ಕಾರ್ಯಕ್ರಮಗಳು

ಆರೋಗ್ಯವಂತ ಬದುಕಿಗೆ ವಿಷಮುಕ್ತ ಆಹಾರ ಅಗತ್ಯ- ಶಕುಂತಳಾ ಟಿ ಶೆಟ್ಟಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು:  ಹಿರಿಯರ ಆರೋಗ್ಯ ಉತ್ತಮವಾಗಿತ್ತು. ‌ಇದಕ್ಕೆ ಪ್ರಮುಖ ಕಾರಣ ಆಹಾರ ವ್ಯವಸ್ಥೆ. ಇಂದು ಬದಲಾದ ವ್ಯವಸ್ಥೆಯಲ್ಲಿ ಆಹಾರ ಪದ್ಧತಿ ಬದಲಾಗಿದೆ, ಹೀಗಾಗಿ ಆರೋಗ್ಯ ವ್ಯವಸ್ಥೆ ಹದಗೆಡುತ್ತಿದೆ. ಹೀಗಾಗಿ ಇಂದು‌ ವಿಷ ಮುಕ್ತ ಆಹಾರ ಅಗತ್ಯವಾಗಿದೆ ಎಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು.

Advertisement

ಅವರು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ನಟರಾಜ ವೇದಿಕೆಯಲ್ಲಿ ಎರಡು ದಿನಗಳ ಕಾಲ ನವಚೇತನ ಸ್ನೇಹ ಸಂಗಮ ಹಾಗೂ ಜೇಸಿಐ ಪುತ್ತೂರು ವತಿಯಿಂದ ನಡೆದ ಸಾವಯವ ಹಬ್ಬದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಎಲ್ಲರ ಬದುಕು ವಿಷ ಮುಕ್ತವಾಬೇಕು. ವಿಷ ರಹಿತವಾಗಬೇಕು. ಆದಾಯ ಹೆಚ್ಚಾಗಬೇಕು ಎಂಬ ಕಾರಣದಿಂದ ಮಣ್ಣು ವಿಷವಾಯ್ತು. ಈಗ ಮತ್ತೆ ಬದಲಾಗಬೇಕಿದೆ. ವಿಷ ರಹಿತ ಗಾಳಿ, ನೀರು ವಿಷ ರಹಿತವಾಗಬೇಕು. ಇದಕ್ಕಾಗಿ ಪ್ರಯತ್ನ ಬೇಕು. ಆಹಾರ ಪದ್ಧತಿ ಬದಲಾಗಬೇಕು. ಸಾವಯವ ಕೃಷಿಯಿಂದ ಇದು ಸಾಧ್ಯವಿದೆ ಎಂದರು.

ಅತಿಥಿಯಾಗಿದ್ದ ಕಹಳೆ ನ್ಯೂಸ್ ಮುಖ್ಯಸ್ಥ ಶ್ಯಾಮಸುದರ್ಶನ ಪೂರ್ವಜರು ಬಳಸುತ್ತಿದ್ದ ವಸ್ತುಗಳು ಸಾವಯವವೇ ಆಗಿತ್ತು. ಹೀಗಾಗಿ ರೋಗಮುಕ್ತ ಬದುಕಾಗಿತ್ತು. ಈಗ ಕಾಲ‌ಬದಲಾಗಿದೆ. ಹೀಗಾಗಿ ಇಂದು ವಿಷಮುಕ್ತ ಆಹಾರ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮಾಧ್ಯಮಗಳು ಇಂತಹ ಕಾರ್ಯಕ್ರಮಗಳ ಕಡೆಗೆ ಬೆಳಕು ಚೆಲ್ಲಬೇಕಾದ ಅವಶ್ಯಕತೆ ಇದೆ ಎಂದರು.

