ಸುಳ್ಯ: ಆಲೆಟ್ಟಿ ಗ್ರಾಮದ ವಿವಿಧ ಭಾಗಗಳಲ್ಲಿ ಕಾಡಾನೆ ಹಾವಳಿ ತೀವ್ರಗೊಂಡಿದೆ. ಆಲೆಟ್ಟಿ ಗ್ರಾಮದ ತುದಿಯಡ್ಕ ಭಾಗದಲ್ಲಿ ಬುಧವಾರ ರಾತ್ರಿ ದಾಳಿ ಮಾಡಿದ ಆನೆಗಳ ಹಿಂಡು ಬಾಳೆ, ತೆಂಗು, ಅಡಕೆ ಮರಗಳನ್ನು ನಾಶಪಡಿಸಿದೆ. ಹಲವೆಡೆ ಚಿಕ್ಕ ಅಡಕೆ ಗಿಡಗಳನ್ನೂ ನಾಶ ಮಾಡಿವೆ. ದನಗಳಿಗೆ ತಿನ್ನಲು ಬೆಳೆಸಿದ ಸೀಮೆ ಹುಲ್ಲನ್ನು ಕೂಡ ಆನೆಗಳು ತಿಂದು ಹೋಗಿದೆ ಎನ್ನುತ್ತಾರೆ ಕೃಷಿಕರಾದ ಗಿರಿಜಾಶಂಕರ ತುದಿಯಡ್ಕ. 3-4 ಆನೆಗಳ ಹಿಂಡು ಕಳೆದ ಕೆಲವು ದಿನಗಳಿಂದ ಆಲೆಟ್ಟಿ ಗ್ರಾಮದ ವಿವಿಧ ಜನ ವಸತಿ ಪ್ರದೇಶಗಳ ಸಮೀಪದ ಕಾಡುಗಳಲ್ಲಿ ಬೀಡು ಬಿಟ್ಟಿದ್ದು ರಾತ್ರಿಯಾಗುತ್ತಲೆ ತೋಟಕ್ಕೆ ನುಗ್ಗಿ ಕೃಷಿ ಹಾನಿ ಮಾಡುತ್ತಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡಾನೆಗಳನ್ನು ಕಾಡಿಗೆ ಅಟ್ಟುವ ಪ್ರಯತ್ನ ನಡೆಸುತ್ತಿದ್ದಾರೆ.
ಗೋಕರ್ಣದಲ್ಲಿ ನಡೆಯಲಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಮೂಲಕ ಆಹಾರದ ಮಹತ್ವ ಹಾಗೂ ಅನ್ನ ವ್ಯರ್ಥ…
ಮಾರುಕಟ್ಟೆಯಲ್ಲಿ ತಿರಸ್ಕೃತವಾಗುವ ಗ್ರೇಡ್-ಬಿ ಮಾವು ಮತ್ತು ತೆಂಗುಗಳನ್ನು ಮೌಲ್ಯವರ್ಧಿತ ಉತ್ಪನ್ನಗಳಾಗಿ ಪರಿವರ್ತಿಸಿ ರೈತರಿಗೆ…
2050ರ ವೇಳೆಗೆ ಜಗತ್ತಿನಲ್ಲಿ ಕ್ಯಾನ್ಸರ್ ಚಿಕಿತ್ಸಾ ಕ್ಷೇತ್ರದಲ್ಲಿ 10 ಕೋಟಿ ಸಿಬ್ಬಂದಿ ಕೊರತೆ…
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ರಾಜ್ಯದ ಅಡಿಕೆ ವ್ಯಾಪಾರಿಗಳಿಗೆ ಹೊಸ ಸಂಕಷ್ಟ ತಂದೊಡ್ಡಿದೆ.…
ದೇಶದಲ್ಲಿ ಮುಂಗಾರು ಚಟುವಟಿಕೆ ದುರ್ಬಲವಾಗಿದ್ದು, ಜೂನ್ 18ರವರೆಗೆ ಮಳೆ ಕೊರತೆ ಶೇ.40ಕ್ಕೆ ಏರಿಕೆಯಾಗಿದೆ.…
ಇ-ವೇ ಬಿಲ್ ಮತ್ತು ಸಾರಿಗೆ ದಾಖಲೆಗಳ ಕೊರತೆಯಿಂದ ₹2.22 ಕೋಟಿ ಮೌಲ್ಯದ 33.6…