Advertisement
ಸುದ್ದಿಗಳು

ಆರ್ಟಿಕಲ್ 370 ರದ್ದತಿ ದೇಶದ ಅಭಿವೃದ್ಧಿಗೆ ಪೂರಕ

Share

ಪುತ್ತೂರು: ಭಾರತದ ಸಂವಿಧಾನ ಪ್ರಜಾಪ್ರಭುತ್ವದ ಶ್ರೇಷ್ಟ ಗ್ರಂಥವಾಗಿದೆ. ಸ್ವಾತಂತ್ರ್ಯ, ಸಮಾನತೆ, ಆತ್ಮಗೌರವ ಮತ್ತು ನ್ಯಾಯ ವ್ಯವಸ್ಥೆಯು ಇದರ ಆಧಾರ ಸ್ತಂಭಗಳು. ಇಷ್ಟಾದರೂ ಭಾರತದಲ್ಲಿ ಏಕತೆಯನ್ನು ಸಾಧಿಸಲು ಕಾಶ್ಮೀರ ವಿಚಾರ ಸದಾ ಅಡ್ಡಿಯೇ ಆಗಿತ್ತು. ಹೀಗಾಗಿ ಕೇಂದ್ರ ಸರ್ಕಾರ ಆರ್ಟಿಕಲ್ 370 ವಿಧಿಯನ್ನು ರದ್ದುಗೊಳಿಸಿ ದೇಶದಲ್ಲಿ ದೊಡ್ಡ ಮಟ್ಟದಲ್ಲಾಗುತ್ತಿದ್ದ ಅಸಮಾನತೆಯನ್ನು ಹೋಗಲಾಡಿಸಿದೆ ಎಂದು ಕರ್ನಾಟಕ ವಿಧಾನ ಸಭಾ ಶಾಸಕ ಪಿ. ರಾಜೀವ ಕುಡುಚಿ ಹೇಳಿದರು.

ಅವರು  ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರದಲ್ಲಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ, ಐಕ್ಯುಎಸಿ ಘಟಕದ ಆಶ್ರಯದಲ್ಲಿ ಪೊಲಿಟಿಕಲ್ ಫೋರಂ, ಸ್ನಾತಕೋತ್ತರ ವಾಣಿಜ್ಯ ವಿಭಾಗ, ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ಆಯೋಜಿಸಿದ್ದ ‘ಆರ್ಟಿಕಲ್ 370’ ಎಂಬ ವಿಷಯದ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸಕರಾಗಿ ಮಾತನಾಡಿದರು.

ಭಾರತ ಒಗ್ಗೂಡುವಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲರ ಕೆಲಸ ದೊಡ್ಡದು. ದೇಶ ವಿಭಜನೆಯ ಸಂದರ್ಭದಲ್ಲಾದ ಕೆಲ ತಪ್ಪುಗಳು ಕಾಶ್ಮೀರಕ್ಕೆ ವಿಶೇಷ ವಿಧಿಯನ್ನು ಕಲ್ಪಿಸಿತ್ತು. ಇದು ಭಾರತದ ಏಕತೆಗೆ ಧಕ್ಕೆಯುಂಟು ಮಾಡುವುದರ ಜೊತೆಗೆ ಅಸಮಾನತೆಯನ್ನು ಸೃಷ್ಟಿಸಿತ್ತು. ಇವೆಲ್ಲವನ್ನು ಮನಗಂಡ ಕೇಂದ್ರ ಸರ್ಕಾರ ಆರ್ಟಿಕಲ್ 370 ವಿಧಿಯನ್ನು ರದ್ದುಗೊಳಿಸುವ ಐತಿಹಾಸಿಕ ನಿರ್ಧಾರ ಕೈಗೊಂಡು ಜನರ ಮೆಚ್ಚುಗೆಗೆ ಪಾತ್ರವಾಗಿದೆ. 370ನೇ ವಿಧಿಯ ರದ್ದತಿಯಿಂದ ದೇಶ ಏಕತೆಯ ಮಂತ್ರ ಜಪಿಸುವಂತಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪದವಿ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಶಂಕರ ನಾರಾಯಣ ಭಟ್ ಮಾತನಾಡಿ, ಈ ಹಿಂದೆ ಕಾಶ್ಮೀರಕ್ಕೆ ಅನುದಾನದ ಮಹಾಪೂರವೇ ಹರಿದು ಬಂದಿದ್ದರೂ ಅಭಿವೃದ್ಧಿ ಮಾತ್ರ ಮರೀಚಿಕೆಯಾಗಿತ್ತು. 370ನೇ ವಿಧಿಯ ಲಾಭ ಪಡೆದುಕೊಂಡ ಅಂದಿನ ಸರ್ಕಾರಗಳು ಇದನ್ನು ದುರುಪಯೋಗಪಡಿಸಿಕೊಂಡಿತ್ತು. 370ನೇ ವಿಧಿಯ ರದ್ದತಿಯಿಂದಾದರೂ ಕಾಶ್ಮೀರ ಪ್ರಗತಿ ಕಾಣುವಂತಾಗಲಿ ಎಂದು ಅಭಿಪ್ರಾಯಪಟ್ಟರು.

ವಿದ್ಯಾರ್ಥಿನಿ ದೀಪಾ ಪ್ರಸನ್ನ ಪ್ರಾರ್ಥಿಸಿದರು. ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಂಯೋಜಕಿ ಡಾ. ವಿಜಯ ಸರಸ್ವತಿ ಸ್ವಾಗತಿಸಿದರು. ಪೊಲಿಟಿಕಲ್ ಫೋರಂನ ಸಂಯೋಜಕಿ ಅನಿತಾ ಕಾಮತ್ ವಂದಿಸಿದರು. ಸ್ನಾತಕೋತ್ತರ ವಾಣಿಜ್ಯ ಉಪನ್ಯಾಸಕಿ ಲಕ್ಷ್ಮೀ ವಿ. ಭಟ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

2 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

4 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

11 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

18 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago