Advertisement
ಕಾರ್ಯಕ್ರಮಗಳು

ಆರೋಗ್ಯವಂತ ಬದುಕಿಗೆ ವಿಷಮುಕ್ತ ಆಹಾರ ಅಗತ್ಯ- ಶಕುಂತಳಾ ಟಿ ಶೆಟ್ಟಿ

Share

ಪುತ್ತೂರು:  ಹಿರಿಯರ ಆರೋಗ್ಯ ಉತ್ತಮವಾಗಿತ್ತು. ‌ಇದಕ್ಕೆ ಪ್ರಮುಖ ಕಾರಣ ಆಹಾರ ವ್ಯವಸ್ಥೆ. ಇಂದು ಬದಲಾದ ವ್ಯವಸ್ಥೆಯಲ್ಲಿ ಆಹಾರ ಪದ್ಧತಿ ಬದಲಾಗಿದೆ, ಹೀಗಾಗಿ ಆರೋಗ್ಯ ವ್ಯವಸ್ಥೆ ಹದಗೆಡುತ್ತಿದೆ. ಹೀಗಾಗಿ ಇಂದು‌ ವಿಷ ಮುಕ್ತ ಆಹಾರ ಅಗತ್ಯವಾಗಿದೆ ಎಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು.

ಅವರು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ನಟರಾಜ ವೇದಿಕೆಯಲ್ಲಿ ಎರಡು ದಿನಗಳ ಕಾಲ ನವಚೇತನ ಸ್ನೇಹ ಸಂಗಮ ಹಾಗೂ ಜೇಸಿಐ ಪುತ್ತೂರು ವತಿಯಿಂದ ನಡೆದ ಸಾವಯವ ಹಬ್ಬದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಎಲ್ಲರ ಬದುಕು ವಿಷ ಮುಕ್ತವಾಬೇಕು. ವಿಷ ರಹಿತವಾಗಬೇಕು. ಆದಾಯ ಹೆಚ್ಚಾಗಬೇಕು ಎಂಬ ಕಾರಣದಿಂದ ಮಣ್ಣು ವಿಷವಾಯ್ತು. ಈಗ ಮತ್ತೆ ಬದಲಾಗಬೇಕಿದೆ. ವಿಷ ರಹಿತ ಗಾಳಿ, ನೀರು ವಿಷ ರಹಿತವಾಗಬೇಕು. ಇದಕ್ಕಾಗಿ ಪ್ರಯತ್ನ ಬೇಕು. ಆಹಾರ ಪದ್ಧತಿ ಬದಲಾಗಬೇಕು. ಸಾವಯವ ಕೃಷಿಯಿಂದ ಇದು ಸಾಧ್ಯವಿದೆ ಎಂದರು.

ಅತಿಥಿಯಾಗಿದ್ದ ಕಹಳೆ ನ್ಯೂಸ್ ಮುಖ್ಯಸ್ಥ ಶ್ಯಾಮಸುದರ್ಶನ ಪೂರ್ವಜರು ಬಳಸುತ್ತಿದ್ದ ವಸ್ತುಗಳು ಸಾವಯವವೇ ಆಗಿತ್ತು. ಹೀಗಾಗಿ ರೋಗಮುಕ್ತ ಬದುಕಾಗಿತ್ತು. ಈಗ ಕಾಲ‌ಬದಲಾಗಿದೆ. ಹೀಗಾಗಿ ಇಂದು ವಿಷಮುಕ್ತ ಆಹಾರ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮಾಧ್ಯಮಗಳು ಇಂತಹ ಕಾರ್ಯಕ್ರಮಗಳ ಕಡೆಗೆ ಬೆಳಕು ಚೆಲ್ಲಬೇಕಾದ ಅವಶ್ಯಕತೆ ಇದೆ ಎಂದರು.

