ಸುದ್ದಿಗಳು

ಆರ್.ಸಿ.ಇ.ಪಿ. ಒಪ್ಪಂದದಿಂದ ಭಾರತ ದೂರ : ಕ್ಯಾಂಪ್ಕೊ ಅಭಿನಂದನೆ

Share

ಮಂಗಳೂರು: ಭಾರತದ ಕೃಷಿ ವಲಯಕ್ಕೆ ಹೊಡೆತ ನೀಡಬಹುದಾಗಿದ್ದ ಬಹುಚರ್ಚಿತ ಆರ್.ಸಿ.ಇ.ಪಿ. ಒಪ್ಪಂದದಿಂದ ಭಾರತವು ಹೊರಗುಳಿದಿದ್ದು, ಕೇಂದ್ರ ಸರಕಾರವು ಮತ್ತೊಮ್ಮೆ ಕೃಷಿಕರ ಬೇಡಿಕೆಗೆ ಪೂರಕವಾಗಿ ಸ್ಪಂದಿಸಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕ್ಯಾಂಪ್ಕೊ ಅಭಿನಂದನೆಗಳನ್ನು ಸಲ್ಲಿಸುತ್ತದೆ ಎಂದು ಕ್ಯಾಂಪ್ಕೋ ಪ್ರಕಟಣೆ ತಿಳಿಸಿದೆ.

ಭಾರತದ ಅಡಿಕೆ ಮತ್ತು ಕಾಳುಮೆಣಸು ಉತ್ಪಾದಕ ವಲಯದ ಪರವಾಗಿ ಪ್ರಧಾನಿ, ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರು ಮತ್ತು ಕೇಂದ್ರ ಹಣಕಾಸು ಸಚಿವರುಗಳನ್ನು ಭೇಟಿ ಮಾಡಿ ಅಡಿಕೆ ಮತ್ತು ಕಾಳುಮೆಣಸನ್ನು ಆರ್.ಸಿ.ಇ.ಪಿ. ಒಪ್ಪಂದದಿಂದ ಹೊರತುಪಡಿಸುವಂತೆ ಕ್ಯಾಂಪ್ಕೊ ವಿನಂತಿಸಿತ್ತು. ದೇಶವು ಅಡಿಕೆ ಮತ್ತು ಕಾಳುಮೆಣಸು ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಿದೆ.ಈಗಾಗಲೇ ವಿದೇಶಗಳಿಂದ ಅಕ್ರಮವಾಗಿ ಅಡಿಕೆ ಮತ್ತು ಕಾಳುಮೆಣಸು ದೇಶದೊಳಕ್ಕೆ ಆಮದಾಗಿದ್ದು, ದೇಶೀಯ ಮಾರುಕಟ್ಟೆಯನ್ನು ತಲ್ಲಣಗೊಳಿಸಿದ್ದಲ್ಲದೆ ಕೃಷಿ ಆರ್ಥಿಕತೆಗೆ ಅಪಾಯವನ್ನುಂಟುಮಾಡಿದೆ. ಇಂತಹ ಸಂದರ್ಭದಲ್ಲಿ ಗೊಂದಲ ಮತ್ತು ಭೀತಿಯುಂಟುಮಾಡಿದ ಒಪ್ಪಂದದಿಂದ ದೇಶವನ್ನು ಹೊರತುಪಡಿಸಿ ಕೃಷಿಕರ ಬೆಂಬಲಕ್ಕೆ ನಿಂತಿದ್ದು ಸರಕಾರದ ಕೃಷಿಸ್ನೇಹಿ ನೀತಿಯನ್ನು ಎತ್ತಿತೋರಿಸುತ್ತದೆ ಎಂದು ಪ್ರಕಟಣೆಯಲ್ಲಿ  ಕ್ಯಾಂಪ್ಕೋ ತಿಳಿಸಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…

2 hours ago

ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!

ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…

3 hours ago

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…

4 hours ago

ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…

4 hours ago

ಎಫ್‌ಪಿಒ ಗಳಿಗೆ ರಾಜ್ಯ ಸರ್ಕಾರದಿಂದ ನೆರವು

ರೈತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಸಕಲ ಸಹಕಾರ…

4 hours ago

ಜಾನುವಾರು ಗಣತಿ | ಬೆಂಗಳೂರು ಗ್ರಾಮಾಂತರ ಜಿಲ್ಲೆ ಪ್ರಥಮ | 2.90 ಲಕ್ಷ ರೈತರು ಪಶುಸಂಗೋಪನೆಯಲ್ಲಿ |

21ನೇ ಜಾನುವಾರು ಗಣತಿ ಪೂರ್ಣಗೊಂಡಿದ್ದು, ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಪ್ರಥಮ ಸ್ಥಾನ…

4 hours ago