ಆಲೆಟ್ಟಿ | ಕಾಡಾನೆ ಹಾವಳಿ- ಕೃಷಿ ಹಾನಿ

July 23, 2020
10:26 PM

ಸುಳ್ಯ: ಆಲೆಟ್ಟಿ ಗ್ರಾಮದ ವಿವಿಧ ಭಾಗಗಳಲ್ಲಿ ಕಾಡಾನೆ ಹಾವಳಿ ತೀವ್ರಗೊಂಡಿದೆ. ಆಲೆಟ್ಟಿ ಗ್ರಾಮದ ತುದಿಯಡ್ಕ ಭಾಗದಲ್ಲಿ ಬುಧವಾರ ರಾತ್ರಿ ದಾಳಿ ಮಾಡಿದ ಆನೆಗಳ ಹಿಂಡು ಬಾಳೆ, ತೆಂಗು, ಅಡಕೆ ಮರಗಳನ್ನು ನಾಶಪಡಿಸಿದೆ. ಹಲವೆಡೆ ಚಿಕ್ಕ ಅಡಕೆ ಗಿಡಗಳನ್ನೂ ನಾಶ ಮಾಡಿವೆ. ದನಗಳಿಗೆ ತಿನ್ನಲು ಬೆಳೆಸಿದ ಸೀಮೆ ಹುಲ್ಲನ್ನು ಕೂಡ ಆನೆಗಳು ತಿಂದು ಹೋಗಿದೆ ಎನ್ನುತ್ತಾರೆ ಕೃಷಿಕರಾದ ಗಿರಿಜಾಶಂಕರ ತುದಿಯಡ್ಕ. 3-4 ಆನೆಗಳ ಹಿಂಡು ಕಳೆದ ಕೆಲವು ದಿನಗಳಿಂದ ಆಲೆಟ್ಟಿ ಗ್ರಾಮದ ವಿವಿಧ ಜನ ವಸತಿ ಪ್ರದೇಶಗಳ ಸಮೀಪದ ಕಾಡುಗಳಲ್ಲಿ ಬೀಡು ಬಿಟ್ಟಿದ್ದು ರಾತ್ರಿಯಾಗುತ್ತಲೆ ತೋಟಕ್ಕೆ ನುಗ್ಗಿ ಕೃಷಿ ಹಾನಿ ಮಾಡುತ್ತಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡಾನೆಗಳನ್ನು ಕಾಡಿಗೆ ಅಟ್ಟುವ ಪ್ರಯತ್ನ ನಡೆಸುತ್ತಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು
August 10, 2026
6:05 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ
August 9, 2026
12:36 PM
by: ಸಾಯಿಶೇಖರ್ ಕರಿಕಳ
ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ
August 9, 2026
6:28 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು
August 9, 2026
6:11 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror