ಸುಳ್ಯ: ಆಲೆಟ್ಟಿ ಗ್ರಾಮದ ವಿವಿಧ ಭಾಗಗಳಲ್ಲಿ ಕಾಡಾನೆ ಹಾವಳಿ ತೀವ್ರಗೊಂಡಿದೆ. ಆಲೆಟ್ಟಿ ಗ್ರಾಮದ ತುದಿಯಡ್ಕ ಭಾಗದಲ್ಲಿ ಬುಧವಾರ ರಾತ್ರಿ ದಾಳಿ ಮಾಡಿದ ಆನೆಗಳ ಹಿಂಡು ಬಾಳೆ, ತೆಂಗು, ಅಡಕೆ ಮರಗಳನ್ನು ನಾಶಪಡಿಸಿದೆ. ಹಲವೆಡೆ ಚಿಕ್ಕ ಅಡಕೆ ಗಿಡಗಳನ್ನೂ ನಾಶ ಮಾಡಿವೆ. ದನಗಳಿಗೆ ತಿನ್ನಲು ಬೆಳೆಸಿದ ಸೀಮೆ ಹುಲ್ಲನ್ನು ಕೂಡ ಆನೆಗಳು ತಿಂದು ಹೋಗಿದೆ ಎನ್ನುತ್ತಾರೆ ಕೃಷಿಕರಾದ ಗಿರಿಜಾಶಂಕರ ತುದಿಯಡ್ಕ. 3-4 ಆನೆಗಳ ಹಿಂಡು ಕಳೆದ ಕೆಲವು ದಿನಗಳಿಂದ ಆಲೆಟ್ಟಿ ಗ್ರಾಮದ ವಿವಿಧ ಜನ ವಸತಿ ಪ್ರದೇಶಗಳ ಸಮೀಪದ ಕಾಡುಗಳಲ್ಲಿ ಬೀಡು ಬಿಟ್ಟಿದ್ದು ರಾತ್ರಿಯಾಗುತ್ತಲೆ ತೋಟಕ್ಕೆ ನುಗ್ಗಿ ಕೃಷಿ ಹಾನಿ ಮಾಡುತ್ತಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡಾನೆಗಳನ್ನು ಕಾಡಿಗೆ ಅಟ್ಟುವ ಪ್ರಯತ್ನ ನಡೆಸುತ್ತಿದ್ದಾರೆ.
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.…