ಆಲೆಟ್ಟಿ | ಕಾಡಾನೆ ಹಾವಳಿ- ಕೃಷಿ ಹಾನಿ

July 23, 2020
10:26 PM

ಸುಳ್ಯ: ಆಲೆಟ್ಟಿ ಗ್ರಾಮದ ವಿವಿಧ ಭಾಗಗಳಲ್ಲಿ ಕಾಡಾನೆ ಹಾವಳಿ ತೀವ್ರಗೊಂಡಿದೆ. ಆಲೆಟ್ಟಿ ಗ್ರಾಮದ ತುದಿಯಡ್ಕ ಭಾಗದಲ್ಲಿ ಬುಧವಾರ ರಾತ್ರಿ ದಾಳಿ ಮಾಡಿದ ಆನೆಗಳ ಹಿಂಡು ಬಾಳೆ, ತೆಂಗು, ಅಡಕೆ ಮರಗಳನ್ನು ನಾಶಪಡಿಸಿದೆ. ಹಲವೆಡೆ ಚಿಕ್ಕ ಅಡಕೆ ಗಿಡಗಳನ್ನೂ ನಾಶ ಮಾಡಿವೆ. ದನಗಳಿಗೆ ತಿನ್ನಲು ಬೆಳೆಸಿದ ಸೀಮೆ ಹುಲ್ಲನ್ನು ಕೂಡ ಆನೆಗಳು ತಿಂದು ಹೋಗಿದೆ ಎನ್ನುತ್ತಾರೆ ಕೃಷಿಕರಾದ ಗಿರಿಜಾಶಂಕರ ತುದಿಯಡ್ಕ. 3-4 ಆನೆಗಳ ಹಿಂಡು ಕಳೆದ ಕೆಲವು ದಿನಗಳಿಂದ ಆಲೆಟ್ಟಿ ಗ್ರಾಮದ ವಿವಿಧ ಜನ ವಸತಿ ಪ್ರದೇಶಗಳ ಸಮೀಪದ ಕಾಡುಗಳಲ್ಲಿ ಬೀಡು ಬಿಟ್ಟಿದ್ದು ರಾತ್ರಿಯಾಗುತ್ತಲೆ ತೋಟಕ್ಕೆ ನುಗ್ಗಿ ಕೃಷಿ ಹಾನಿ ಮಾಡುತ್ತಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡಾನೆಗಳನ್ನು ಕಾಡಿಗೆ ಅಟ್ಟುವ ಪ್ರಯತ್ನ ನಡೆಸುತ್ತಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ
June 6, 2026
11:05 PM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ
June 6, 2026
10:27 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?
June 6, 2026
1:37 PM
by: ಸಾಯಿಶೇಖರ್ ಕರಿಕಳ
ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ
June 6, 2026
9:23 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror