Advertisement
ಸುದ್ದಿಗಳು

ಆರೋಗ್ಯವಂತ ಸಮಾಜಕ್ಕಾಗಿ ಸಾವಯವ ಬದುಕು ಅನಿವಾರ್ಯ-ಸಾವಯವ ಹಬ್ಬ ವಿಚಾರಗೋಷ್ಠಿಯಲ್ಲಿ ಸಂಶುದ್ಧೀನ್ ಸಂಪ್ಯ

Share

ಪುತ್ತೂರು: ರಾಸಾಯನಿಕ ಬಳಕೆಯಿಂದಾಗಿ ನಾವು ಸೇವಿಸುವ ಪ್ರತಿಯೊಂದು ಆಹಾರ ಪದಾರ್ಥಗಳು ವಿಷಮಯವಾಗಿದ್ದು, ಹಲವಾರು ರೋಗಗಳಿಗೆ ಕಾರಣವಾಗುತ್ತಿದೆ. ಆರೋಗ್ಯವಂತ ಸಮಾಜಕ್ಕಾಗಿ ಸಾವಯವ ಬದುಕು ಅನಿವಾರ್ಯವಾಗಿದೆ ಎಂದು ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಂಶುದ್ಧೀನ್ ಸಂಪ್ಯ ಹೇಳಿದರು.

ಅವರು ಶನಿವಾರ ನವಚೇತನ ಸ್ನೇಹಸಂಗಮ ಪುತ್ತೂರು, ಜೆಸಿಐ ಪುತ್ತೂರು ಇವುಗಳ ಆಯೋಜನೆಯಲ್ಲಿ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ 2 ದಿನಗಳ ಕಾಲ ನಡೆಯುತ್ತಿರುವ ಸಾವಯವ ಹಬ್ಬದಲ್ಲಿನ ವಿಚಾರಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿಂದಿನ ಜನರು ಸಾವಯವ ಪದ್ದತಿಯನ್ನು ಮಾತ್ರ ಅಳವಡಿಸಿಕೊಂಡಿದ್ದ ಕಾರಣ ಆರೋಗ್ಯವಂತರಾಗಿ ದೀರ್ಘಾಯ್ಯುಷಿಗಳಾಗಿ ಬದುಕಿದ್ದರು. ಆದರೆ ಇಂದಿನ ಜನಾಂಗ ಹೆಚ್ಚಿನ ಮಂದಿ ಅನಾರೋಗ್ಯಕ್ಕೆ ತುತ್ತಾಗುತ್ತಿರುವುದು ಕಂಡು ಬರುತ್ತದೆ. ಇದಕ್ಕೆಲ್ಲಾ ವಿಷಕಾರಕ ಆಹಾರ ಸೇವನೆಯೂ ಮುಖ್ಯ ಕಾರಣವಾಗಿದ್ದು, ಇದನ್ನು ತಡೆಯುವ ಪ್ರಯತ್ನಗಳಾಗಬೇಕು. ಸಾವಯವ ಆಹಾರ ಸೇವನೆ ಗುರಿ ನಮ್ಮದಾಗಬೇಕು ಎಂದರು.

`ಸಾವಯವ ಬದುಕು’ ಕುರಿತು ವಿಷಯ ಮಂಡಿಸಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೃಷಿಕ ವಿಶ್ವೇಶ್ವರ ಸಜ್ಜನ ಅವರು ಕೃಷಿ ಭೂಮಿಯು ಕೃಷಿಕನಿಗೆ ದೇವಾಲಯವಿದ್ದಂತೆ. ಕೃಷಿ ಕೆಲಸ ಎಂದಿಗೂ ಅವಮಾನಕಾರಿಯಲ್ಲ. ಅದೊಂದು ಅಭಿಮಾನವಾಗಿದೆ. ಆದರೆ ಕೃಷಿಕರನ್ನು ನೋಡುವ ದೃಷ್ಠಿಕೋನವು ಬದಲಾಗಬೇಕಾದ ಅನಿವಾರ್ಯತೆಯಿದೆ. ರೈತನ ಬೆಳೆಗೆ ಆತನೇ ಬೆಲೆ ನಿಗದಿಪಡಿಸುವ ವಾತಾವರಣವನ್ನು ಸೃಷ್ಠಿಸಬೇಕಾಗಿದೆ ಎಂದರು.

`ಸಾವಯವ ಕೃಷಿ ವೈವಿದ್ಯ’ ಕುರಿತು ವಿಷಯ ಮಂಡಿಸಿದ ಕೃಷಿಕ ಮಡಿಕೇರಿಯ ಸಿವಿಲ್ ಇಂಜಿನಿಯರ್ ಶಿವಕುಮಾರ ಮಾತನಾಡಿ ಕೃತಿಯ ವಿವಿಧ ಆಯಾಮಗಳ ಬಗ್ಗೆ ವಿವರಿಸಿದರು. ಹಲವು ಕೃಷಿ ಅಧ್ಯಯನಕಾರರು, ತಜ್ಞರ ಬಗ್ಗೆ ವಿವರ ನೀಡಿದ ಅವರು ಕೃಷಿಯು ಎಂದಿಗೂ ನಮ್ಮನ್ನು ಸೋಲಿಸುವುದಿಲ್ಲ ಎಂದು ತಿಳಿಸಿದರು.  ಈ ಸಂದರ್ಭದಲ್ಲಿ ಸಾಂಪ್ರದಾಯಿಕ ಭತ್ತದ ಕೃಷಿಕ ಕೊಡಿಪ್ಪಾಡಿಯ ರಘುಪತಿ ಏರ್ಕಡಿತ್ತಾಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಅಂಕಣಕಾರ, ಲೇಖಕ ನಾ. ಕಾರಂತ ಪೆರಾಜೆ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

7 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

13 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

13 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

13 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

13 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

13 hours ago