Advertisement
MIRROR FOCUS

ಆನ್ ಲೈನ್ ಮೂಲಕ ವಿಶ್ವ ಅರೆಭಾಷೆ ಹಬ್ಬ

Share

ಸುಳ್ಯ: ಕೊರೋನಾ ಮಹಾ ಮಾರಿ ಇಡೀ ಜಗತ್ತನ್ನೇ ಆವರಿಸಿರುವ ಇಂದಿನ ದಿನಗಳಲ್ಲಿ ಬದುಕೇ ಆನ್ ಲೈನ್ ಆಗಿ ಪರಿವರ್ತನೆಯಾಗಿದೆ. ಬೆರಳ ತುದಿಯಲ್ಲಿ ಜಗತ್ತನ್ನು ಒಂದಾಗಿಸುವ ಆನ್‍ಲೈನ್ ವೇದಿಕೆ, ಸಾಮಾಜಿಕ ಜಾಲತಾಣಗಳು ಬದುಕಿನ ಭಾಗವೇ ಆಗಿದೆ. ಸಂವಹನ, ವ್ಯವಹಾರ, ಶಿಕ್ಷಣ ಎಲ್ಲವೂ ಆನ್‍ಲೈನ್ ಆಗಿರುವಾಗ ಬದುಕಿನ ಸಂಭ್ರಮವಾದ ಹಬ್ಬವನ್ನು ಕೂಡ ಆನ್‍ಲೈನ್ ಮೂಲಕ ಆಚರಿಸಲು ಮುಂದಾಗಿರುವುದು ಹೊಸ ಪ್ರಯೋಗ. ಸುಳ್ಯದ ಉತ್ಸಾಹಿ ಯುವಕರ ತಂಡ ಸೇರಿ ಆನ್ ಲೈನ್ ಮೂಲಕ ವಿಶ್ವ ಅರೆಭಾಷೆ ಹಬ್ಬವನ್ನು ಆಚರಿಸಲು ಮುಂದಾಗಿದೆ.

Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕೊಡಗು ಜಿಲ್ಲೆ, ಕಾಸರಗೋಡು ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಜನರ ಭಾಷೆಯಾದ ಅರೆ ಭಾಷೆಗೆ ತನ್ನದೇ ಆದ ವಿಶೇಷ ಭಾಷಾ ಶೈಲಿ, ಸಂಸ್ಕೃತಿ, ಆಚಾರ ವಿಚಾರಗಳಿವೆ. ಅರೆಭಾಷೆಯ ಸಂಸ್ಕೃತಿ ಮತ್ತು ಬದುಕನ್ನು ಬಿಂಬಿಸುವ ಅರೆಭಾಷೆ ಹಬ್ಬವನ್ನು ಸಾಮಾಜಿಕ ಜಾಲತಾಣವನ್ನು ವೇದಿಕೆಯಾಗಿಸಿ ಆಟಿ ತಿಂಗಳು (ಕರ್ಕಾಟಕ)18 ಅಂದರೆ ಆ.3ರಂದು ನಡೆಸಲಾಗುತ್ತದೆ.

ಹಬ್ಬದ ಆಚರಣೆ ಹೇಗೆ:  ಬ್ಬಗಳು ಅಂದರೆ ಸಂಭ್ರಮ. ತಾವು ಇರುವಲ್ಲಿಯೇ ಕುಳಿತು ಸಾಮಾಜಿಕ ಜಾಲತಾಣದ ಮೂಲಕ ಒಟ್ಟಾಗಿ ಸಂಭ್ರಮಿಸುವುದು ಅರೆಭಾಷೆ ಹಬ್ಬದ ಕಲ್ಪನೆ. ಆಂಗಿಕ ಮಲ್ಟಿ ಮೀಡಿಯಾ ಎಂಬ ಫೇಸ್ ಬುಕ್ ಪೇಜ್ ಮೂಲಕ ವಿಶ್ವದ ಎಲ್ಲಾ ಅರೆಭಾಷಿಕರನ್ನೂ ಒಂದೇ ವೇದಿಕೆಯಡಿಯಲ್ಲಿ ತರುವುದು ಉದ್ದೇಶ. ಗಣ್ಯರು, ಸಾಹಿತಿಗಳು, ಕಲಾವಿದರು ಎಲ್ಲರೂ ಸೇರಿ ವಿವಿಧ ಕಾರ್ಯಕ್ರಮಗಳನ್ನು ನೀಡಲಿದ್ದಾರೆ. 20 ಮಂದಿ ಪ್ರಮುಖರು ಅರೆ ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಮಾತನಾಡುವರು. ವಿವಿಧ ವಿಷಯಗಳ ಬಗ್ಗೆ ಪ್ರಮುಖರು ಫೇಸ್ ಬುಕ್ ಲೈವ್‍ನಲ್ಲಿ ಅಥವಾ ರೆಕಾರ್ಡ್ ಮಾಡಿ ಅಪ್‍ಲೋಡ್ ಮಾಡುವ ಮೂಲಕ ಇವರ ಅಭಿಪ್ರಾಯಗಳನ್ನು ದಾಖಲಿಸುವರು. ಅಲ್ಲದೆ ಅರೆಭಾಷೆಯಲ್ಲಿ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ನಡೆಯಲಿದೆ. ಕಥೆ, ಕವನ, ಹಾಡು, ನೃತ್ಯ, ಚಿತ್ರ ರಚನೆಗೆ ಅವಕಾಶ ಇದೆ. ಆಸಕ್ತರು ತಮ್ಮ ರಚನೆಗಳನ್ನು ಫೇಸ್ ಬುಕ್ ಪೇಜ್‍ನಲ್ಲಿ ಅಪ್‍ಲೋಡ್ ಮಾಡಬಹುದು. ಅಥವಾ ರೆಕಾರ್ಡ್ ಮಾಡಿ ಸಂಘಟಕರ ವಾಟ್ಸಾಪ್‍ಗೆ ಕಳಿಸಿದರೆ ಸಂಘಟಕರೇ ಅಪ್ ಲೋಡ್ ಮಾಡಲಿದ್ದಾರೆ. ಒಟ್ಟಿನಲ್ಲಿ ದಿನ ಪೂರ್ತಿ ಫೇಸ್ ಬುಕ್ ವೀಕ್ಷಕರಿಗೆ ಹಬ್ಬದ ರಸದೌತಣವನ್ನು ಉಣ ಬಡಿಸಲಿದೆ.