ಜೇಸಿಐ ಪುತ್ತೂರು ಕಾರ್ಯದರ್ಶಿ ಪ್ರಮಿತಾ ಸಿ ಹಾಸ್ ಸಮಾರೋಪ ಭಾಷಣ ಮಾಡಿದರು. ಜೇಸೀ ವಲಯ15 ರ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕರಾದ ಅಶ್ವಿನ್ ಐತಾಳ್ ಮಾತನಾಡಿದರು. ಸಭಾಧ್ಯಕ್ಷತೆ ವಹಿಸಿದ್ದ ನವಚೇತನ ಸ್ನೇಹ ಸಂಗಮದ ಅಧ್ಯಕ್ಷ ಅನಂತ ಪ್ರಸಾದ್ ನೈತಡ್ಕ ಮಾತನಾಡಿ ಸಾವಯವ ಹಬ್ಬಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತಿವಾಗಿದೆ. ಮುಂದೆ ಹಣ್ಣು ಮೇಳ, ಹಲಸು ಮೇಳದಂತಹ ಕಾರ್ಯಕ್ರಮದ ಮೂಲಕ ಕೃಷಿಕರಿಗೆ ಹಾಗೂ ಜನತೆಗೆ ವೇದಿಕೆ ನೀಡಲಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಕೃಷಿಕ‌ ಬಿ‌ ಎಸ್‌ ಸುಬ್ರಾಯ ಹಾಗೂ ತುಳಸಿ ದಂಪತಿಗಳನ್ನು ಗೌರವಿಸಲಾಯಿತು.

ಜೇಸಿರೆಟ್ ಅಧ್ಯಕ್ಷೆ  ರೇಷ್ಮಾ‌ ಆರ್  ಶೆಟ್ಟಿ ಸ್ವಾಗತಿಸಿದರು. ನವಚೇತನ ಸ್ನೇಹಸಂಗಮ ಕೋಶಾಧಿಕಾರಿ ಪ್ರಕಾಶ್ ಕೊಡೆಂಕಿರಿ  ವಂದಿಸಿದರು. ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಹಾಗೂ ಪತ್ರಕರ್ತ ನಾ.ಕಾರಂತ ಪೆರಾಜೆ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಬೆಳೆ ಋತುವಿಗೆ ಸಕಲ ಸಿದ್ದತೆ | ದೇಶದಲ್ಲಿ ರಸಗೊಬ್ಬರ ದಾಸ್ತಾನು ದ್ವಿಗುಣ

ಖಾರೀಫ್‌ ಬೆಳೆಗಾಲಕ್ಕೆ ರೈತರಿಗೆ ಕೊರತೆ ಆಗದಂತೆ ದೇಶದಲ್ಲಿ ರಸಗೊಬ್ಬರ ದಾಸ್ತಾನು ಹೆಚ್ಚಿಸಲಾಗಿದೆ. ಯೂರಿಯಾ…

54 minutes ago

ಹವಾಮಾನ ವರದಿ | 15-03-2026 | ಬಿಸಿಲಿನ ಮಧ್ಯೆ ಮಳೆ ಅಬ್ಬರ – ರಾಜ್ಯದ ಹಲವೆಡೆ ಸಂಜೆ ಗುಡುಗು ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ–ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

10 hours ago

ಹವಾಮಾನ ಚಕ್ರಗಳೇ ಬದಲಾಗುತ್ತಿವೆ | ಲಾ ನೀನಾ ಪರಿಣಾಮ ಕಡಿಮೆ, ಉಷ್ಣ ಅಲೆಗಳ ಭೀತಿ ಹೆಚ್ಚಳ

ಹವಾಮಾನ ಬದಲಾವಣೆಯಿಂದ ಲಾ ನೀನಾದ ತಂಪು ಪರಿಣಾಮ ದುರ್ಬಲವಾಗಿ ಭಾರತದಲ್ಲಿ ಬೇಸಿಗೆ ಮುಂಚಿತವಾಗಿ…

11 hours ago

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

1 day ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

1 day ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

2 days ago