Advertisement
ಸುದ್ದಿಗಳು

ಆರ್ ಸಿ ಇ ಪಿ ಬಗ್ಗೆ ಆತಂಕ ಬೇಡ- ಸಂಸದ ನಳಿನ್ ಕುಮಾರ್ ಕಟೀಲ್

Share

ಸುಳ್ಯ: ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ(ಆರ್‍ಸಿಇಪಿ) ಕುರಿತು ರೈತರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆರ್‍ಸಿಇಪಿ ಈಗ ಚರ್ಚೆಯಲ್ಲಿದೆಯಷ್ಟೆ. ರೈತರಿಗೆ ವಿರೋಧವಾಗುವ ಯಾವುದೇ ಯೋಜನೆ ಜಾರಿಯಾಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

Advertisement
Advertisement
Advertisement
Advertisement

ಸುಳ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆರ್‍ಸಿಇಪಿ ಸಂಬಂಧಪಟ್ಟು ಕೇಂದ್ರ ಸರ್ಕಾರ ಈಗಾಗಲೇ ಕೃಷಿಕರು ಮತ್ತು ಟ್ರೇಡ್ ಯೂನಿಯನ್‍ಗಳ ಜೊತೆ ಮಾತುಕತೆ ನಡೆಸಿದೆ. ಆರ್‍ಸಿಇಪಿ ನೇರವಾಗಿ ಹೇರಿಕೆ ಮಾಡುವುದಿಲ್ಲ ಎಂದು ಪ್ರಧಾನಿಯವರೇ ಸ್ಪಷ್ಟ ಪಡಿಸಿದ್ದಾರೆ. ಈ ವಿಚಾರದಲ್ಲಿ ರೈತರಲ್ಲಿ ಯಾವುದೇ ಆತಂಕ ಬೇಡ. ರೈತ ವಿರೋಧಿ ಯೋಜನೆಯನ್ನು ಸರಕಾರ ಜಾರಿಗೊಳಿಸುವುದಿಲ್ಲ. ರಾಜ್ಯದಲ್ಲಿಯೂ ಅಡಿಕೆ ಕೃಷಿ ಇದೆ. ಹಾಲಿನ ವ್ಯವಹಾರ ನಡೆಸುವವರಿದ್ದಾರೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿಗಳು ಕೂಡಾ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಯಾವುದೇ ಯೋಜನೆ ರೈತರಿಗೆ ತೊಂದರೆ ಆಗುತ್ತದೆ ಅಂದರೆ ನಾವು ಎಲ್ಲರೂ ಸೇರಿ ಅದನ್ನು ವಿರೋಧಿಸುತ್ತೇವೆ ಎಂದು ಹೇಳಿದರು.

Advertisement

ಅಡಿಕೆ ಹಳದಿ ಎಲೆ ರೋಗಕ್ಕೆ ಪರಿಹಾರದ ಕುರಿತು ಸಂಸದರ ಗಮನ ಸೆಳೆದಾಗ, ಜಿಲ್ಲೆಯ ಎಲ್ಲ ಅಡಿಕೆ ಬಳೆಗಾರರ ನಾಯಕರನ್ನು ಕರೆದು ಮುಖ್ಯಮಂತ್ರಿಗಳು ಮಾತನಾಡಿದ್ದಾರೆ. ಅವರಿಗೆ ಬೇಕಾದ ರೀತಿಯಲ್ಲಿ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಲ್ಪಾವಧಿ ಬೆಳೆ ಸಾಲ – ಹಾಗೆಂದರೇನು..? | ರೈತರಿಗೆ ಪ್ರಯೋಜನ ಏನು..?

ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…

10 hours ago

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

16 hours ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

2 days ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

2 days ago