ವಿವಿಧ ಸ್ಪರ್ಧೆಗಳು: ಅರೆ ಭಾಷೆ ಹಬ್ಬಕ್ಕೆ ಮೆರುಗು ಹೆಚ್ಚಿಸಲು ಹಲವು ಸ್ಪರ್ಧೆಗಳನ್ನೂ ಏರ್ಪಡಿಲಾಗಿದೆ. ಮೊಬೈಲ್ ಫೋಟೋಗ್ರಫಿ ಸ್ಪರ್ಧೆ, ವಾಟ್ಸಾಪ್ ಗಾದೆ ಸಂಗ್ರಹ ಸ್ಪರ್ಧೆ `ಗಾದೆನ ಜೊಂಪೆ, ಅರೆಭಾಷೆ ಕಾರ್ಡ್ ಕಥೆ ಸ್ಪರ್ಧೆ, ಸಾಂಪ್ರದಾಯಿಕ ಕೊಡಗು ವಾಲಗದ ವಾಟ್ಸಾಫ್ ನೃತ್ಯ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಸ್ಪರ್ಧಾ ವಿಜೇತರಿಗೆ ಬಹುಮಾನಗಳನ್ನು ನೀಡಲಾಗುವುದು. ಈ ರಚನೆಗಳು ಕೂಡ ಹಬ್ಬದ ದಿನ ಆಂಗಿಕ ಫೇಸ್‍ಬುಕ್ ಪೇಜ್‍ನಲ್ಲಿ ಪ್ರದರ್ಶನಗೊಳ್ಳಲಿದೆ. ಆಂಗಿಕ ಮಲ್ಟಿ ಮೀಡಿಯ, ಸೂರಡಿ ಬಳಗ, ಜೆಸಿಐ ಸುಳ್ಯ ಸಿಟಿ, ಅರೆಭಾಷೆ ಪರಿಷತ್ತು ವಾಟ್ಸಾಫ್ ಗುಂಪು, ನಾಟ್ಯ ಮಿಲನ ಟ್ರಸ್ಟ್, ಅಮರ ಸುಳ್ಯ ಸಂಘಟನಾ ಸಮಿತಿ ಮತ್ತಿತರ ಸಂಘಟನೆಗಳು ಒಟ್ಟು ಸೇರಿ ಹಬ್ಬವನ್ನು ಆಯೋಜಿಸಿದೆ.

ಕೊರೋನಾ ಭೀತಿಯಿಂದ ಸ್ಥಗಿತವಾದ ನಮ್ಮ ಸಾಂಸ್ಕೃತಿಕ ಚಟುವಟಿಕೆಗಳಿಗೆ ಮತ್ತೆ ಜೀವ ತುಂಬಬೇಕು. ಎಲ್ಲಾ ಭೀತಿಯನ್ನೂ ಮೆಟ್ಟಿನಿಂತು ಸಾಹಿತ್ಯ, ಸಾಂಸ್ಕೃತಿಕ ಮನಸ್ಸುಗಳು ಮತ್ತೆ ಅರಳಬೇಕು ಎಂಬ ದೃಷ್ಠಿಯಿಂದ ವಿಶ್ವ ಅರೆಭಾಷೆ ಹಬ್ಬವನ್ನು ಹಮ್ಮಿಕೊಂಡಿದ್ದೇವೆ. ಈಗಿನ ಪರಿಸ್ಥಿತಿಯಲ್ಲಿ ಎಲ್ಲರೂ ಒಟ್ಟಾಗಿ ಸೇರಿ ಹಬ್ಬ ಆಚರಿಸಲು ಸಾಧ್ಯವಿಲ್ಲ. ಆದುದರಿಂದ ಸಾಮಾಜಿಕ ಜಾಲತಾಣವನ್ನು ವೇದಿಕೆಯಾಗಿಸಿ ಹಬ್ಬ ನಡೆಸಲು ಯೋಜನೆ ರೂಪಿಸಿದ್ದೇವೆ – ಲೋಕೇಶ್ ಊರುಬೈಲು , ಆನ್‍ಲೈನ್ ಅರೆಭಾಷೆ ಹಬ್ಬದ ಸಂಘಟಕ

Face book Linkhttps://www.facebook.com/Angika-Multimedia-113266047128031/

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

5 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

5 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago