ಸುಳ್ಯ: ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ(ಆರ್ಸಿಇಪಿ) ಕುರಿತು ರೈತರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆರ್ಸಿಇಪಿ ಈಗ ಚರ್ಚೆಯಲ್ಲಿದೆಯಷ್ಟೆ. ರೈತರಿಗೆ ವಿರೋಧವಾಗುವ ಯಾವುದೇ ಯೋಜನೆ ಜಾರಿಯಾಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಸುಳ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆರ್ಸಿಇಪಿ ಸಂಬಂಧಪಟ್ಟು ಕೇಂದ್ರ ಸರ್ಕಾರ ಈಗಾಗಲೇ ಕೃಷಿಕರು ಮತ್ತು ಟ್ರೇಡ್ ಯೂನಿಯನ್ಗಳ ಜೊತೆ ಮಾತುಕತೆ ನಡೆಸಿದೆ. ಆರ್ಸಿಇಪಿ ನೇರವಾಗಿ ಹೇರಿಕೆ ಮಾಡುವುದಿಲ್ಲ ಎಂದು ಪ್ರಧಾನಿಯವರೇ ಸ್ಪಷ್ಟ ಪಡಿಸಿದ್ದಾರೆ. ಈ ವಿಚಾರದಲ್ಲಿ ರೈತರಲ್ಲಿ ಯಾವುದೇ ಆತಂಕ ಬೇಡ. ರೈತ ವಿರೋಧಿ ಯೋಜನೆಯನ್ನು ಸರಕಾರ ಜಾರಿಗೊಳಿಸುವುದಿಲ್ಲ. ರಾಜ್ಯದಲ್ಲಿಯೂ ಅಡಿಕೆ ಕೃಷಿ ಇದೆ. ಹಾಲಿನ ವ್ಯವಹಾರ ನಡೆಸುವವರಿದ್ದಾರೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿಗಳು ಕೂಡಾ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಯಾವುದೇ ಯೋಜನೆ ರೈತರಿಗೆ ತೊಂದರೆ ಆಗುತ್ತದೆ ಅಂದರೆ ನಾವು ಎಲ್ಲರೂ ಸೇರಿ ಅದನ್ನು ವಿರೋಧಿಸುತ್ತೇವೆ ಎಂದು ಹೇಳಿದರು.
ಅಡಿಕೆ ಹಳದಿ ಎಲೆ ರೋಗಕ್ಕೆ ಪರಿಹಾರದ ಕುರಿತು ಸಂಸದರ ಗಮನ ಸೆಳೆದಾಗ, ಜಿಲ್ಲೆಯ ಎಲ್ಲ ಅಡಿಕೆ ಬಳೆಗಾರರ ನಾಯಕರನ್ನು ಕರೆದು ಮುಖ್ಯಮಂತ್ರಿಗಳು ಮಾತನಾಡಿದ್ದಾರೆ. ಅವರಿಗೆ ಬೇಕಾದ ರೀತಿಯಲ್ಲಿ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…