Advertisement
ಸುದ್ದಿಗಳು

ಆರೋಗ್ಯವಂತ ಸಮಾಜಕ್ಕಾಗಿ ಸಾವಯವ ಬದುಕು ಅನಿವಾರ್ಯ-ಸಾವಯವ ಹಬ್ಬ ವಿಚಾರಗೋಷ್ಠಿಯಲ್ಲಿ ಸಂಶುದ್ಧೀನ್ ಸಂಪ್ಯ

Share

ಪುತ್ತೂರು: ರಾಸಾಯನಿಕ ಬಳಕೆಯಿಂದಾಗಿ ನಾವು ಸೇವಿಸುವ ಪ್ರತಿಯೊಂದು ಆಹಾರ ಪದಾರ್ಥಗಳು ವಿಷಮಯವಾಗಿದ್ದು, ಹಲವಾರು ರೋಗಗಳಿಗೆ ಕಾರಣವಾಗುತ್ತಿದೆ. ಆರೋಗ್ಯವಂತ ಸಮಾಜಕ್ಕಾಗಿ ಸಾವಯವ ಬದುಕು ಅನಿವಾರ್ಯವಾಗಿದೆ ಎಂದು ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಂಶುದ್ಧೀನ್ ಸಂಪ್ಯ ಹೇಳಿದರು.

ಅವರು ಶನಿವಾರ ನವಚೇತನ ಸ್ನೇಹಸಂಗಮ ಪುತ್ತೂರು, ಜೆಸಿಐ ಪುತ್ತೂರು ಇವುಗಳ ಆಯೋಜನೆಯಲ್ಲಿ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ 2 ದಿನಗಳ ಕಾಲ ನಡೆಯುತ್ತಿರುವ ಸಾವಯವ ಹಬ್ಬದಲ್ಲಿನ ವಿಚಾರಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿಂದಿನ ಜನರು ಸಾವಯವ ಪದ್ದತಿಯನ್ನು ಮಾತ್ರ ಅಳವಡಿಸಿಕೊಂಡಿದ್ದ ಕಾರಣ ಆರೋಗ್ಯವಂತರಾಗಿ ದೀರ್ಘಾಯ್ಯುಷಿಗಳಾಗಿ ಬದುಕಿದ್ದರು. ಆದರೆ ಇಂದಿನ ಜನಾಂಗ ಹೆಚ್ಚಿನ ಮಂದಿ ಅನಾರೋಗ್ಯಕ್ಕೆ ತುತ್ತಾಗುತ್ತಿರುವುದು ಕಂಡು ಬರುತ್ತದೆ. ಇದಕ್ಕೆಲ್ಲಾ ವಿಷಕಾರಕ ಆಹಾರ ಸೇವನೆಯೂ ಮುಖ್ಯ ಕಾರಣವಾಗಿದ್ದು, ಇದನ್ನು ತಡೆಯುವ ಪ್ರಯತ್ನಗಳಾಗಬೇಕು. ಸಾವಯವ ಆಹಾರ ಸೇವನೆ ಗುರಿ ನಮ್ಮದಾಗಬೇಕು ಎಂದರು.

`ಸಾವಯವ ಬದುಕು’ ಕುರಿತು ವಿಷಯ ಮಂಡಿಸಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೃಷಿಕ ವಿಶ್ವೇಶ್ವರ ಸಜ್ಜನ ಅವರು ಕೃಷಿ ಭೂಮಿಯು ಕೃಷಿಕನಿಗೆ ದೇವಾಲಯವಿದ್ದಂತೆ. ಕೃಷಿ ಕೆಲಸ ಎಂದಿಗೂ ಅವಮಾನಕಾರಿಯಲ್ಲ. ಅದೊಂದು ಅಭಿಮಾನವಾಗಿದೆ. ಆದರೆ ಕೃಷಿಕರನ್ನು ನೋಡುವ ದೃಷ್ಠಿಕೋನವು ಬದಲಾಗಬೇಕಾದ ಅನಿವಾರ್ಯತೆಯಿದೆ. ರೈತನ ಬೆಳೆಗೆ ಆತನೇ ಬೆಲೆ ನಿಗದಿಪಡಿಸುವ ವಾತಾವರಣವನ್ನು ಸೃಷ್ಠಿಸಬೇಕಾಗಿದೆ ಎಂದರು.

`ಸಾವಯವ ಕೃಷಿ ವೈವಿದ್ಯ’ ಕುರಿತು ವಿಷಯ ಮಂಡಿಸಿದ ಕೃಷಿಕ ಮಡಿಕೇರಿಯ ಸಿವಿಲ್ ಇಂಜಿನಿಯರ್ ಶಿವಕುಮಾರ ಮಾತನಾಡಿ ಕೃತಿಯ ವಿವಿಧ ಆಯಾಮಗಳ ಬಗ್ಗೆ ವಿವರಿಸಿದರು. ಹಲವು ಕೃಷಿ ಅಧ್ಯಯನಕಾರರು, ತಜ್ಞರ ಬಗ್ಗೆ ವಿವರ ನೀಡಿದ ಅವರು ಕೃಷಿಯು ಎಂದಿಗೂ ನಮ್ಮನ್ನು ಸೋಲಿಸುವುದಿಲ್ಲ ಎಂದು ತಿಳಿಸಿದರು.  ಈ ಸಂದರ್ಭದಲ್ಲಿ ಸಾಂಪ್ರದಾಯಿಕ ಭತ್ತದ ಕೃಷಿಕ ಕೊಡಿಪ್ಪಾಡಿಯ ರಘುಪತಿ ಏರ್ಕಡಿತ್ತಾಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಅಂಕಣಕಾರ, ಲೇಖಕ ನಾ. ಕಾರಂತ ಪೆರಾಜೆ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

6 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

6 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

6 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

6 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

16 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

17 hours ago