ಆಯುಷ್ಮಾನ್ ಭಾರತ್ ಸುಳ್ಯದಲ್ಲಿ 699 ಫಲಾನುಭವಿಗಳಿಗೆ 1.63 ಕೋಟಿ ಚಿಕಿತ್ಸಾ ವೆಚ್ಚ

September 24, 2019
8:07 PM

ಸುಳ್ಯ:ಸುಳ್ಯ ತಾಲೂಕಿನಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಒಂದು ವರುಷದಲ್ಲಿ ಸುಳ್ಯ ತಾಲೂಕಿನಲ್ಲಿ ಒಟ್ಟು 699 ಫಲಾನುಭವಿಗಳಿಗೆ 1,63,56,604 ರೂ ಚಿಕಿತ್ಸಾ ಸೌಲಭ್ಯ ದೊರಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ 5,350 ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆ ಮಾಡಲಾಗಿದೆ. ಸರಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಕಾರ್ಡ್ ಯೋಜನೆಯಲ್ಲಿ 493 ಪ್ರಿ-ಆಥ್ ನ್ನು ಅಪ್ಲೋಡ್ ಮಾಡಲಾಗಿದೆ. ಇದರ ರಿಕ್ವೆಸ್ಟ್ ಮೊತ್ತ 22,63,055 ಆಗಿದ್ದು ರೂ 10,84,520 ಆರೋಗ್ಯಾ ರಕ್ಷಾ ಸಮಿತಿ ಖಾತೆಗೆ ಬಂದಿರುತ್ತದೆ. ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಜನರಲ್ ಮೆಡಿಸಿನ್, ಜನರಲ್ ಸರ್ಜರಿ, ಕಣ್ಣಿನ ಶಸ್ತ್ರ, ಎಲುಬು ಶಸ್ತ್ರ ಚಿಕಿತ್ಸೆ, ಕಿವಿ, ಮೂಗು, ಗಂಟಲು, ಶಸ್ತ್ರ ಚಿಕಿತ್ಸೆ ಮತ್ತು ಸ್ತ್ರೀ ರೋಗ ಶಸ್ತ್ರ ಚಿಕಿತ್ಸೆಗಳು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ನಡೆಯುತ್ತದೆ.

ಹೃದಯ ರೋಗ ಮತ್ತು ಕ್ಯಾನ್ಸರ್ ಗೆ ಕಿಮೋಥೆರಪಿ ಮತ್ತು ರೇಡಿಯೇಶನ್ ಮತ್ತು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಲ್ಲದ ಚಿಕಿತ್ಸೆಗೆ ನೇರವಾಗಿ ಆಯುಷ್ಮಾನ್ ನೊಂದಾವಣೆ ಮಾಡಿಕೊಂಡ ರೋಗಿಯು ಬಯಸಿದ ಖಾಸಗೀ ಆಸ್ಪತ್ರೆಗೆ ರೆಫರಲ್ ನೀಡಲಾಗುತ್ತದೆ. ಉಳಿದ ರೋಗಿಯನ್ನು ಹೆಚ್ಚುವರಿ ನೆರವಿನ ಚಿಕಿತ್ಸೆಗೆ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ರೆಫರ್ ಮಾಡಲಾಗುತ್ತಿದ್ದು ಇದುವರೆಗೆ 113 ರೋಗಿಗಳಿಗೆ ರೆಫರ್ ಪತ್ರ ನೀಡಲಾಗಿದೆ ಎಂದು ಸರಕಾರಿ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರಿ ಮಳೆ ಎಚ್ಚರಿಕೆ: ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿಗೆ ಆರೆಂಜ್ – ಎಲ್ಲೋ ಅಲರ್ಟ್‌ | ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ
August 3, 2026
4:38 PM
by: ದ ರೂರಲ್ ಮಿರರ್.ಕಾಂ
ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?
August 3, 2026
12:03 PM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
7:20 AM
by: ದ ರೂರಲ್ ಮಿರರ್.ಕಾಂ
ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ
August 2, 2026
9:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror