Advertisement
ಕಾರ್ಯಕ್ರಮಗಳು

ಆರೋಗ್ಯವಂತ ಬದುಕಿಗೆ ವಿಷಮುಕ್ತ ಆಹಾರ ಅಗತ್ಯ- ಶಕುಂತಳಾ ಟಿ ಶೆಟ್ಟಿ

Share

ಪುತ್ತೂರು:  ಹಿರಿಯರ ಆರೋಗ್ಯ ಉತ್ತಮವಾಗಿತ್ತು. ‌ಇದಕ್ಕೆ ಪ್ರಮುಖ ಕಾರಣ ಆಹಾರ ವ್ಯವಸ್ಥೆ. ಇಂದು ಬದಲಾದ ವ್ಯವಸ್ಥೆಯಲ್ಲಿ ಆಹಾರ ಪದ್ಧತಿ ಬದಲಾಗಿದೆ, ಹೀಗಾಗಿ ಆರೋಗ್ಯ ವ್ಯವಸ್ಥೆ ಹದಗೆಡುತ್ತಿದೆ. ಹೀಗಾಗಿ ಇಂದು‌ ವಿಷ ಮುಕ್ತ ಆಹಾರ ಅಗತ್ಯವಾಗಿದೆ ಎಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು.

ಅವರು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ನಟರಾಜ ವೇದಿಕೆಯಲ್ಲಿ ಎರಡು ದಿನಗಳ ಕಾಲ ನವಚೇತನ ಸ್ನೇಹ ಸಂಗಮ ಹಾಗೂ ಜೇಸಿಐ ಪುತ್ತೂರು ವತಿಯಿಂದ ನಡೆದ ಸಾವಯವ ಹಬ್ಬದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಎಲ್ಲರ ಬದುಕು ವಿಷ ಮುಕ್ತವಾಬೇಕು. ವಿಷ ರಹಿತವಾಗಬೇಕು. ಆದಾಯ ಹೆಚ್ಚಾಗಬೇಕು ಎಂಬ ಕಾರಣದಿಂದ ಮಣ್ಣು ವಿಷವಾಯ್ತು. ಈಗ ಮತ್ತೆ ಬದಲಾಗಬೇಕಿದೆ. ವಿಷ ರಹಿತ ಗಾಳಿ, ನೀರು ವಿಷ ರಹಿತವಾಗಬೇಕು. ಇದಕ್ಕಾಗಿ ಪ್ರಯತ್ನ ಬೇಕು. ಆಹಾರ ಪದ್ಧತಿ ಬದಲಾಗಬೇಕು. ಸಾವಯವ ಕೃಷಿಯಿಂದ ಇದು ಸಾಧ್ಯವಿದೆ ಎಂದರು.

ಅತಿಥಿಯಾಗಿದ್ದ ಕಹಳೆ ನ್ಯೂಸ್ ಮುಖ್ಯಸ್ಥ ಶ್ಯಾಮಸುದರ್ಶನ ಪೂರ್ವಜರು ಬಳಸುತ್ತಿದ್ದ ವಸ್ತುಗಳು ಸಾವಯವವೇ ಆಗಿತ್ತು. ಹೀಗಾಗಿ ರೋಗಮುಕ್ತ ಬದುಕಾಗಿತ್ತು. ಈಗ ಕಾಲ‌ಬದಲಾಗಿದೆ. ಹೀಗಾಗಿ ಇಂದು ವಿಷಮುಕ್ತ ಆಹಾರ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮಾಧ್ಯಮಗಳು ಇಂತಹ ಕಾರ್ಯಕ್ರಮಗಳ ಕಡೆಗೆ ಬೆಳಕು ಚೆಲ್ಲಬೇಕಾದ ಅವಶ್ಯಕತೆ ಇದೆ ಎಂದರು.

ಜೇಸಿಐ ಪುತ್ತೂರು ಕಾರ್ಯದರ್ಶಿ ಪ್ರಮಿತಾ ಸಿ ಹಾಸ್ ಸಮಾರೋಪ ಭಾಷಣ ಮಾಡಿದರು. ಜೇಸೀ ವಲಯ15 ರ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕರಾದ ಅಶ್ವಿನ್ ಐತಾಳ್ ಮಾತನಾಡಿದರು. ಸಭಾಧ್ಯಕ್ಷತೆ ವಹಿಸಿದ್ದ ನವಚೇತನ ಸ್ನೇಹ ಸಂಗಮದ ಅಧ್ಯಕ್ಷ ಅನಂತ ಪ್ರಸಾದ್ ನೈತಡ್ಕ ಮಾತನಾಡಿ ಸಾವಯವ ಹಬ್ಬಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತಿವಾಗಿದೆ. ಮುಂದೆ ಹಣ್ಣು ಮೇಳ, ಹಲಸು ಮೇಳದಂತಹ ಕಾರ್ಯಕ್ರಮದ ಮೂಲಕ ಕೃಷಿಕರಿಗೆ ಹಾಗೂ ಜನತೆಗೆ ವೇದಿಕೆ ನೀಡಲಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಕೃಷಿಕ‌ ಬಿ‌ ಎಸ್‌ ಸುಬ್ರಾಯ ಹಾಗೂ ತುಳಸಿ ದಂಪತಿಗಳನ್ನು ಗೌರವಿಸಲಾಯಿತು.

ಜೇಸಿರೆಟ್ ಅಧ್ಯಕ್ಷೆ  ರೇಷ್ಮಾ‌ ಆರ್  ಶೆಟ್ಟಿ ಸ್ವಾಗತಿಸಿದರು. ನವಚೇತನ ಸ್ನೇಹಸಂಗಮ ಕೋಶಾಧಿಕಾರಿ ಪ್ರಕಾಶ್ ಕೊಡೆಂಕಿರಿ  ವಂದಿಸಿದರು. ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಹಾಗೂ ಪತ್ರಕರ್ತ ನಾ.ಕಾರಂತ ಪೆರಾಜೆ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

7 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 day ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago