ಸುಳ್ಯ: ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ(ಆರ್ಸಿಇಪಿ) ಕುರಿತು ರೈತರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆರ್ಸಿಇಪಿ ಈಗ ಚರ್ಚೆಯಲ್ಲಿದೆಯಷ್ಟೆ. ರೈತರಿಗೆ ವಿರೋಧವಾಗುವ ಯಾವುದೇ ಯೋಜನೆ ಜಾರಿಯಾಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಸುಳ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆರ್ಸಿಇಪಿ ಸಂಬಂಧಪಟ್ಟು ಕೇಂದ್ರ ಸರ್ಕಾರ ಈಗಾಗಲೇ ಕೃಷಿಕರು ಮತ್ತು ಟ್ರೇಡ್ ಯೂನಿಯನ್ಗಳ ಜೊತೆ ಮಾತುಕತೆ ನಡೆಸಿದೆ. ಆರ್ಸಿಇಪಿ ನೇರವಾಗಿ ಹೇರಿಕೆ ಮಾಡುವುದಿಲ್ಲ ಎಂದು ಪ್ರಧಾನಿಯವರೇ ಸ್ಪಷ್ಟ ಪಡಿಸಿದ್ದಾರೆ. ಈ ವಿಚಾರದಲ್ಲಿ ರೈತರಲ್ಲಿ ಯಾವುದೇ ಆತಂಕ ಬೇಡ. ರೈತ ವಿರೋಧಿ ಯೋಜನೆಯನ್ನು ಸರಕಾರ ಜಾರಿಗೊಳಿಸುವುದಿಲ್ಲ. ರಾಜ್ಯದಲ್ಲಿಯೂ ಅಡಿಕೆ ಕೃಷಿ ಇದೆ. ಹಾಲಿನ ವ್ಯವಹಾರ ನಡೆಸುವವರಿದ್ದಾರೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿಗಳು ಕೂಡಾ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಯಾವುದೇ ಯೋಜನೆ ರೈತರಿಗೆ ತೊಂದರೆ ಆಗುತ್ತದೆ ಅಂದರೆ ನಾವು ಎಲ್ಲರೂ ಸೇರಿ ಅದನ್ನು ವಿರೋಧಿಸುತ್ತೇವೆ ಎಂದು ಹೇಳಿದರು.
ಅಡಿಕೆ ಹಳದಿ ಎಲೆ ರೋಗಕ್ಕೆ ಪರಿಹಾರದ ಕುರಿತು ಸಂಸದರ ಗಮನ ಸೆಳೆದಾಗ, ಜಿಲ್ಲೆಯ ಎಲ್ಲ ಅಡಿಕೆ ಬಳೆಗಾರರ ನಾಯಕರನ್ನು ಕರೆದು ಮುಖ್ಯಮಂತ್ರಿಗಳು ಮಾತನಾಡಿದ್ದಾರೆ. ಅವರಿಗೆ ಬೇಕಾದ ರೀತಿಯಲ್ಲಿ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…