ಸುದ್ದಿಗಳು

ಆರ್ ಸಿ ಇ ಪಿ ಬಗ್ಗೆ ಆತಂಕ ಬೇಡ- ಸಂಸದ ನಳಿನ್ ಕುಮಾರ್ ಕಟೀಲ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ(ಆರ್‍ಸಿಇಪಿ) ಕುರಿತು ರೈತರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆರ್‍ಸಿಇಪಿ ಈಗ ಚರ್ಚೆಯಲ್ಲಿದೆಯಷ್ಟೆ. ರೈತರಿಗೆ ವಿರೋಧವಾಗುವ ಯಾವುದೇ ಯೋಜನೆ ಜಾರಿಯಾಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

Advertisement
Advertisement

ಸುಳ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆರ್‍ಸಿಇಪಿ ಸಂಬಂಧಪಟ್ಟು ಕೇಂದ್ರ ಸರ್ಕಾರ ಈಗಾಗಲೇ ಕೃಷಿಕರು ಮತ್ತು ಟ್ರೇಡ್ ಯೂನಿಯನ್‍ಗಳ ಜೊತೆ ಮಾತುಕತೆ ನಡೆಸಿದೆ. ಆರ್‍ಸಿಇಪಿ ನೇರವಾಗಿ ಹೇರಿಕೆ ಮಾಡುವುದಿಲ್ಲ ಎಂದು ಪ್ರಧಾನಿಯವರೇ ಸ್ಪಷ್ಟ ಪಡಿಸಿದ್ದಾರೆ. ಈ ವಿಚಾರದಲ್ಲಿ ರೈತರಲ್ಲಿ ಯಾವುದೇ ಆತಂಕ ಬೇಡ. ರೈತ ವಿರೋಧಿ ಯೋಜನೆಯನ್ನು ಸರಕಾರ ಜಾರಿಗೊಳಿಸುವುದಿಲ್ಲ. ರಾಜ್ಯದಲ್ಲಿಯೂ ಅಡಿಕೆ ಕೃಷಿ ಇದೆ. ಹಾಲಿನ ವ್ಯವಹಾರ ನಡೆಸುವವರಿದ್ದಾರೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿಗಳು ಕೂಡಾ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಯಾವುದೇ ಯೋಜನೆ ರೈತರಿಗೆ ತೊಂದರೆ ಆಗುತ್ತದೆ ಅಂದರೆ ನಾವು ಎಲ್ಲರೂ ಸೇರಿ ಅದನ್ನು ವಿರೋಧಿಸುತ್ತೇವೆ ಎಂದು ಹೇಳಿದರು.

ಅಡಿಕೆ ಹಳದಿ ಎಲೆ ರೋಗಕ್ಕೆ ಪರಿಹಾರದ ಕುರಿತು ಸಂಸದರ ಗಮನ ಸೆಳೆದಾಗ, ಜಿಲ್ಲೆಯ ಎಲ್ಲ ಅಡಿಕೆ ಬಳೆಗಾರರ ನಾಯಕರನ್ನು ಕರೆದು ಮುಖ್ಯಮಂತ್ರಿಗಳು ಮಾತನಾಡಿದ್ದಾರೆ. ಅವರಿಗೆ ಬೇಕಾದ ರೀತಿಯಲ್ಲಿ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಮ್ಮನ ಪ್ರೀತಿಗೆ ಎಣೆಯುಂಟೇ?

ಭಾರತದ ವೈಜ್ಞಾನಿಕ ಸಾಧನೆಯ ಗೌರವವನ್ನು ಮತ್ತಷ್ಟು ಎತ್ತರಕ್ಕೇರಿಸುವ ಮಾನವ ಸಹಿತವಾದ ಗಗನಯಾನದ ನೌಕೆ…

6 minutes ago

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…

14 hours ago

ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ

ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …

15 hours ago

ಅಡಿಕೆ ಮಾರಾಟದ ದಾರಿಗಳು ಯಾವುದೆಲ್ಲಾ…?

ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…

15 hours ago

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…

15 hours ago

ಸಕಲ ಸಂಕಷ್ಟಗಳನ್ನು ಮಾಯ ಮಾಡ್ತಾಳೆ ಈ ಉಕ್ಕಡ ಮಾರಮ್ಮ | ಆಷಾಡ ಶುಕ್ರವಾರ ಈ ದೇವಿಯನ್ನು ಈ ರೀತಿ ಪೂಜಿಸಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

15 hours ago