ಮಂಗಳೂರು: ಭಾರತದ ಕೃಷಿ ವಲಯಕ್ಕೆ ಹೊಡೆತ ನೀಡಬಹುದಾಗಿದ್ದ ಬಹುಚರ್ಚಿತ ಆರ್.ಸಿ.ಇ.ಪಿ. ಒಪ್ಪಂದದಿಂದ ಭಾರತವು ಹೊರಗುಳಿದಿದ್ದು, ಕೇಂದ್ರ ಸರಕಾರವು ಮತ್ತೊಮ್ಮೆ ಕೃಷಿಕರ ಬೇಡಿಕೆಗೆ ಪೂರಕವಾಗಿ ಸ್ಪಂದಿಸಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕ್ಯಾಂಪ್ಕೊ ಅಭಿನಂದನೆಗಳನ್ನು ಸಲ್ಲಿಸುತ್ತದೆ ಎಂದು ಕ್ಯಾಂಪ್ಕೋ ಪ್ರಕಟಣೆ ತಿಳಿಸಿದೆ.
ಭಾರತದ ಅಡಿಕೆ ಮತ್ತು ಕಾಳುಮೆಣಸು ಉತ್ಪಾದಕ ವಲಯದ ಪರವಾಗಿ ಪ್ರಧಾನಿ, ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರು ಮತ್ತು ಕೇಂದ್ರ ಹಣಕಾಸು ಸಚಿವರುಗಳನ್ನು ಭೇಟಿ ಮಾಡಿ ಅಡಿಕೆ ಮತ್ತು ಕಾಳುಮೆಣಸನ್ನು ಆರ್.ಸಿ.ಇ.ಪಿ. ಒಪ್ಪಂದದಿಂದ ಹೊರತುಪಡಿಸುವಂತೆ ಕ್ಯಾಂಪ್ಕೊ ವಿನಂತಿಸಿತ್ತು. ದೇಶವು ಅಡಿಕೆ ಮತ್ತು ಕಾಳುಮೆಣಸು ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಿದೆ.ಈಗಾಗಲೇ ವಿದೇಶಗಳಿಂದ ಅಕ್ರಮವಾಗಿ ಅಡಿಕೆ ಮತ್ತು ಕಾಳುಮೆಣಸು ದೇಶದೊಳಕ್ಕೆ ಆಮದಾಗಿದ್ದು, ದೇಶೀಯ ಮಾರುಕಟ್ಟೆಯನ್ನು ತಲ್ಲಣಗೊಳಿಸಿದ್ದಲ್ಲದೆ ಕೃಷಿ ಆರ್ಥಿಕತೆಗೆ ಅಪಾಯವನ್ನುಂಟುಮಾಡಿದೆ. ಇಂತಹ ಸಂದರ್ಭದಲ್ಲಿ ಗೊಂದಲ ಮತ್ತು ಭೀತಿಯುಂಟುಮಾಡಿದ ಒಪ್ಪಂದದಿಂದ ದೇಶವನ್ನು ಹೊರತುಪಡಿಸಿ ಕೃಷಿಕರ ಬೆಂಬಲಕ್ಕೆ ನಿಂತಿದ್ದು ಸರಕಾರದ ಕೃಷಿಸ್ನೇಹಿ ನೀತಿಯನ್ನು ಎತ್ತಿತೋರಿಸುತ್ತದೆ ಎಂದು ಪ್ರಕಟಣೆಯಲ್ಲಿ ಕ್ಯಾಂಪ್ಕೋ ತಿಳಿಸಿದೆ.
ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…
ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…
ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…
ರೈತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಸಕಲ ಸಹಕಾರ…