Advertisement
ಸುದ್ದಿಗಳು

ಆರ್ಥಿಕ ಕುಸಿತದಿಂದ ಕಾರ್ಮಿಕರ ಬದುಕು ಅತಂತ್ರ – ಆತಂಕ ವ್ಯಕ್ತಪಡಿಸಿದ ಕಾರ್ಮಿಕರ ಮುಖಂಡರು

Share

ಸುಳ್ಯ: ದೇಶದಲ್ಲಿ ಉಂಟಾಗಿರುವ ಆರ್ಥಿಕ ಕುಸಿತದಿಂದ ಕಾರ್ಮಿಕರ ಬದುಕು ಅತಂತ್ರವಾಗಿದೆ. ಸುಳ್ಯ ತಾಲೂಕು ಸೇರಿ ಎಲ್ಲಿಯೂ ಕೆಲಸವಿಲ್ಲದೆ ಕಾರ್ಮಿಕರ ಕುಟುಂಬಗಳಿಗೆ ಪ್ರತಿ ದಿನದ ಅನ್ನಕ್ಕೂ ಕುತ್ತು ಬಂದಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫಡರೇಶನ್ (ಸಿಐಟಿಯು) ಪ್ರಮುಖರು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಐಟಿಯು ಸುಳ್ಯ ತಾಲೂಕು ಅಧ್ಯಕ್ಷ ಕೆ. ಪಿ. ಜಾನಿ ಕಲ್ಲುಗುಂಡಿ, ನಿರ್ಮಾಣ ವಲಯದಲ್ಲಿ ಕೆಲಸ ಇಲ್ಲದೆ ಕಾರ್ಮಿಕರ ಬದುಕು ಅತ್ಯಂತ ಕ್ಲಿಷ್ಟಕರವಾಗಿದೆ. ಕೆಲಸ ನಂಬಿ ವಿವಿಧ ಅಗತ್ಯತೆಗಳಿಗಾಗಿ ಸಾಲ ಮಾಡಿದವರು ಮರು ಪಾವತಿ ಮಾಡಲಾಗದೆ ಸಮಸ್ಯೆಯಲ್ಲಿ ಸಿಲುಕಿದ್ದಾರೆ. ಆದುದರಿಂದ ತಾಲೂಕಿನ ಕೆಲಸವನ್ನು ಆದಷ್ಟು ರಾಜ್ಯದ ಕಾರ್ಮಿಕರಿಗೇ ನೀಡಬೇಕು, ಪ್ರತಿ ಪಂಚಾಯತಿಗಳೂ ಉದ್ಯೋಗ ಖಾತರಿ ಕೆಲಸವನ್ನು ಕಾರ್ಮಿಕರ ಮೂಲಕವೇ ಮಾಡಿಸಬೇಕು. ಇದಕ್ಕೆ ಕೇರಳ ಮಾದರಿಯಲ್ಲಿ ಕಾರ್ಮಿಕರನ್ನು ಸೇರಿಸಿ ಉದ್ಯೋಗ ಖಾತರಿಯ ತಂಡವನ್ನು ರಚಿಸಬೇಕು. ವಿವಿಧ ಸ್ವಸಹಾಯ ಸಂಘಗಳು ಸಾಲ ವಸೂಲಿಯ ಸಂದರ್ಭದಲ್ಲಿ ಮಾನವೀಯತೆಯಿಂದ ನಡೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಸುಳ್ಯ ತಾಲೂಕಿನಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ವಲಯ ಹಲವು ಸಮಯದಿಂದ ಸಂಪೂರ್ಣ ಸ್ಥಬ್ದವಾಗಿದ್ದು ಬಹುತೇಕ ಮಂದಿ ಕೆಲಸವಿಲ್ಲದೆ ಅತಂತ್ರರಾಗಿದ್ದಾರೆ. ನೋಟ್ ಬ್ಯಾನ್, ಜಿಎಸ್ ಟಿ ಹೇರಿಕೆ ನಿರ್ಮಾಣ ವಲಯದ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಅಧ್ಯಕ್ಷ ಹೆಚ್ಕೆ . ನಾಗರಾಜ್, ಕಾರ್ಮಿಕ ಮುಖಂಡರಾದ ಬಿಜು ಅಗಸ್ಟಿನ್, ಪುಟ್ಟಣ್ಣ. ಕೆ, ವಿ. ಗಣೇಶ್, ವಿ. ಆರ್. ಪ್ರಸಾದ್, ಮೋನಪ್ಪ, ನಾಗರಾಜ್ ಕಲ್ಲುಮುಟ್ಲು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

52 minutes ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

4 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

13 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

15 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

16 hours ago