ಮಂಗಳೂರು: ಭಾರತದ ಕೃಷಿ ವಲಯಕ್ಕೆ ಹೊಡೆತ ನೀಡಬಹುದಾಗಿದ್ದ ಬಹುಚರ್ಚಿತ ಆರ್.ಸಿ.ಇ.ಪಿ. ಒಪ್ಪಂದದಿಂದ ಭಾರತವು ಹೊರಗುಳಿದಿದ್ದು, ಕೇಂದ್ರ ಸರಕಾರವು ಮತ್ತೊಮ್ಮೆ ಕೃಷಿಕರ ಬೇಡಿಕೆಗೆ ಪೂರಕವಾಗಿ ಸ್ಪಂದಿಸಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕ್ಯಾಂಪ್ಕೊ ಅಭಿನಂದನೆಗಳನ್ನು ಸಲ್ಲಿಸುತ್ತದೆ ಎಂದು ಕ್ಯಾಂಪ್ಕೋ ಪ್ರಕಟಣೆ ತಿಳಿಸಿದೆ.
ಭಾರತದ ಅಡಿಕೆ ಮತ್ತು ಕಾಳುಮೆಣಸು ಉತ್ಪಾದಕ ವಲಯದ ಪರವಾಗಿ ಪ್ರಧಾನಿ, ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರು ಮತ್ತು ಕೇಂದ್ರ ಹಣಕಾಸು ಸಚಿವರುಗಳನ್ನು ಭೇಟಿ ಮಾಡಿ ಅಡಿಕೆ ಮತ್ತು ಕಾಳುಮೆಣಸನ್ನು ಆರ್.ಸಿ.ಇ.ಪಿ. ಒಪ್ಪಂದದಿಂದ ಹೊರತುಪಡಿಸುವಂತೆ ಕ್ಯಾಂಪ್ಕೊ ವಿನಂತಿಸಿತ್ತು. ದೇಶವು ಅಡಿಕೆ ಮತ್ತು ಕಾಳುಮೆಣಸು ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಿದೆ.ಈಗಾಗಲೇ ವಿದೇಶಗಳಿಂದ ಅಕ್ರಮವಾಗಿ ಅಡಿಕೆ ಮತ್ತು ಕಾಳುಮೆಣಸು ದೇಶದೊಳಕ್ಕೆ ಆಮದಾಗಿದ್ದು, ದೇಶೀಯ ಮಾರುಕಟ್ಟೆಯನ್ನು ತಲ್ಲಣಗೊಳಿಸಿದ್ದಲ್ಲದೆ ಕೃಷಿ ಆರ್ಥಿಕತೆಗೆ ಅಪಾಯವನ್ನುಂಟುಮಾಡಿದೆ. ಇಂತಹ ಸಂದರ್ಭದಲ್ಲಿ ಗೊಂದಲ ಮತ್ತು ಭೀತಿಯುಂಟುಮಾಡಿದ ಒಪ್ಪಂದದಿಂದ ದೇಶವನ್ನು ಹೊರತುಪಡಿಸಿ ಕೃಷಿಕರ ಬೆಂಬಲಕ್ಕೆ ನಿಂತಿದ್ದು ಸರಕಾರದ ಕೃಷಿಸ್ನೇಹಿ ನೀತಿಯನ್ನು ಎತ್ತಿತೋರಿಸುತ್ತದೆ ಎಂದು ಪ್ರಕಟಣೆಯಲ್ಲಿ ಕ್ಯಾಂಪ್ಕೋ ತಿಳಿಸಿದೆ.
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…