ಸುಳ್ಯ:ಸುಳ್ಯ ತಾಲೂಕಿನಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಒಂದು ವರುಷದಲ್ಲಿ ಸುಳ್ಯ ತಾಲೂಕಿನಲ್ಲಿ ಒಟ್ಟು 699 ಫಲಾನುಭವಿಗಳಿಗೆ 1,63,56,604 ರೂ ಚಿಕಿತ್ಸಾ ಸೌಲಭ್ಯ ದೊರಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ 5,350 ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆ ಮಾಡಲಾಗಿದೆ. ಸರಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಕಾರ್ಡ್ ಯೋಜನೆಯಲ್ಲಿ 493 ಪ್ರಿ-ಆಥ್ ನ್ನು ಅಪ್ಲೋಡ್ ಮಾಡಲಾಗಿದೆ. ಇದರ ರಿಕ್ವೆಸ್ಟ್ ಮೊತ್ತ 22,63,055 ಆಗಿದ್ದು ರೂ 10,84,520 ಆರೋಗ್ಯಾ ರಕ್ಷಾ ಸಮಿತಿ ಖಾತೆಗೆ ಬಂದಿರುತ್ತದೆ. ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಜನರಲ್ ಮೆಡಿಸಿನ್, ಜನರಲ್ ಸರ್ಜರಿ, ಕಣ್ಣಿನ ಶಸ್ತ್ರ, ಎಲುಬು ಶಸ್ತ್ರ ಚಿಕಿತ್ಸೆ, ಕಿವಿ, ಮೂಗು, ಗಂಟಲು, ಶಸ್ತ್ರ ಚಿಕಿತ್ಸೆ ಮತ್ತು ಸ್ತ್ರೀ ರೋಗ ಶಸ್ತ್ರ ಚಿಕಿತ್ಸೆಗಳು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ನಡೆಯುತ್ತದೆ.
ಹೃದಯ ರೋಗ ಮತ್ತು ಕ್ಯಾನ್ಸರ್ ಗೆ ಕಿಮೋಥೆರಪಿ ಮತ್ತು ರೇಡಿಯೇಶನ್ ಮತ್ತು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಲ್ಲದ ಚಿಕಿತ್ಸೆಗೆ ನೇರವಾಗಿ ಆಯುಷ್ಮಾನ್ ನೊಂದಾವಣೆ ಮಾಡಿಕೊಂಡ ರೋಗಿಯು ಬಯಸಿದ ಖಾಸಗೀ ಆಸ್ಪತ್ರೆಗೆ ರೆಫರಲ್ ನೀಡಲಾಗುತ್ತದೆ. ಉಳಿದ ರೋಗಿಯನ್ನು ಹೆಚ್ಚುವರಿ ನೆರವಿನ ಚಿಕಿತ್ಸೆಗೆ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ರೆಫರ್ ಮಾಡಲಾಗುತ್ತಿದ್ದು ಇದುವರೆಗೆ 113 ರೋಗಿಗಳಿಗೆ ರೆಫರ್ ಪತ್ರ ನೀಡಲಾಗಿದೆ ಎಂದು ಸರಕಾರಿ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…