ಸುಳ್ಯ: ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ(ಆರ್ಸಿಇಪಿ) ಕುರಿತು ರೈತರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆರ್ಸಿಇಪಿ ಈಗ ಚರ್ಚೆಯಲ್ಲಿದೆಯಷ್ಟೆ. ರೈತರಿಗೆ ವಿರೋಧವಾಗುವ ಯಾವುದೇ ಯೋಜನೆ ಜಾರಿಯಾಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಸುಳ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆರ್ಸಿಇಪಿ ಸಂಬಂಧಪಟ್ಟು ಕೇಂದ್ರ ಸರ್ಕಾರ ಈಗಾಗಲೇ ಕೃಷಿಕರು ಮತ್ತು ಟ್ರೇಡ್ ಯೂನಿಯನ್ಗಳ ಜೊತೆ ಮಾತುಕತೆ ನಡೆಸಿದೆ. ಆರ್ಸಿಇಪಿ ನೇರವಾಗಿ ಹೇರಿಕೆ ಮಾಡುವುದಿಲ್ಲ ಎಂದು ಪ್ರಧಾನಿಯವರೇ ಸ್ಪಷ್ಟ ಪಡಿಸಿದ್ದಾರೆ. ಈ ವಿಚಾರದಲ್ಲಿ ರೈತರಲ್ಲಿ ಯಾವುದೇ ಆತಂಕ ಬೇಡ. ರೈತ ವಿರೋಧಿ ಯೋಜನೆಯನ್ನು ಸರಕಾರ ಜಾರಿಗೊಳಿಸುವುದಿಲ್ಲ. ರಾಜ್ಯದಲ್ಲಿಯೂ ಅಡಿಕೆ ಕೃಷಿ ಇದೆ. ಹಾಲಿನ ವ್ಯವಹಾರ ನಡೆಸುವವರಿದ್ದಾರೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿಗಳು ಕೂಡಾ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಯಾವುದೇ ಯೋಜನೆ ರೈತರಿಗೆ ತೊಂದರೆ ಆಗುತ್ತದೆ ಅಂದರೆ ನಾವು ಎಲ್ಲರೂ ಸೇರಿ ಅದನ್ನು ವಿರೋಧಿಸುತ್ತೇವೆ ಎಂದು ಹೇಳಿದರು.
ಅಡಿಕೆ ಹಳದಿ ಎಲೆ ರೋಗಕ್ಕೆ ಪರಿಹಾರದ ಕುರಿತು ಸಂಸದರ ಗಮನ ಸೆಳೆದಾಗ, ಜಿಲ್ಲೆಯ ಎಲ್ಲ ಅಡಿಕೆ ಬಳೆಗಾರರ ನಾಯಕರನ್ನು ಕರೆದು ಮುಖ್ಯಮಂತ್ರಿಗಳು ಮಾತನಾಡಿದ್ದಾರೆ. ಅವರಿಗೆ ಬೇಕಾದ ರೀತಿಯಲ್ಲಿ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…