ಪುತ್ತೂರು: ಹಿರಿಯರ ಆರೋಗ್ಯ ಉತ್ತಮವಾಗಿತ್ತು. ಇದಕ್ಕೆ ಪ್ರಮುಖ ಕಾರಣ ಆಹಾರ ವ್ಯವಸ್ಥೆ. ಇಂದು ಬದಲಾದ ವ್ಯವಸ್ಥೆಯಲ್ಲಿ ಆಹಾರ ಪದ್ಧತಿ ಬದಲಾಗಿದೆ, ಹೀಗಾಗಿ ಆರೋಗ್ಯ ವ್ಯವಸ್ಥೆ ಹದಗೆಡುತ್ತಿದೆ. ಹೀಗಾಗಿ ಇಂದು ವಿಷ ಮುಕ್ತ ಆಹಾರ ಅಗತ್ಯವಾಗಿದೆ ಎಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು.
ಅವರು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ನಟರಾಜ ವೇದಿಕೆಯಲ್ಲಿ ಎರಡು ದಿನಗಳ ಕಾಲ ನವಚೇತನ ಸ್ನೇಹ ಸಂಗಮ ಹಾಗೂ ಜೇಸಿಐ ಪುತ್ತೂರು ವತಿಯಿಂದ ನಡೆದ ಸಾವಯವ ಹಬ್ಬದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಎಲ್ಲರ ಬದುಕು ವಿಷ ಮುಕ್ತವಾಬೇಕು. ವಿಷ ರಹಿತವಾಗಬೇಕು. ಆದಾಯ ಹೆಚ್ಚಾಗಬೇಕು ಎಂಬ ಕಾರಣದಿಂದ ಮಣ್ಣು ವಿಷವಾಯ್ತು. ಈಗ ಮತ್ತೆ ಬದಲಾಗಬೇಕಿದೆ. ವಿಷ ರಹಿತ ಗಾಳಿ, ನೀರು ವಿಷ ರಹಿತವಾಗಬೇಕು. ಇದಕ್ಕಾಗಿ ಪ್ರಯತ್ನ ಬೇಕು. ಆಹಾರ ಪದ್ಧತಿ ಬದಲಾಗಬೇಕು. ಸಾವಯವ ಕೃಷಿಯಿಂದ ಇದು ಸಾಧ್ಯವಿದೆ ಎಂದರು.
ಅತಿಥಿಯಾಗಿದ್ದ ಕಹಳೆ ನ್ಯೂಸ್ ಮುಖ್ಯಸ್ಥ ಶ್ಯಾಮಸುದರ್ಶನ ಪೂರ್ವಜರು ಬಳಸುತ್ತಿದ್ದ ವಸ್ತುಗಳು ಸಾವಯವವೇ ಆಗಿತ್ತು. ಹೀಗಾಗಿ ರೋಗಮುಕ್ತ ಬದುಕಾಗಿತ್ತು. ಈಗ ಕಾಲಬದಲಾಗಿದೆ. ಹೀಗಾಗಿ ಇಂದು ವಿಷಮುಕ್ತ ಆಹಾರ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮಾಧ್ಯಮಗಳು ಇಂತಹ ಕಾರ್ಯಕ್ರಮಗಳ ಕಡೆಗೆ ಬೆಳಕು ಚೆಲ್ಲಬೇಕಾದ ಅವಶ್ಯಕತೆ ಇದೆ ಎಂದರು.
ಜೇಸಿಐ ಪುತ್ತೂರು ಕಾರ್ಯದರ್ಶಿ ಪ್ರಮಿತಾ ಸಿ ಹಾಸ್ ಸಮಾರೋಪ ಭಾಷಣ ಮಾಡಿದರು. ಜೇಸೀ ವಲಯ15 ರ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕರಾದ ಅಶ್ವಿನ್ ಐತಾಳ್ ಮಾತನಾಡಿದರು. ಸಭಾಧ್ಯಕ್ಷತೆ ವಹಿಸಿದ್ದ ನವಚೇತನ ಸ್ನೇಹ ಸಂಗಮದ ಅಧ್ಯಕ್ಷ ಅನಂತ ಪ್ರಸಾದ್ ನೈತಡ್ಕ ಮಾತನಾಡಿ ಸಾವಯವ ಹಬ್ಬಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತಿವಾಗಿದೆ. ಮುಂದೆ ಹಣ್ಣು ಮೇಳ, ಹಲಸು ಮೇಳದಂತಹ ಕಾರ್ಯಕ್ರಮದ ಮೂಲಕ ಕೃಷಿಕರಿಗೆ ಹಾಗೂ ಜನತೆಗೆ ವೇದಿಕೆ ನೀಡಲಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಕೃಷಿಕ ಬಿ ಎಸ್ ಸುಬ್ರಾಯ ಹಾಗೂ ತುಳಸಿ ದಂಪತಿಗಳನ್ನು ಗೌರವಿಸಲಾಯಿತು.
ಜೇಸಿರೆಟ್ ಅಧ್ಯಕ್ಷೆ ರೇಷ್ಮಾ ಆರ್ ಶೆಟ್ಟಿ ಸ್ವಾಗತಿಸಿದರು. ನವಚೇತನ ಸ್ನೇಹಸಂಗಮ ಕೋಶಾಧಿಕಾರಿ ಪ್ರಕಾಶ್ ಕೊಡೆಂಕಿರಿ ವಂದಿಸಿದರು. ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಹಾಗೂ ಪತ್ರಕರ್ತ ನಾ.ಕಾರಂತ ಪೆರಾಜೆ ನಿರೂಪಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…