ಸುಳ್ಯ:ಹಿಂದಿನ ಸಮ್ಮಿಶ್ರ ಸರಕಾರ ಮಾಡಿದ್ದ ಸಾಲ ಮನ್ನಾ ಮೊತ್ತವು ರೈತರ ಖಾತೆಗೆ ಜಮೆ ಆಗದೇ ಇರುವುದನ್ನು ಪ್ರತಿಭಟಿಸಿ ರೈತರ ಸಂಘದ ವತಿಯಿಂದ ಸುಳ್ಯ ತಾಲೂಕಿನ ಆಲೆಟ್ಟಿ ಸಹಕಾರಿ ಸಂಘದ ಎದುರಿನಲ್ಲಿ ಅ.16 ರಂದು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಯಂ.ವೆಂಕಪ್ಪ ಗೌಡ , 15 ದಿನಗಳ ಒಳಗಾಗಿ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡದಿದ್ದರೆ ಅಹೋರಾತ್ರಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು. ಈಗಿನ ರಾಜ್ಯ ಸರಕಾರ ಸಾಲ ಮನ್ನಾ ಮಾಡುವುದು ಬಿಡಿ ಹಿಂದಿನ ಸರಕಾರಗಳು ನೀಡಿದ ಹಣವನ್ನು ತಲುಪಿಸುವ ಪ್ರಯತ್ನವನ್ನಾದರೂ ಮಾಡಲೀ. ಸರಕಾರಕ್ಕೆ, ಸಹಕಾರಿ ಸಂಘಗಳಿಗೆ ರೈತರ ಬಗ್ಗೆ ಕಾಳಜಿಯಿದ್ದರೆ ರೈತರ ಖಾತೆಗೆ ಹಣ ತುಂಬುವ ಪ್ರಯತ್ನವನ್ನು ಮಾಡುತ್ತೇವೆಂದು ರೈತರ ಮುಂದೆ ಪ್ರಮಾಣವನ್ನು ಮಾಡಲಿ ಎಂದು ಸವಾಲೆಸದರು. ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಬಂದು ಆಗಿರುವ ಪಾವತಿಯ ಮಾಹಿತಿಯನ್ನು ನೀಡತಕ್ಕದ್ದು, ಇಲ್ಲದಿದ್ದಲ್ಲಿ ಅಹೋರಾತ್ರಿ ಪ್ರತಿಭಟನೆಯನ್ನು ಮಾಡಲು ಹಿಂದೇಟು ಹಾಕುವುದಿಲ್ಲವೆಂದು ಎಚ್ಚರಿಸಿದರು.
ರೈತ ಸಂಘದ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…