Advertisement
ಸುದ್ದಿಗಳು

ಆಲೆಟ್ಟಿ ಸಹಕಾರಿ ಸಂಘದ ಎದುರಿನಲ್ಲಿ ರೈತ ಸಂಘದ ವತಿಯಿಂದ ಪ್ರತಿಭಟನೆ

Share

ಸುಳ್ಯ:ಹಿಂದಿನ ಸಮ್ಮಿಶ್ರ ಸರಕಾರ ಮಾಡಿದ್ದ ಸಾಲ ಮನ್ನಾ ಮೊತ್ತವು  ರೈತರ ಖಾತೆಗೆ ಜಮೆ ಆಗದೇ ಇರುವುದನ್ನು ಪ್ರತಿಭಟಿಸಿ ರೈತರ ಸಂಘದ ವತಿಯಿಂದ ಸುಳ್ಯ ತಾಲೂಕಿನ ಆಲೆಟ್ಟಿ ಸಹಕಾರಿ ಸಂಘದ ಎದುರಿನಲ್ಲಿ ಅ.16 ರಂದು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಯಂ.ವೆಂಕಪ್ಪ ಗೌಡ , 15 ದಿನಗಳ ಒಳಗಾಗಿ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡದಿದ್ದರೆ ಅಹೋರಾತ್ರಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು‌. ಈಗಿನ ರಾಜ್ಯ ಸರಕಾರ ಸಾಲ ಮನ್ನಾ ಮಾಡುವುದು ಬಿಡಿ ಹಿಂದಿನ ಸರಕಾರಗಳು ನೀಡಿದ ಹಣವನ್ನು ತಲುಪಿಸುವ ಪ್ರಯತ್ನವನ್ನಾದರೂ ಮಾಡಲೀ. ಸರಕಾರಕ್ಕೆ, ಸಹಕಾರಿ ಸಂಘಗಳಿಗೆ ರೈತರ ಬಗ್ಗೆ ಕಾಳಜಿಯಿದ್ದರೆ ರೈತರ ಖಾತೆಗೆ ಹಣ ತುಂಬುವ ಪ್ರಯತ್ನವನ್ನು ಮಾಡುತ್ತೇವೆಂದು ರೈತರ ಮುಂದೆ ಪ್ರಮಾಣವನ್ನು ಮಾಡಲಿ ಎಂದು ಸವಾಲೆಸದರು. ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಬಂದು ಆಗಿರುವ ಪಾವತಿಯ ಮಾಹಿತಿಯನ್ನು ನೀಡತಕ್ಕದ್ದು, ಇಲ್ಲದಿದ್ದಲ್ಲಿ ಅಹೋರಾತ್ರಿ ಪ್ರತಿಭಟನೆಯನ್ನು ಮಾಡಲು ಹಿಂದೇಟು ಹಾಕುವುದಿಲ್ಲವೆಂದು ಎಚ್ಚರಿಸಿದರು.

ರೈತ ಸಂಘದ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

2 minutes ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

1 hour ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

3 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

4 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

17 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

1 day ago