Advertisement
ರಾಷ್ಟ್ರೀಯ

ಆರ್ ಸಿ ಇ ಪಿ ಒಪ್ಪಂದಕ್ಕೆ ಭಾರತದ ಒಪ್ಪಿಗೆ ಇಲ್ಲ : ಒಪ್ಪಂದ ಮುಂದೂಡಿಕೆ ಸಾಧ್ಯತೆ

Share

ನವದೆಹಲಿ : ಆರ್ ಸಿ ಇ ಪಿ ಒಪ್ಪಂದದಿಂದ ಭಾರತ ದೂರ ಉಳಿಯುವ ನಿರ್ಧಾರವನ್ನು ಸೂಚ್ಯವಾಗಿ ತಿಳಿಸಿದ ಬೆನ್ನಲ್ಲೇ ಬ್ಯಾಂಕಾಕ್‌ ನಲ್ಲಿ ಭಾನುವಾರ ನಡೆದ ಸಭೆಯಲ್ಲಿ ಒಪ್ಪಂದವನ್ನು ಅಂತಿಮಗೊಳಿಸುವ ನಿರೀಕ್ಷೆ ಹುಸಿಯಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ಒಂದು ವರ್ಷದ ಮಟ್ಟಿಗೆ ಈ ಒಪ್ಪಂದವನ್ನು  ಮುಂದೂಡುವ ಬಗ್ಗೆ ಕರಡು ಹೇಳಿಕೆಯಲ್ಲಿ ತಿಳಿಸಲಾಗಿದೆ. ಭಾರತವೂ ಒಂದು ವರ್ಷದ ಅವಧಿಗೆ ಈ ಒಪ್ಪಂದದಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿಸಿತ್ತು.

16 ದೇಶಗಳು ಒಳಗೊಂಡಿರುವ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದ(ಆರ್‌ಸಿಇಪಿ) ಮುಂದೂಡುವ ಚಿಂತನೆ ನಡೆದಿದೆ. ಈ ಒಪ್ಪಂದದ ಕೆಲವು ಅಂಶಗಳ ಬಗ್ಗೆ ಭಾರತವು ಆಕ್ಷೇಪ ವ್ಯಕ್ತಪಡಿಸಿ ತಾನು ದೂರ ಉಳಿಯುವ ಬಗ್ಗೆ ಸೂಚ್ಯವಾಗಿ ತಿಳಿಸಿತ್ತು. ಈ ಹಿಂದೆಯೇ ಭಾರತವ ಈ ಬಗ್ಗೆ ಸೂಚನೆಯನ್ನೂ ನೀಡಿತ್ತು. ಅದರ ಜೊತೆಗೆ ಪರ್ಯಾಯ ಒಪ್ಪಂದದ ಕಡೆಗೂ ಚಿಂತನೆ ನಡೆಸಿತ್ತು. ಪ್ರಮುಖವಾಗಿ ಈ ಒಪ್ಪಂದದ ನಂತರ ಚೀನಾ ನಿರ್ಮಿತ ಕಡಿಮೆ ಬೆಲೆಯ ಸರಕುಗಳು ಭಾರತದ ಮಾರುಕಟ್ಟೆಗೆ ಬರುವ ಕಾರಣ  ಸಣ್ಣ ಉದ್ದಿಮೆಗಳಿಗೆ ಸಮಸ್ಯೆಯಾಗಬಹುದು, ದೇಶದ ರೈತರಿಗೂ ಸಮಸ್ಯೆಯಾಗಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಆಕ್ಷೇಪ ಹಾಗೂ ಆತಂಕವನ್ನು  ವ್ಯಕ್ತಪಡಿಸಿದ್ದರು.

ಭಾನುವಾರ ಬ್ಯಾಂಕಾಕ್‌ ನಲ್ಲಿ ನಡೆದ ಸಭೆಯಲ್ಲಿ ಭಾರತ ಎತ್ತಿರುವ ಆಕ್ಷೇಪಗಳ ಬಗ್ಗೆ ಚರ್ಚೆ ನಡೆದು ಒಪ್ಪಂದವನ್ನು ಅಂತಿಮಗೊಳಿಸುವ ತೀರ್ಮಾನಕ್ಕೆ ಬರಲಾಗಲಿಲ್ಲ. ಹೀಗಾಗಿ ಒಂದು ವರ್ಷ ಮುಂದೂಡುವ ನಿರ್ಧಾರಕ್ಕೆ ಬರಲಾಗುತ್ತಿದೆ ಎಂದು ತಿಳಿದುಬಂದಿದೆ. ಆಸಿಯಾನ್’ಗುಂಪಿನ 10 ರಾಷ್ಟ್ರಗಳ ಜೊತೆ ಚೀನಾ, ಭಾರತ, ಜಪಾನ್, ದಕ್ಷಿಣ ಕೊರಿಯಾ, ಆಸ್ಟ್ರೇಲಿಯಾ ,  ನ್ಯೂಜಿಲ್ಯಾಂಡ್ ದೇಶಗಳು ಸೇರಿಕೊಂಡು ಆರ್‌ ಸಿ ಇ ಪಿ ಒಪ್ಪಂದ ರೂಪಿಸಿವೆ. ವಿಶ್ವದ ಜಿಡಿಪಿಯ ಶೇ.30ರಷ್ಟು ಮತ್ತು ವಿಶ್ವದ ಅರ್ಧಾಂಶದಷ್ಟು ಜನತೆ ಈ ಒಪ್ಪಂದದ ವ್ಯಾಪ್ತಿಯಡಿ ಬರುತ್ತಾರೆ. ಭಾರತವು ಒಂದು ವರ್ಷದ ಮಟ್ಟಿಗೆ ಈ ಒಪ್ಪಂದದಲ್ಲಿ  ಭಾಗಿಯಾಗುವುದಿಲ್ಲ ಎಂದು ತಿಳಿಸಿತ್ತು. ನಂತರ ಈ ಬಗ್ಗೆ ನಿರ್ಧಾರವಾಗಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

1 minute ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

1 day ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

2 days ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago