ಸುಳ್ಯ:ಹಿಂದಿನ ಸಮ್ಮಿಶ್ರ ಸರಕಾರ ಮಾಡಿದ್ದ ಸಾಲ ಮನ್ನಾ ಮೊತ್ತವು ರೈತರ ಖಾತೆಗೆ ಜಮೆ ಆಗದೇ ಇರುವುದನ್ನು ಪ್ರತಿಭಟಿಸಿ ರೈತರ ಸಂಘದ ವತಿಯಿಂದ ಸುಳ್ಯ ತಾಲೂಕಿನ ಆಲೆಟ್ಟಿ ಸಹಕಾರಿ ಸಂಘದ ಎದುರಿನಲ್ಲಿ ಅ.16 ರಂದು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಯಂ.ವೆಂಕಪ್ಪ ಗೌಡ , 15 ದಿನಗಳ ಒಳಗಾಗಿ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡದಿದ್ದರೆ ಅಹೋರಾತ್ರಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು. ಈಗಿನ ರಾಜ್ಯ ಸರಕಾರ ಸಾಲ ಮನ್ನಾ ಮಾಡುವುದು ಬಿಡಿ ಹಿಂದಿನ ಸರಕಾರಗಳು ನೀಡಿದ ಹಣವನ್ನು ತಲುಪಿಸುವ ಪ್ರಯತ್ನವನ್ನಾದರೂ ಮಾಡಲೀ. ಸರಕಾರಕ್ಕೆ, ಸಹಕಾರಿ ಸಂಘಗಳಿಗೆ ರೈತರ ಬಗ್ಗೆ ಕಾಳಜಿಯಿದ್ದರೆ ರೈತರ ಖಾತೆಗೆ ಹಣ ತುಂಬುವ ಪ್ರಯತ್ನವನ್ನು ಮಾಡುತ್ತೇವೆಂದು ರೈತರ ಮುಂದೆ ಪ್ರಮಾಣವನ್ನು ಮಾಡಲಿ ಎಂದು ಸವಾಲೆಸದರು. ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಬಂದು ಆಗಿರುವ ಪಾವತಿಯ ಮಾಹಿತಿಯನ್ನು ನೀಡತಕ್ಕದ್ದು, ಇಲ್ಲದಿದ್ದಲ್ಲಿ ಅಹೋರಾತ್ರಿ ಪ್ರತಿಭಟನೆಯನ್ನು ಮಾಡಲು ಹಿಂದೇಟು ಹಾಕುವುದಿಲ್ಲವೆಂದು ಎಚ್ಚರಿಸಿದರು.
ರೈತ ಸಂಘದ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…