Advertisement
ಸುದ್ದಿಗಳು

ಆರೋಗ್ಯವಂತ ಸಮಾಜಕ್ಕಾಗಿ ಸಾವಯವ ಬದುಕು ಅನಿವಾರ್ಯ-ಸಾವಯವ ಹಬ್ಬ ವಿಚಾರಗೋಷ್ಠಿಯಲ್ಲಿ ಸಂಶುದ್ಧೀನ್ ಸಂಪ್ಯ

Share

ಪುತ್ತೂರು: ರಾಸಾಯನಿಕ ಬಳಕೆಯಿಂದಾಗಿ ನಾವು ಸೇವಿಸುವ ಪ್ರತಿಯೊಂದು ಆಹಾರ ಪದಾರ್ಥಗಳು ವಿಷಮಯವಾಗಿದ್ದು, ಹಲವಾರು ರೋಗಗಳಿಗೆ ಕಾರಣವಾಗುತ್ತಿದೆ. ಆರೋಗ್ಯವಂತ ಸಮಾಜಕ್ಕಾಗಿ ಸಾವಯವ ಬದುಕು ಅನಿವಾರ್ಯವಾಗಿದೆ ಎಂದು ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಂಶುದ್ಧೀನ್ ಸಂಪ್ಯ ಹೇಳಿದರು.

ಅವರು ಶನಿವಾರ ನವಚೇತನ ಸ್ನೇಹಸಂಗಮ ಪುತ್ತೂರು, ಜೆಸಿಐ ಪುತ್ತೂರು ಇವುಗಳ ಆಯೋಜನೆಯಲ್ಲಿ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ 2 ದಿನಗಳ ಕಾಲ ನಡೆಯುತ್ತಿರುವ ಸಾವಯವ ಹಬ್ಬದಲ್ಲಿನ ವಿಚಾರಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿಂದಿನ ಜನರು ಸಾವಯವ ಪದ್ದತಿಯನ್ನು ಮಾತ್ರ ಅಳವಡಿಸಿಕೊಂಡಿದ್ದ ಕಾರಣ ಆರೋಗ್ಯವಂತರಾಗಿ ದೀರ್ಘಾಯ್ಯುಷಿಗಳಾಗಿ ಬದುಕಿದ್ದರು. ಆದರೆ ಇಂದಿನ ಜನಾಂಗ ಹೆಚ್ಚಿನ ಮಂದಿ ಅನಾರೋಗ್ಯಕ್ಕೆ ತುತ್ತಾಗುತ್ತಿರುವುದು ಕಂಡು ಬರುತ್ತದೆ. ಇದಕ್ಕೆಲ್ಲಾ ವಿಷಕಾರಕ ಆಹಾರ ಸೇವನೆಯೂ ಮುಖ್ಯ ಕಾರಣವಾಗಿದ್ದು, ಇದನ್ನು ತಡೆಯುವ ಪ್ರಯತ್ನಗಳಾಗಬೇಕು. ಸಾವಯವ ಆಹಾರ ಸೇವನೆ ಗುರಿ ನಮ್ಮದಾಗಬೇಕು ಎಂದರು.

`ಸಾವಯವ ಬದುಕು’ ಕುರಿತು ವಿಷಯ ಮಂಡಿಸಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೃಷಿಕ ವಿಶ್ವೇಶ್ವರ ಸಜ್ಜನ ಅವರು ಕೃಷಿ ಭೂಮಿಯು ಕೃಷಿಕನಿಗೆ ದೇವಾಲಯವಿದ್ದಂತೆ. ಕೃಷಿ ಕೆಲಸ ಎಂದಿಗೂ ಅವಮಾನಕಾರಿಯಲ್ಲ. ಅದೊಂದು ಅಭಿಮಾನವಾಗಿದೆ. ಆದರೆ ಕೃಷಿಕರನ್ನು ನೋಡುವ ದೃಷ್ಠಿಕೋನವು ಬದಲಾಗಬೇಕಾದ ಅನಿವಾರ್ಯತೆಯಿದೆ. ರೈತನ ಬೆಳೆಗೆ ಆತನೇ ಬೆಲೆ ನಿಗದಿಪಡಿಸುವ ವಾತಾವರಣವನ್ನು ಸೃಷ್ಠಿಸಬೇಕಾಗಿದೆ ಎಂದರು.

`ಸಾವಯವ ಕೃಷಿ ವೈವಿದ್ಯ’ ಕುರಿತು ವಿಷಯ ಮಂಡಿಸಿದ ಕೃಷಿಕ ಮಡಿಕೇರಿಯ ಸಿವಿಲ್ ಇಂಜಿನಿಯರ್ ಶಿವಕುಮಾರ ಮಾತನಾಡಿ ಕೃತಿಯ ವಿವಿಧ ಆಯಾಮಗಳ ಬಗ್ಗೆ ವಿವರಿಸಿದರು. ಹಲವು ಕೃಷಿ ಅಧ್ಯಯನಕಾರರು, ತಜ್ಞರ ಬಗ್ಗೆ ವಿವರ ನೀಡಿದ ಅವರು ಕೃಷಿಯು ಎಂದಿಗೂ ನಮ್ಮನ್ನು ಸೋಲಿಸುವುದಿಲ್ಲ ಎಂದು ತಿಳಿಸಿದರು.  ಈ ಸಂದರ್ಭದಲ್ಲಿ ಸಾಂಪ್ರದಾಯಿಕ ಭತ್ತದ ಕೃಷಿಕ ಕೊಡಿಪ್ಪಾಡಿಯ ರಘುಪತಿ ಏರ್ಕಡಿತ್ತಾಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಅಂಕಣಕಾರ, ಲೇಖಕ ನಾ. ಕಾರಂತ ಪೆರಾಜೆ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

2 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

8 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

20 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

20 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 day ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago