ಸುಳ್ಯ: ಕರ್ನಾಟಕ ಮತ್ತು ಕೇರಳ ರಾಜ್ಯಗಳ ಗಡಿ ಪ್ರದೇಶದಲ್ಲಿ ಆನೆ ದಾಳಿಯಿಂದ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ದ.ಕ.ಉಸ್ತುವಾರಿ ಸಚಿವ ಯು.ಟಿ.ಖಾದರ್ ನೇತೃತ್ವದಲ್ಲಿ ಎರಡೂ ರಾಜ್ಯಗಳ ಅಧಿಕಾರಿಗಳಿಗಳ ಸಭೆ ಮಂಗಳೂರಿನಲ್ಲಿ ನಡೆಯಿತು.
ದ.ಕ.ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್, ಕಾಸರಗೋಡು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಮತ್ತು ಎರಡೂ ರಾಜ್ಯಗಳ ಅರಣ್ಯ ಇಲಾಖೆ ಮತ್ತಿತರ ಅಧಿಕಾರಿಗಳು ಭಾಗವಹಸಿದ್ದರು.
ಸುಳ್ಯ ತಾಲೂಕಿನ ಮತ್ತು ಕಾಸರಗೋಡು ಜಿಲ್ಲೆಯ ಗಡಿ ಪ್ರದೇಶದಲ್ಲಿ ಹಲವು ವರ್ಷಗಳಿಂದ ಆನೆಗಳ ಹಾವಳಿ ಅಧಿಕವಾಗಿದ್ದು ಜನರು ರೋಸಿ ಹೋಗಿದ್ದಾರೆ. ಈ ಹಿನ್ನಲೆಯಲ್ಲಿ ವಿಶೇಷ ಆದ್ಯತೆಯ ಮೇರೆಗೆ ಕ್ರಮ ಕೈಗೊಳ್ಳಬೇಕಾಗಿರುವುದರಿಂದ ಸಭೆ ನಡೆಸಲಾಯಿತು. 11 ಆನೆಗಳ ಹಿಂಡು ಗಡಿಪ್ರದೇಶದಲ್ಲಿ ದಾಂಧಲೆ ನಡೆಸುತ್ತಿದ್ದು ಎರಡೂ ರಾಜ್ಯಗಳಿಗೆ ತಲೆ ನೋವು ಸೃಷ್ಟಿಸಿದೆ. ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಸಭೆ ನಡೆಸಿ ಚರ್ಚೆ ನಡೆಸುವುದಾಗಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…