Advertisement

ಜೇಸಿಐ ಪುತ್ತೂರು ಕಾರ್ಯದರ್ಶಿ ಪ್ರಮಿತಾ ಸಿ ಹಾಸ್ ಸಮಾರೋಪ ಭಾಷಣ ಮಾಡಿದರು. ಜೇಸೀ ವಲಯ15 ರ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕರಾದ ಅಶ್ವಿನ್ ಐತಾಳ್ ಮಾತನಾಡಿದರು. ಸಭಾಧ್ಯಕ್ಷತೆ ವಹಿಸಿದ್ದ ನವಚೇತನ ಸ್ನೇಹ ಸಂಗಮದ ಅಧ್ಯಕ್ಷ ಅನಂತ ಪ್ರಸಾದ್ ನೈತಡ್ಕ ಮಾತನಾಡಿ ಸಾವಯವ ಹಬ್ಬಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತಿವಾಗಿದೆ. ಮುಂದೆ ಹಣ್ಣು ಮೇಳ, ಹಲಸು ಮೇಳದಂತಹ ಕಾರ್ಯಕ್ರಮದ ಮೂಲಕ ಕೃಷಿಕರಿಗೆ ಹಾಗೂ ಜನತೆಗೆ ವೇದಿಕೆ ನೀಡಲಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಕೃಷಿಕ‌ ಬಿ‌ ಎಸ್‌ ಸುಬ್ರಾಯ ಹಾಗೂ ತುಳಸಿ ದಂಪತಿಗಳನ್ನು ಗೌರವಿಸಲಾಯಿತು.

Advertisement

ಜೇಸಿರೆಟ್ ಅಧ್ಯಕ್ಷೆ  ರೇಷ್ಮಾ‌ ಆರ್  ಶೆಟ್ಟಿ ಸ್ವಾಗತಿಸಿದರು. ನವಚೇತನ ಸ್ನೇಹಸಂಗಮ ಕೋಶಾಧಿಕಾರಿ ಪ್ರಕಾಶ್ ಕೊಡೆಂಕಿರಿ  ವಂದಿಸಿದರು. ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಹಾಗೂ ಪತ್ರಕರ್ತ ನಾ.ಕಾರಂತ ಪೆರಾಜೆ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-08-2025 | ಆ.6 ರಂದು ಕೆಲವು ಕಡೆ ಮಳೆ | ಆ.14 ನಂತರ ಹವಾಮಾನ ಹೇಗಿರಬಹುದು..?

ಮುಂಗಾರು ಮತ್ತಷ್ಟು ದುರ್ಬಲಗೊಳ್ಳತ್ತಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿ…

6 hours ago

700 ಕ್ಕೂ ಅಧಿಕ ರೆಸಿಪಿ | ದಿವ್ಯ ಮಹೇಶ್‌ ಅವರಿಗೆ “ಪಾಕ ಪ್ರವೀಣೆ” ಪ್ರಶಸ್ತಿ

ದ ರೂರಲ್‌ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…

11 hours ago

ಮಕ್ಕಳ ಪುಟ | ಪಂಜದ ಕ್ರಿಯೇಟಿವ್‌ ಚಿತ್ರಕಲಾ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ |

ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…

11 hours ago

ವಿಶ್ವದಲ್ಲಿ ಅಡಿಕೆ ಕೃಷಿ ಹೇಗಿದೆ..? ಭಾರತದಲ್ಲಿ ಅಡಿಕೆ ಆಮದು ಎಷ್ಟು..?

ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…

12 hours ago

ಪ್ಲಾಸ್ಟಿಕ್‌ ತ್ಯಾಜ್ಯ ಕಡಿಮೆ ಮಾಡಲು ಏನು ಕ್ರಮ ? ಅಧ್ಯಯನ ವರದಿ ನಿಯಮ ಗ್ರಾಮಗಳಲ್ಲೂ ಜಾರಿಯಾಗಲಿ

ಪ್ಲಾಸ್ಟಿಕ್ ಮಾಲಿನ್ಯವು  ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…

12 hours ago

ಕೃಷಿಯಲ್ಲಿ ಮೀಥೇನ್ ಕಡಿತದ ಗುರಿ | ವಿಯೆಟ್ನಾಂನಲ್ಲಿ ವಿಶೇಷ ಮಾರ್ಗಸೂಚಿ

ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ  ಹೊರಸೂಸುವ ಮೀಥೇನ್ ಅನ್ನು 30% ರಷ್ಟು…

22 hours ago