ಸುದ್ದಿಗಳು

ಆರೋಗ್ಯವಂತ ಸಮಾಜಕ್ಕಾಗಿ ಸಾವಯವ ಬದುಕು ಅನಿವಾರ್ಯ-ಸಾವಯವ ಹಬ್ಬ ವಿಚಾರಗೋಷ್ಠಿಯಲ್ಲಿ ಸಂಶುದ್ಧೀನ್ ಸಂಪ್ಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: ರಾಸಾಯನಿಕ ಬಳಕೆಯಿಂದಾಗಿ ನಾವು ಸೇವಿಸುವ ಪ್ರತಿಯೊಂದು ಆಹಾರ ಪದಾರ್ಥಗಳು ವಿಷಮಯವಾಗಿದ್ದು, ಹಲವಾರು ರೋಗಗಳಿಗೆ ಕಾರಣವಾಗುತ್ತಿದೆ. ಆರೋಗ್ಯವಂತ ಸಮಾಜಕ್ಕಾಗಿ ಸಾವಯವ ಬದುಕು ಅನಿವಾರ್ಯವಾಗಿದೆ ಎಂದು ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಂಶುದ್ಧೀನ್ ಸಂಪ್ಯ ಹೇಳಿದರು.

Advertisement
Advertisement

ಅವರು ಶನಿವಾರ ನವಚೇತನ ಸ್ನೇಹಸಂಗಮ ಪುತ್ತೂರು, ಜೆಸಿಐ ಪುತ್ತೂರು ಇವುಗಳ ಆಯೋಜನೆಯಲ್ಲಿ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ 2 ದಿನಗಳ ಕಾಲ ನಡೆಯುತ್ತಿರುವ ಸಾವಯವ ಹಬ್ಬದಲ್ಲಿನ ವಿಚಾರಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿಂದಿನ ಜನರು ಸಾವಯವ ಪದ್ದತಿಯನ್ನು ಮಾತ್ರ ಅಳವಡಿಸಿಕೊಂಡಿದ್ದ ಕಾರಣ ಆರೋಗ್ಯವಂತರಾಗಿ ದೀರ್ಘಾಯ್ಯುಷಿಗಳಾಗಿ ಬದುಕಿದ್ದರು. ಆದರೆ ಇಂದಿನ ಜನಾಂಗ ಹೆಚ್ಚಿನ ಮಂದಿ ಅನಾರೋಗ್ಯಕ್ಕೆ ತುತ್ತಾಗುತ್ತಿರುವುದು ಕಂಡು ಬರುತ್ತದೆ. ಇದಕ್ಕೆಲ್ಲಾ ವಿಷಕಾರಕ ಆಹಾರ ಸೇವನೆಯೂ ಮುಖ್ಯ ಕಾರಣವಾಗಿದ್ದು, ಇದನ್ನು ತಡೆಯುವ ಪ್ರಯತ್ನಗಳಾಗಬೇಕು. ಸಾವಯವ ಆಹಾರ ಸೇವನೆ ಗುರಿ ನಮ್ಮದಾಗಬೇಕು ಎಂದರು.

`ಸಾವಯವ ಬದುಕು’ ಕುರಿತು ವಿಷಯ ಮಂಡಿಸಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೃಷಿಕ ವಿಶ್ವೇಶ್ವರ ಸಜ್ಜನ ಅವರು ಕೃಷಿ ಭೂಮಿಯು ಕೃಷಿಕನಿಗೆ ದೇವಾಲಯವಿದ್ದಂತೆ. ಕೃಷಿ ಕೆಲಸ ಎಂದಿಗೂ ಅವಮಾನಕಾರಿಯಲ್ಲ. ಅದೊಂದು ಅಭಿಮಾನವಾಗಿದೆ. ಆದರೆ ಕೃಷಿಕರನ್ನು ನೋಡುವ ದೃಷ್ಠಿಕೋನವು ಬದಲಾಗಬೇಕಾದ ಅನಿವಾರ್ಯತೆಯಿದೆ. ರೈತನ ಬೆಳೆಗೆ ಆತನೇ ಬೆಲೆ ನಿಗದಿಪಡಿಸುವ ವಾತಾವರಣವನ್ನು ಸೃಷ್ಠಿಸಬೇಕಾಗಿದೆ ಎಂದರು.

`ಸಾವಯವ ಕೃಷಿ ವೈವಿದ್ಯ’ ಕುರಿತು ವಿಷಯ ಮಂಡಿಸಿದ ಕೃಷಿಕ ಮಡಿಕೇರಿಯ ಸಿವಿಲ್ ಇಂಜಿನಿಯರ್ ಶಿವಕುಮಾರ ಮಾತನಾಡಿ ಕೃತಿಯ ವಿವಿಧ ಆಯಾಮಗಳ ಬಗ್ಗೆ ವಿವರಿಸಿದರು. ಹಲವು ಕೃಷಿ ಅಧ್ಯಯನಕಾರರು, ತಜ್ಞರ ಬಗ್ಗೆ ವಿವರ ನೀಡಿದ ಅವರು ಕೃಷಿಯು ಎಂದಿಗೂ ನಮ್ಮನ್ನು ಸೋಲಿಸುವುದಿಲ್ಲ ಎಂದು ತಿಳಿಸಿದರು.  ಈ ಸಂದರ್ಭದಲ್ಲಿ ಸಾಂಪ್ರದಾಯಿಕ ಭತ್ತದ ಕೃಷಿಕ ಕೊಡಿಪ್ಪಾಡಿಯ ರಘುಪತಿ ಏರ್ಕಡಿತ್ತಾಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಅಂಕಣಕಾರ, ಲೇಖಕ ನಾ. ಕಾರಂತ ಪೆರಾಜೆ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-05-2025 | ಮೇ. 31ರಿಂದ ಕಡಿಮೆಯಾಗಿ ಜೂನ್ 3 ರ ತನಕ ಸಾಮಾನ್ಯ ಮಳೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…

8 hours ago

ಶಶಿ ಆದಿತ್ಯ ಯೋಗ, ಈ 5 ರಾಶಿಗೆ ಬೇಡವೆಂದರೂ ಲಾಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490  

11 hours ago

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…

23 hours ago

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…

1 day ago

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…

1 day ago

ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?

ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…

1 day ago