ಸುಳ್ಯ: ಆಲೆಟ್ಟಿ ಗ್ರಾಮದ ವಿವಿಧ ಭಾಗಗಳಲ್ಲಿ ಕಾಡಾನೆ ಹಾವಳಿ ತೀವ್ರಗೊಂಡಿದೆ. ಆಲೆಟ್ಟಿ ಗ್ರಾಮದ ತುದಿಯಡ್ಕ ಭಾಗದಲ್ಲಿ ಬುಧವಾರ ರಾತ್ರಿ ದಾಳಿ ಮಾಡಿದ ಆನೆಗಳ ಹಿಂಡು ಬಾಳೆ, ತೆಂಗು, ಅಡಕೆ ಮರಗಳನ್ನು ನಾಶಪಡಿಸಿದೆ. ಹಲವೆಡೆ ಚಿಕ್ಕ ಅಡಕೆ ಗಿಡಗಳನ್ನೂ ನಾಶ ಮಾಡಿವೆ. ದನಗಳಿಗೆ ತಿನ್ನಲು ಬೆಳೆಸಿದ ಸೀಮೆ ಹುಲ್ಲನ್ನು ಕೂಡ ಆನೆಗಳು ತಿಂದು ಹೋಗಿದೆ ಎನ್ನುತ್ತಾರೆ ಕೃಷಿಕರಾದ ಗಿರಿಜಾಶಂಕರ ತುದಿಯಡ್ಕ. 3-4 ಆನೆಗಳ ಹಿಂಡು ಕಳೆದ ಕೆಲವು ದಿನಗಳಿಂದ ಆಲೆಟ್ಟಿ ಗ್ರಾಮದ ವಿವಿಧ ಜನ ವಸತಿ ಪ್ರದೇಶಗಳ ಸಮೀಪದ ಕಾಡುಗಳಲ್ಲಿ ಬೀಡು ಬಿಟ್ಟಿದ್ದು ರಾತ್ರಿಯಾಗುತ್ತಲೆ ತೋಟಕ್ಕೆ ನುಗ್ಗಿ ಕೃಷಿ ಹಾನಿ ಮಾಡುತ್ತಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡಾನೆಗಳನ್ನು ಕಾಡಿಗೆ ಅಟ್ಟುವ ಪ್ರಯತ್ನ ನಡೆಸುತ್ತಿದ್ದಾರೆ.
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…
ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್ಶಿಪ್–2026ಕ್ಕೆ…