ಸುದ್ದಿಗಳು

ಆರೋಗ್ಯವಂತ ಸಮಾಜಕ್ಕಾಗಿ ಸಾವಯವ ಬದುಕು ಅನಿವಾರ್ಯ-ಸಾವಯವ ಹಬ್ಬ ವಿಚಾರಗೋಷ್ಠಿಯಲ್ಲಿ ಸಂಶುದ್ಧೀನ್ ಸಂಪ್ಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: ರಾಸಾಯನಿಕ ಬಳಕೆಯಿಂದಾಗಿ ನಾವು ಸೇವಿಸುವ ಪ್ರತಿಯೊಂದು ಆಹಾರ ಪದಾರ್ಥಗಳು ವಿಷಮಯವಾಗಿದ್ದು, ಹಲವಾರು ರೋಗಗಳಿಗೆ ಕಾರಣವಾಗುತ್ತಿದೆ. ಆರೋಗ್ಯವಂತ ಸಮಾಜಕ್ಕಾಗಿ ಸಾವಯವ ಬದುಕು ಅನಿವಾರ್ಯವಾಗಿದೆ ಎಂದು ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಂಶುದ್ಧೀನ್ ಸಂಪ್ಯ ಹೇಳಿದರು.

Advertisement

ಅವರು ಶನಿವಾರ ನವಚೇತನ ಸ್ನೇಹಸಂಗಮ ಪುತ್ತೂರು, ಜೆಸಿಐ ಪುತ್ತೂರು ಇವುಗಳ ಆಯೋಜನೆಯಲ್ಲಿ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ 2 ದಿನಗಳ ಕಾಲ ನಡೆಯುತ್ತಿರುವ ಸಾವಯವ ಹಬ್ಬದಲ್ಲಿನ ವಿಚಾರಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿಂದಿನ ಜನರು ಸಾವಯವ ಪದ್ದತಿಯನ್ನು ಮಾತ್ರ ಅಳವಡಿಸಿಕೊಂಡಿದ್ದ ಕಾರಣ ಆರೋಗ್ಯವಂತರಾಗಿ ದೀರ್ಘಾಯ್ಯುಷಿಗಳಾಗಿ ಬದುಕಿದ್ದರು. ಆದರೆ ಇಂದಿನ ಜನಾಂಗ ಹೆಚ್ಚಿನ ಮಂದಿ ಅನಾರೋಗ್ಯಕ್ಕೆ ತುತ್ತಾಗುತ್ತಿರುವುದು ಕಂಡು ಬರುತ್ತದೆ. ಇದಕ್ಕೆಲ್ಲಾ ವಿಷಕಾರಕ ಆಹಾರ ಸೇವನೆಯೂ ಮುಖ್ಯ ಕಾರಣವಾಗಿದ್ದು, ಇದನ್ನು ತಡೆಯುವ ಪ್ರಯತ್ನಗಳಾಗಬೇಕು. ಸಾವಯವ ಆಹಾರ ಸೇವನೆ ಗುರಿ ನಮ್ಮದಾಗಬೇಕು ಎಂದರು.

`ಸಾವಯವ ಬದುಕು’ ಕುರಿತು ವಿಷಯ ಮಂಡಿಸಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೃಷಿಕ ವಿಶ್ವೇಶ್ವರ ಸಜ್ಜನ ಅವರು ಕೃಷಿ ಭೂಮಿಯು ಕೃಷಿಕನಿಗೆ ದೇವಾಲಯವಿದ್ದಂತೆ. ಕೃಷಿ ಕೆಲಸ ಎಂದಿಗೂ ಅವಮಾನಕಾರಿಯಲ್ಲ. ಅದೊಂದು ಅಭಿಮಾನವಾಗಿದೆ. ಆದರೆ ಕೃಷಿಕರನ್ನು ನೋಡುವ ದೃಷ್ಠಿಕೋನವು ಬದಲಾಗಬೇಕಾದ ಅನಿವಾರ್ಯತೆಯಿದೆ. ರೈತನ ಬೆಳೆಗೆ ಆತನೇ ಬೆಲೆ ನಿಗದಿಪಡಿಸುವ ವಾತಾವರಣವನ್ನು ಸೃಷ್ಠಿಸಬೇಕಾಗಿದೆ ಎಂದರು.

`ಸಾವಯವ ಕೃಷಿ ವೈವಿದ್ಯ’ ಕುರಿತು ವಿಷಯ ಮಂಡಿಸಿದ ಕೃಷಿಕ ಮಡಿಕೇರಿಯ ಸಿವಿಲ್ ಇಂಜಿನಿಯರ್ ಶಿವಕುಮಾರ ಮಾತನಾಡಿ ಕೃತಿಯ ವಿವಿಧ ಆಯಾಮಗಳ ಬಗ್ಗೆ ವಿವರಿಸಿದರು. ಹಲವು ಕೃಷಿ ಅಧ್ಯಯನಕಾರರು, ತಜ್ಞರ ಬಗ್ಗೆ ವಿವರ ನೀಡಿದ ಅವರು ಕೃಷಿಯು ಎಂದಿಗೂ ನಮ್ಮನ್ನು ಸೋಲಿಸುವುದಿಲ್ಲ ಎಂದು ತಿಳಿಸಿದರು.  ಈ ಸಂದರ್ಭದಲ್ಲಿ ಸಾಂಪ್ರದಾಯಿಕ ಭತ್ತದ ಕೃಷಿಕ ಕೊಡಿಪ್ಪಾಡಿಯ ರಘುಪತಿ ಏರ್ಕಡಿತ್ತಾಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಅಂಕಣಕಾರ, ಲೇಖಕ ನಾ. ಕಾರಂತ ಪೆರಾಜೆ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!

ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…

22 hours ago

ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ

ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…

22 hours ago

ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ

ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…

22 hours ago

ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ

ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…

22 hours ago

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ

ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…

22 hours ago