ಸುಳ್ಯ: ಆಲೆಟ್ಟಿ ಗ್ರಾಮದ ವಿವಿಧ ಭಾಗಗಳಲ್ಲಿ ಕಾಡಾನೆ ಹಾವಳಿ ತೀವ್ರಗೊಂಡಿದೆ. ಆಲೆಟ್ಟಿ ಗ್ರಾಮದ ತುದಿಯಡ್ಕ ಭಾಗದಲ್ಲಿ ಬುಧವಾರ ರಾತ್ರಿ ದಾಳಿ ಮಾಡಿದ ಆನೆಗಳ ಹಿಂಡು ಬಾಳೆ, ತೆಂಗು, ಅಡಕೆ ಮರಗಳನ್ನು ನಾಶಪಡಿಸಿದೆ. ಹಲವೆಡೆ ಚಿಕ್ಕ ಅಡಕೆ ಗಿಡಗಳನ್ನೂ ನಾಶ ಮಾಡಿವೆ. ದನಗಳಿಗೆ ತಿನ್ನಲು ಬೆಳೆಸಿದ ಸೀಮೆ ಹುಲ್ಲನ್ನು ಕೂಡ ಆನೆಗಳು ತಿಂದು ಹೋಗಿದೆ ಎನ್ನುತ್ತಾರೆ ಕೃಷಿಕರಾದ ಗಿರಿಜಾಶಂಕರ ತುದಿಯಡ್ಕ. 3-4 ಆನೆಗಳ ಹಿಂಡು ಕಳೆದ ಕೆಲವು ದಿನಗಳಿಂದ ಆಲೆಟ್ಟಿ ಗ್ರಾಮದ ವಿವಿಧ ಜನ ವಸತಿ ಪ್ರದೇಶಗಳ ಸಮೀಪದ ಕಾಡುಗಳಲ್ಲಿ ಬೀಡು ಬಿಟ್ಟಿದ್ದು ರಾತ್ರಿಯಾಗುತ್ತಲೆ ತೋಟಕ್ಕೆ ನುಗ್ಗಿ ಕೃಷಿ ಹಾನಿ ಮಾಡುತ್ತಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡಾನೆಗಳನ್ನು ಕಾಡಿಗೆ ಅಟ್ಟುವ ಪ್ರಯತ್ನ ನಡೆಸುತ್ತಿದ್ದಾರೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…