Advertisement
ಸುದ್ದಿಗಳು

ಆರ್ಥಿಕ ಕುಸಿತದಿಂದ ಕಾರ್ಮಿಕರ ಬದುಕು ಅತಂತ್ರ – ಆತಂಕ ವ್ಯಕ್ತಪಡಿಸಿದ ಕಾರ್ಮಿಕರ ಮುಖಂಡರು

Share

ಸುಳ್ಯ: ದೇಶದಲ್ಲಿ ಉಂಟಾಗಿರುವ ಆರ್ಥಿಕ ಕುಸಿತದಿಂದ ಕಾರ್ಮಿಕರ ಬದುಕು ಅತಂತ್ರವಾಗಿದೆ. ಸುಳ್ಯ ತಾಲೂಕು ಸೇರಿ ಎಲ್ಲಿಯೂ ಕೆಲಸವಿಲ್ಲದೆ ಕಾರ್ಮಿಕರ ಕುಟುಂಬಗಳಿಗೆ ಪ್ರತಿ ದಿನದ ಅನ್ನಕ್ಕೂ ಕುತ್ತು ಬಂದಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫಡರೇಶನ್ (ಸಿಐಟಿಯು) ಪ್ರಮುಖರು ಹೇಳಿದ್ದಾರೆ.

Advertisement
Advertisement
Advertisement
Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಐಟಿಯು ಸುಳ್ಯ ತಾಲೂಕು ಅಧ್ಯಕ್ಷ ಕೆ. ಪಿ. ಜಾನಿ ಕಲ್ಲುಗುಂಡಿ, ನಿರ್ಮಾಣ ವಲಯದಲ್ಲಿ ಕೆಲಸ ಇಲ್ಲದೆ ಕಾರ್ಮಿಕರ ಬದುಕು ಅತ್ಯಂತ ಕ್ಲಿಷ್ಟಕರವಾಗಿದೆ. ಕೆಲಸ ನಂಬಿ ವಿವಿಧ ಅಗತ್ಯತೆಗಳಿಗಾಗಿ ಸಾಲ ಮಾಡಿದವರು ಮರು ಪಾವತಿ ಮಾಡಲಾಗದೆ ಸಮಸ್ಯೆಯಲ್ಲಿ ಸಿಲುಕಿದ್ದಾರೆ. ಆದುದರಿಂದ ತಾಲೂಕಿನ ಕೆಲಸವನ್ನು ಆದಷ್ಟು ರಾಜ್ಯದ ಕಾರ್ಮಿಕರಿಗೇ ನೀಡಬೇಕು, ಪ್ರತಿ ಪಂಚಾಯತಿಗಳೂ ಉದ್ಯೋಗ ಖಾತರಿ ಕೆಲಸವನ್ನು ಕಾರ್ಮಿಕರ ಮೂಲಕವೇ ಮಾಡಿಸಬೇಕು. ಇದಕ್ಕೆ ಕೇರಳ ಮಾದರಿಯಲ್ಲಿ ಕಾರ್ಮಿಕರನ್ನು ಸೇರಿಸಿ ಉದ್ಯೋಗ ಖಾತರಿಯ ತಂಡವನ್ನು ರಚಿಸಬೇಕು. ವಿವಿಧ ಸ್ವಸಹಾಯ ಸಂಘಗಳು ಸಾಲ ವಸೂಲಿಯ ಸಂದರ್ಭದಲ್ಲಿ ಮಾನವೀಯತೆಯಿಂದ ನಡೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಸುಳ್ಯ ತಾಲೂಕಿನಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ವಲಯ ಹಲವು ಸಮಯದಿಂದ ಸಂಪೂರ್ಣ ಸ್ಥಬ್ದವಾಗಿದ್ದು ಬಹುತೇಕ ಮಂದಿ ಕೆಲಸವಿಲ್ಲದೆ ಅತಂತ್ರರಾಗಿದ್ದಾರೆ. ನೋಟ್ ಬ್ಯಾನ್, ಜಿಎಸ್ ಟಿ ಹೇರಿಕೆ ನಿರ್ಮಾಣ ವಲಯದ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂದು ಅವರು ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಅಧ್ಯಕ್ಷ ಹೆಚ್ಕೆ . ನಾಗರಾಜ್, ಕಾರ್ಮಿಕ ಮುಖಂಡರಾದ ಬಿಜು ಅಗಸ್ಟಿನ್, ಪುಟ್ಟಣ್ಣ. ಕೆ, ವಿ. ಗಣೇಶ್, ವಿ. ಆರ್. ಪ್ರಸಾದ್, ಮೋನಪ್ಪ, ನಾಗರಾಜ್ ಕಲ್ಲುಮುಟ್ಲು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

2 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

2 hours ago

ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು

ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…

2 hours ago

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

10 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

11 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

12 hours ago