ರಾಷ್ಟ್ರೀಯ

ಆರ್ ಸಿ ಇ ಪಿ ಒಪ್ಪಂದಕ್ಕೆ ಭಾರತದ ಒಪ್ಪಿಗೆ ಇಲ್ಲ : ಒಪ್ಪಂದ ಮುಂದೂಡಿಕೆ ಸಾಧ್ಯತೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನವದೆಹಲಿ : ಆರ್ ಸಿ ಇ ಪಿ ಒಪ್ಪಂದದಿಂದ ಭಾರತ ದೂರ ಉಳಿಯುವ ನಿರ್ಧಾರವನ್ನು ಸೂಚ್ಯವಾಗಿ ತಿಳಿಸಿದ ಬೆನ್ನಲ್ಲೇ ಬ್ಯಾಂಕಾಕ್‌ ನಲ್ಲಿ ಭಾನುವಾರ ನಡೆದ ಸಭೆಯಲ್ಲಿ ಒಪ್ಪಂದವನ್ನು ಅಂತಿಮಗೊಳಿಸುವ ನಿರೀಕ್ಷೆ ಹುಸಿಯಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ಒಂದು ವರ್ಷದ ಮಟ್ಟಿಗೆ ಈ ಒಪ್ಪಂದವನ್ನು  ಮುಂದೂಡುವ ಬಗ್ಗೆ ಕರಡು ಹೇಳಿಕೆಯಲ್ಲಿ ತಿಳಿಸಲಾಗಿದೆ. ಭಾರತವೂ ಒಂದು ವರ್ಷದ ಅವಧಿಗೆ ಈ ಒಪ್ಪಂದದಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿಸಿತ್ತು.

Advertisement
Advertisement

16 ದೇಶಗಳು ಒಳಗೊಂಡಿರುವ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದ(ಆರ್‌ಸಿಇಪಿ) ಮುಂದೂಡುವ ಚಿಂತನೆ ನಡೆದಿದೆ. ಈ ಒಪ್ಪಂದದ ಕೆಲವು ಅಂಶಗಳ ಬಗ್ಗೆ ಭಾರತವು ಆಕ್ಷೇಪ ವ್ಯಕ್ತಪಡಿಸಿ ತಾನು ದೂರ ಉಳಿಯುವ ಬಗ್ಗೆ ಸೂಚ್ಯವಾಗಿ ತಿಳಿಸಿತ್ತು. ಈ ಹಿಂದೆಯೇ ಭಾರತವ ಈ ಬಗ್ಗೆ ಸೂಚನೆಯನ್ನೂ ನೀಡಿತ್ತು. ಅದರ ಜೊತೆಗೆ ಪರ್ಯಾಯ ಒಪ್ಪಂದದ ಕಡೆಗೂ ಚಿಂತನೆ ನಡೆಸಿತ್ತು. ಪ್ರಮುಖವಾಗಿ ಈ ಒಪ್ಪಂದದ ನಂತರ ಚೀನಾ ನಿರ್ಮಿತ ಕಡಿಮೆ ಬೆಲೆಯ ಸರಕುಗಳು ಭಾರತದ ಮಾರುಕಟ್ಟೆಗೆ ಬರುವ ಕಾರಣ  ಸಣ್ಣ ಉದ್ದಿಮೆಗಳಿಗೆ ಸಮಸ್ಯೆಯಾಗಬಹುದು, ದೇಶದ ರೈತರಿಗೂ ಸಮಸ್ಯೆಯಾಗಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಆಕ್ಷೇಪ ಹಾಗೂ ಆತಂಕವನ್ನು  ವ್ಯಕ್ತಪಡಿಸಿದ್ದರು.

ಭಾನುವಾರ ಬ್ಯಾಂಕಾಕ್‌ ನಲ್ಲಿ ನಡೆದ ಸಭೆಯಲ್ಲಿ ಭಾರತ ಎತ್ತಿರುವ ಆಕ್ಷೇಪಗಳ ಬಗ್ಗೆ ಚರ್ಚೆ ನಡೆದು ಒಪ್ಪಂದವನ್ನು ಅಂತಿಮಗೊಳಿಸುವ ತೀರ್ಮಾನಕ್ಕೆ ಬರಲಾಗಲಿಲ್ಲ. ಹೀಗಾಗಿ ಒಂದು ವರ್ಷ ಮುಂದೂಡುವ ನಿರ್ಧಾರಕ್ಕೆ ಬರಲಾಗುತ್ತಿದೆ ಎಂದು ತಿಳಿದುಬಂದಿದೆ. ಆಸಿಯಾನ್’ಗುಂಪಿನ 10 ರಾಷ್ಟ್ರಗಳ ಜೊತೆ ಚೀನಾ, ಭಾರತ, ಜಪಾನ್, ದಕ್ಷಿಣ ಕೊರಿಯಾ, ಆಸ್ಟ್ರೇಲಿಯಾ ,  ನ್ಯೂಜಿಲ್ಯಾಂಡ್ ದೇಶಗಳು ಸೇರಿಕೊಂಡು ಆರ್‌ ಸಿ ಇ ಪಿ ಒಪ್ಪಂದ ರೂಪಿಸಿವೆ. ವಿಶ್ವದ ಜಿಡಿಪಿಯ ಶೇ.30ರಷ್ಟು ಮತ್ತು ವಿಶ್ವದ ಅರ್ಧಾಂಶದಷ್ಟು ಜನತೆ ಈ ಒಪ್ಪಂದದ ವ್ಯಾಪ್ತಿಯಡಿ ಬರುತ್ತಾರೆ. ಭಾರತವು ಒಂದು ವರ್ಷದ ಮಟ್ಟಿಗೆ ಈ ಒಪ್ಪಂದದಲ್ಲಿ  ಭಾಗಿಯಾಗುವುದಿಲ್ಲ ಎಂದು ತಿಳಿಸಿತ್ತು. ನಂತರ ಈ ಬಗ್ಗೆ ನಿರ್ಧಾರವಾಗಲಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಪರಿಚಯ ಮೂಡಿಸಬೇಕಿದೆ

ಮಕ್ಕಳಲ್ಲಿ ಬೌದ್ಧಿಕ ಸಾಮರ್ಥ್ಯ ಗಣಿತ ಹಾಗೂ ಭಾಷಾ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಕಲಿಕಾ ಮಾದರಿ…

2 hours ago

ಎಳೆ ಅಡಿಕೆ ಬೀಳಲು ಹವಾಮಾನ ವೈಪರೀತ್ಯ ಕಾರಣವೇ…!?

ಅಡಿಕೆ ಬೆಳೆಗಾರರಿಗೆ ಜೂನ್‌ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…

6 hours ago

ಅಹಮದಾಬಾದ್ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ

ಅಹಮದಾಬಾದ್ ನಲ್ಲಿ  ಸಂಭವಿಸಿದ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆಯಾಗಿದ್ದು, ತನಿಖೆಯಲ್ಲಿ…

7 hours ago

ಮುಂದಿನ 1 ತಿಂಗಳು ಈ 4 ರಾಶಿಯವರಿಗೆ ಸೂರ್ಯನಿಂದ ಬ್ಯಾಡ್‌ ಟೈಮ್

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515690

7 hours ago

ಹೊಸರುಚಿ | ಹಲಸಿನ ಹಣ್ಣಿನ ಮೈಸೂರು ಪಾಕ್

ಹಲಸಿನ ಹಣ್ಣಿನ ಮೈಸೂರು ಪಾಕ್

7 hours ago