ಸುಳ್ಯ:ಸುಳ್ಯ ತಾಲೂಕಿನಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಒಂದು ವರುಷದಲ್ಲಿ ಸುಳ್ಯ ತಾಲೂಕಿನಲ್ಲಿ ಒಟ್ಟು 699 ಫಲಾನುಭವಿಗಳಿಗೆ 1,63,56,604 ರೂ ಚಿಕಿತ್ಸಾ ಸೌಲಭ್ಯ ದೊರಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ 5,350 ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆ ಮಾಡಲಾಗಿದೆ. ಸರಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಕಾರ್ಡ್ ಯೋಜನೆಯಲ್ಲಿ 493 ಪ್ರಿ-ಆಥ್ ನ್ನು ಅಪ್ಲೋಡ್ ಮಾಡಲಾಗಿದೆ. ಇದರ ರಿಕ್ವೆಸ್ಟ್ ಮೊತ್ತ 22,63,055 ಆಗಿದ್ದು ರೂ 10,84,520 ಆರೋಗ್ಯಾ ರಕ್ಷಾ ಸಮಿತಿ ಖಾತೆಗೆ ಬಂದಿರುತ್ತದೆ. ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಜನರಲ್ ಮೆಡಿಸಿನ್, ಜನರಲ್ ಸರ್ಜರಿ, ಕಣ್ಣಿನ ಶಸ್ತ್ರ, ಎಲುಬು ಶಸ್ತ್ರ ಚಿಕಿತ್ಸೆ, ಕಿವಿ, ಮೂಗು, ಗಂಟಲು, ಶಸ್ತ್ರ ಚಿಕಿತ್ಸೆ ಮತ್ತು ಸ್ತ್ರೀ ರೋಗ ಶಸ್ತ್ರ ಚಿಕಿತ್ಸೆಗಳು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ನಡೆಯುತ್ತದೆ.
ಹೃದಯ ರೋಗ ಮತ್ತು ಕ್ಯಾನ್ಸರ್ ಗೆ ಕಿಮೋಥೆರಪಿ ಮತ್ತು ರೇಡಿಯೇಶನ್ ಮತ್ತು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಲ್ಲದ ಚಿಕಿತ್ಸೆಗೆ ನೇರವಾಗಿ ಆಯುಷ್ಮಾನ್ ನೊಂದಾವಣೆ ಮಾಡಿಕೊಂಡ ರೋಗಿಯು ಬಯಸಿದ ಖಾಸಗೀ ಆಸ್ಪತ್ರೆಗೆ ರೆಫರಲ್ ನೀಡಲಾಗುತ್ತದೆ. ಉಳಿದ ರೋಗಿಯನ್ನು ಹೆಚ್ಚುವರಿ ನೆರವಿನ ಚಿಕಿತ್ಸೆಗೆ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ರೆಫರ್ ಮಾಡಲಾಗುತ್ತಿದ್ದು ಇದುವರೆಗೆ 113 ರೋಗಿಗಳಿಗೆ ರೆಫರ್ ಪತ್ರ ನೀಡಲಾಗಿದೆ ಎಂದು ಸರಕಾರಿ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…