡೆಯಲಿದೆ ಎಂದು ಸುಳ್ಯ ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ತಿಳಿಸಿದರು. ಸಭೆ ನಡೆಸಿ ಸ್ಥಳೀಯ ಜನರ ಮತ್ತು ಜನಪ್ರತಿನಿಧಿಗಳ ಅಭಿಪ್ರಾಯ ಪಡೆದು ಅದನ್ನು ಕ್ರೂಡೀಕರಿಸಿ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ ನಡೆಸಿ ಶಾಶ್ವತ ಪರಿಹಾರ ಯೋಜನೆ ರೂಪಿಸಲಾಗುವುದು ಎಂದು ಅವರು ವಿವರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

18 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

18 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

22 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

22 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

23 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

2 days ago