ಸುಳ್ಯ:ಸುಳ್ಯ ತಾಲೂಕಿನಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಒಂದು ವರುಷದಲ್ಲಿ ಸುಳ್ಯ ತಾಲೂಕಿನಲ್ಲಿ ಒಟ್ಟು 699 ಫಲಾನುಭವಿಗಳಿಗೆ 1,63,56,604 ರೂ ಚಿಕಿತ್ಸಾ ಸೌಲಭ್ಯ ದೊರಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ 5,350 ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆ ಮಾಡಲಾಗಿದೆ. ಸರಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಕಾರ್ಡ್ ಯೋಜನೆಯಲ್ಲಿ 493 ಪ್ರಿ-ಆಥ್ ನ್ನು ಅಪ್ಲೋಡ್ ಮಾಡಲಾಗಿದೆ. ಇದರ ರಿಕ್ವೆಸ್ಟ್ ಮೊತ್ತ 22,63,055 ಆಗಿದ್ದು ರೂ 10,84,520 ಆರೋಗ್ಯಾ ರಕ್ಷಾ ಸಮಿತಿ ಖಾತೆಗೆ ಬಂದಿರುತ್ತದೆ. ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಜನರಲ್ ಮೆಡಿಸಿನ್, ಜನರಲ್ ಸರ್ಜರಿ, ಕಣ್ಣಿನ ಶಸ್ತ್ರ, ಎಲುಬು ಶಸ್ತ್ರ ಚಿಕಿತ್ಸೆ, ಕಿವಿ, ಮೂಗು, ಗಂಟಲು, ಶಸ್ತ್ರ ಚಿಕಿತ್ಸೆ ಮತ್ತು ಸ್ತ್ರೀ ರೋಗ ಶಸ್ತ್ರ ಚಿಕಿತ್ಸೆಗಳು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ನಡೆಯುತ್ತದೆ.
ಹೃದಯ ರೋಗ ಮತ್ತು ಕ್ಯಾನ್ಸರ್ ಗೆ ಕಿಮೋಥೆರಪಿ ಮತ್ತು ರೇಡಿಯೇಶನ್ ಮತ್ತು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಲ್ಲದ ಚಿಕಿತ್ಸೆಗೆ ನೇರವಾಗಿ ಆಯುಷ್ಮಾನ್ ನೊಂದಾವಣೆ ಮಾಡಿಕೊಂಡ ರೋಗಿಯು ಬಯಸಿದ ಖಾಸಗೀ ಆಸ್ಪತ್ರೆಗೆ ರೆಫರಲ್ ನೀಡಲಾಗುತ್ತದೆ. ಉಳಿದ ರೋಗಿಯನ್ನು ಹೆಚ್ಚುವರಿ ನೆರವಿನ ಚಿಕಿತ್ಸೆಗೆ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ರೆಫರ್ ಮಾಡಲಾಗುತ್ತಿದ್ದು ಇದುವರೆಗೆ 113 ರೋಗಿಗಳಿಗೆ ರೆಫರ್ ಪತ್ರ ನೀಡಲಾಗಿದೆ ಎಂದು ಸರಕಾರಿ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…
ಸುಂದರ್ಬನ್ಸ್ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…