ಆಲೆಟ್ಟಿ | ಕಾಡಾನೆ ಹಾವಳಿ- ಕೃಷಿ ಹಾನಿ

July 23, 2020
10:26 PM

ಸುಳ್ಯ: ಆಲೆಟ್ಟಿ ಗ್ರಾಮದ ವಿವಿಧ ಭಾಗಗಳಲ್ಲಿ ಕಾಡಾನೆ ಹಾವಳಿ ತೀವ್ರಗೊಂಡಿದೆ. ಆಲೆಟ್ಟಿ ಗ್ರಾಮದ ತುದಿಯಡ್ಕ ಭಾಗದಲ್ಲಿ ಬುಧವಾರ ರಾತ್ರಿ ದಾಳಿ ಮಾಡಿದ ಆನೆಗಳ ಹಿಂಡು ಬಾಳೆ, ತೆಂಗು, ಅಡಕೆ ಮರಗಳನ್ನು ನಾಶಪಡಿಸಿದೆ. ಹಲವೆಡೆ ಚಿಕ್ಕ ಅಡಕೆ ಗಿಡಗಳನ್ನೂ ನಾಶ ಮಾಡಿವೆ. ದನಗಳಿಗೆ ತಿನ್ನಲು ಬೆಳೆಸಿದ ಸೀಮೆ ಹುಲ್ಲನ್ನು ಕೂಡ ಆನೆಗಳು ತಿಂದು ಹೋಗಿದೆ ಎನ್ನುತ್ತಾರೆ ಕೃಷಿಕರಾದ ಗಿರಿಜಾಶಂಕರ ತುದಿಯಡ್ಕ. 3-4 ಆನೆಗಳ ಹಿಂಡು ಕಳೆದ ಕೆಲವು ದಿನಗಳಿಂದ ಆಲೆಟ್ಟಿ ಗ್ರಾಮದ ವಿವಿಧ ಜನ ವಸತಿ ಪ್ರದೇಶಗಳ ಸಮೀಪದ ಕಾಡುಗಳಲ್ಲಿ ಬೀಡು ಬಿಟ್ಟಿದ್ದು ರಾತ್ರಿಯಾಗುತ್ತಲೆ ತೋಟಕ್ಕೆ ನುಗ್ಗಿ ಕೃಷಿ ಹಾನಿ ಮಾಡುತ್ತಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡಾನೆಗಳನ್ನು ಕಾಡಿಗೆ ಅಟ್ಟುವ ಪ್ರಯತ್ನ ನಡೆಸುತ್ತಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror