ಪುತ್ತೂರು: ರಾಸಾಯನಿಕ ಬಳಕೆಯಿಂದಾಗಿ ನಾವು ಸೇವಿಸುವ ಪ್ರತಿಯೊಂದು ಆಹಾರ ಪದಾರ್ಥಗಳು ವಿಷಮಯವಾಗಿದ್ದು, ಹಲವಾರು ರೋಗಗಳಿಗೆ ಕಾರಣವಾಗುತ್ತಿದೆ. ಆರೋಗ್ಯವಂತ ಸಮಾಜಕ್ಕಾಗಿ ಸಾವಯವ ಬದುಕು ಅನಿವಾರ್ಯವಾಗಿದೆ ಎಂದು ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಂಶುದ್ಧೀನ್ ಸಂಪ್ಯ ಹೇಳಿದರು.
ಅವರು ಶನಿವಾರ ನವಚೇತನ ಸ್ನೇಹಸಂಗಮ ಪುತ್ತೂರು, ಜೆಸಿಐ ಪುತ್ತೂರು ಇವುಗಳ ಆಯೋಜನೆಯಲ್ಲಿ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ 2 ದಿನಗಳ ಕಾಲ ನಡೆಯುತ್ತಿರುವ ಸಾವಯವ ಹಬ್ಬದಲ್ಲಿನ ವಿಚಾರಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿಂದಿನ ಜನರು ಸಾವಯವ ಪದ್ದತಿಯನ್ನು ಮಾತ್ರ ಅಳವಡಿಸಿಕೊಂಡಿದ್ದ ಕಾರಣ ಆರೋಗ್ಯವಂತರಾಗಿ ದೀರ್ಘಾಯ್ಯುಷಿಗಳಾಗಿ ಬದುಕಿದ್ದರು. ಆದರೆ ಇಂದಿನ ಜನಾಂಗ ಹೆಚ್ಚಿನ ಮಂದಿ ಅನಾರೋಗ್ಯಕ್ಕೆ ತುತ್ತಾಗುತ್ತಿರುವುದು ಕಂಡು ಬರುತ್ತದೆ. ಇದಕ್ಕೆಲ್ಲಾ ವಿಷಕಾರಕ ಆಹಾರ ಸೇವನೆಯೂ ಮುಖ್ಯ ಕಾರಣವಾಗಿದ್ದು, ಇದನ್ನು ತಡೆಯುವ ಪ್ರಯತ್ನಗಳಾಗಬೇಕು. ಸಾವಯವ ಆಹಾರ ಸೇವನೆ ಗುರಿ ನಮ್ಮದಾಗಬೇಕು ಎಂದರು.
`ಸಾವಯವ ಬದುಕು’ ಕುರಿತು ವಿಷಯ ಮಂಡಿಸಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೃಷಿಕ ವಿಶ್ವೇಶ್ವರ ಸಜ್ಜನ ಅವರು ಕೃಷಿ ಭೂಮಿಯು ಕೃಷಿಕನಿಗೆ ದೇವಾಲಯವಿದ್ದಂತೆ. ಕೃಷಿ ಕೆಲಸ ಎಂದಿಗೂ ಅವಮಾನಕಾರಿಯಲ್ಲ. ಅದೊಂದು ಅಭಿಮಾನವಾಗಿದೆ. ಆದರೆ ಕೃಷಿಕರನ್ನು ನೋಡುವ ದೃಷ್ಠಿಕೋನವು ಬದಲಾಗಬೇಕಾದ ಅನಿವಾರ್ಯತೆಯಿದೆ. ರೈತನ ಬೆಳೆಗೆ ಆತನೇ ಬೆಲೆ ನಿಗದಿಪಡಿಸುವ ವಾತಾವರಣವನ್ನು ಸೃಷ್ಠಿಸಬೇಕಾಗಿದೆ ಎಂದರು.
`ಸಾವಯವ ಕೃಷಿ ವೈವಿದ್ಯ’ ಕುರಿತು ವಿಷಯ ಮಂಡಿಸಿದ ಕೃಷಿಕ ಮಡಿಕೇರಿಯ ಸಿವಿಲ್ ಇಂಜಿನಿಯರ್ ಶಿವಕುಮಾರ ಮಾತನಾಡಿ ಕೃತಿಯ ವಿವಿಧ ಆಯಾಮಗಳ ಬಗ್ಗೆ ವಿವರಿಸಿದರು. ಹಲವು ಕೃಷಿ ಅಧ್ಯಯನಕಾರರು, ತಜ್ಞರ ಬಗ್ಗೆ ವಿವರ ನೀಡಿದ ಅವರು ಕೃಷಿಯು ಎಂದಿಗೂ ನಮ್ಮನ್ನು ಸೋಲಿಸುವುದಿಲ್ಲ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಾಂಪ್ರದಾಯಿಕ ಭತ್ತದ ಕೃಷಿಕ ಕೊಡಿಪ್ಪಾಡಿಯ ರಘುಪತಿ ಏರ್ಕಡಿತ್ತಾಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಅಂಕಣಕಾರ, ಲೇಖಕ ನಾ. ಕಾರಂತ ಪೆರಾಜೆ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…