ಸುಳ್ಯ: ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ(ಆರ್ಸಿಇಪಿ) ಕುರಿತು ರೈತರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆರ್ಸಿಇಪಿ ಈಗ ಚರ್ಚೆಯಲ್ಲಿದೆಯಷ್ಟೆ. ರೈತರಿಗೆ ವಿರೋಧವಾಗುವ ಯಾವುದೇ ಯೋಜನೆ ಜಾರಿಯಾಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಸುಳ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆರ್ಸಿಇಪಿ ಸಂಬಂಧಪಟ್ಟು ಕೇಂದ್ರ ಸರ್ಕಾರ ಈಗಾಗಲೇ ಕೃಷಿಕರು ಮತ್ತು ಟ್ರೇಡ್ ಯೂನಿಯನ್ಗಳ ಜೊತೆ ಮಾತುಕತೆ ನಡೆಸಿದೆ. ಆರ್ಸಿಇಪಿ ನೇರವಾಗಿ ಹೇರಿಕೆ ಮಾಡುವುದಿಲ್ಲ ಎಂದು ಪ್ರಧಾನಿಯವರೇ ಸ್ಪಷ್ಟ ಪಡಿಸಿದ್ದಾರೆ. ಈ ವಿಚಾರದಲ್ಲಿ ರೈತರಲ್ಲಿ ಯಾವುದೇ ಆತಂಕ ಬೇಡ. ರೈತ ವಿರೋಧಿ ಯೋಜನೆಯನ್ನು ಸರಕಾರ ಜಾರಿಗೊಳಿಸುವುದಿಲ್ಲ. ರಾಜ್ಯದಲ್ಲಿಯೂ ಅಡಿಕೆ ಕೃಷಿ ಇದೆ. ಹಾಲಿನ ವ್ಯವಹಾರ ನಡೆಸುವವರಿದ್ದಾರೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿಗಳು ಕೂಡಾ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಯಾವುದೇ ಯೋಜನೆ ರೈತರಿಗೆ ತೊಂದರೆ ಆಗುತ್ತದೆ ಅಂದರೆ ನಾವು ಎಲ್ಲರೂ ಸೇರಿ ಅದನ್ನು ವಿರೋಧಿಸುತ್ತೇವೆ ಎಂದು ಹೇಳಿದರು.
ಅಡಿಕೆ ಹಳದಿ ಎಲೆ ರೋಗಕ್ಕೆ ಪರಿಹಾರದ ಕುರಿತು ಸಂಸದರ ಗಮನ ಸೆಳೆದಾಗ, ಜಿಲ್ಲೆಯ ಎಲ್ಲ ಅಡಿಕೆ ಬಳೆಗಾರರ ನಾಯಕರನ್ನು ಕರೆದು ಮುಖ್ಯಮಂತ್ರಿಗಳು ಮಾತನಾಡಿದ್ದಾರೆ. ಅವರಿಗೆ ಬೇಕಾದ ರೀತಿಯಲ್ಲಿ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…