Advertisement
ಸುದ್ದಿಗಳು

ಆರ್ಥಿಕ ಕುಸಿತದಿಂದ ಕಾರ್ಮಿಕರ ಬದುಕು ಅತಂತ್ರ – ಆತಂಕ ವ್ಯಕ್ತಪಡಿಸಿದ ಕಾರ್ಮಿಕರ ಮುಖಂಡರು

Share

ಸುಳ್ಯ: ದೇಶದಲ್ಲಿ ಉಂಟಾಗಿರುವ ಆರ್ಥಿಕ ಕುಸಿತದಿಂದ ಕಾರ್ಮಿಕರ ಬದುಕು ಅತಂತ್ರವಾಗಿದೆ. ಸುಳ್ಯ ತಾಲೂಕು ಸೇರಿ ಎಲ್ಲಿಯೂ ಕೆಲಸವಿಲ್ಲದೆ ಕಾರ್ಮಿಕರ ಕುಟುಂಬಗಳಿಗೆ ಪ್ರತಿ ದಿನದ ಅನ್ನಕ್ಕೂ ಕುತ್ತು ಬಂದಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫಡರೇಶನ್ (ಸಿಐಟಿಯು) ಪ್ರಮುಖರು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಐಟಿಯು ಸುಳ್ಯ ತಾಲೂಕು ಅಧ್ಯಕ್ಷ ಕೆ. ಪಿ. ಜಾನಿ ಕಲ್ಲುಗುಂಡಿ, ನಿರ್ಮಾಣ ವಲಯದಲ್ಲಿ ಕೆಲಸ ಇಲ್ಲದೆ ಕಾರ್ಮಿಕರ ಬದುಕು ಅತ್ಯಂತ ಕ್ಲಿಷ್ಟಕರವಾಗಿದೆ. ಕೆಲಸ ನಂಬಿ ವಿವಿಧ ಅಗತ್ಯತೆಗಳಿಗಾಗಿ ಸಾಲ ಮಾಡಿದವರು ಮರು ಪಾವತಿ ಮಾಡಲಾಗದೆ ಸಮಸ್ಯೆಯಲ್ಲಿ ಸಿಲುಕಿದ್ದಾರೆ. ಆದುದರಿಂದ ತಾಲೂಕಿನ ಕೆಲಸವನ್ನು ಆದಷ್ಟು ರಾಜ್ಯದ ಕಾರ್ಮಿಕರಿಗೇ ನೀಡಬೇಕು, ಪ್ರತಿ ಪಂಚಾಯತಿಗಳೂ ಉದ್ಯೋಗ ಖಾತರಿ ಕೆಲಸವನ್ನು ಕಾರ್ಮಿಕರ ಮೂಲಕವೇ ಮಾಡಿಸಬೇಕು. ಇದಕ್ಕೆ ಕೇರಳ ಮಾದರಿಯಲ್ಲಿ ಕಾರ್ಮಿಕರನ್ನು ಸೇರಿಸಿ ಉದ್ಯೋಗ ಖಾತರಿಯ ತಂಡವನ್ನು ರಚಿಸಬೇಕು. ವಿವಿಧ ಸ್ವಸಹಾಯ ಸಂಘಗಳು ಸಾಲ ವಸೂಲಿಯ ಸಂದರ್ಭದಲ್ಲಿ ಮಾನವೀಯತೆಯಿಂದ ನಡೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಸುಳ್ಯ ತಾಲೂಕಿನಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ವಲಯ ಹಲವು ಸಮಯದಿಂದ ಸಂಪೂರ್ಣ ಸ್ಥಬ್ದವಾಗಿದ್ದು ಬಹುತೇಕ ಮಂದಿ ಕೆಲಸವಿಲ್ಲದೆ ಅತಂತ್ರರಾಗಿದ್ದಾರೆ. ನೋಟ್ ಬ್ಯಾನ್, ಜಿಎಸ್ ಟಿ ಹೇರಿಕೆ ನಿರ್ಮಾಣ ವಲಯದ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಅಧ್ಯಕ್ಷ ಹೆಚ್ಕೆ . ನಾಗರಾಜ್, ಕಾರ್ಮಿಕ ಮುಖಂಡರಾದ ಬಿಜು ಅಗಸ್ಟಿನ್, ಪುಟ್ಟಣ್ಣ. ಕೆ, ವಿ. ಗಣೇಶ್, ವಿ. ಆರ್. ಪ್ರಸಾದ್, ಮೋನಪ್ಪ, ನಾಗರಾಜ್ ಕಲ್ಲುಮುಟ್ಲು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

18 hours ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

18 hours ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

2 days ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

2 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

2 days ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

2 days ago