Advertisement
ಯಕ್ಷಗಾನ : ಮಾತು-ಮಸೆತ

‘ಆಳು’ ಎಂಬ ಶಬ್ದ ಎರಡರ್ಥವನ್ನು ಕೊಡುತ್ತದೆ….

Share

(ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಹರಿಶ್ಚಂದ್ರ)
ಪ್ರಸಂಗ : ರಾಜಾ ಹರಿಶ್ಚಂದ್ರ

(ಸಂದರ್ಭ : ವೀರಬಾಹುಕನ ಸಾಂಗತ್ಯದಲ್ಲಿ ಹರಿಶ್ಚಂದ್ರ ಸ್ಮಶಾನವಾಸಿಯಾಗುತ್ತಾನೆ. ಇಲ್ಲಿ ಸಂಪಾದಿಸಿದ ಧನವನ್ನು ವಿಶ್ವಾಮಿತ್ರ ಶಿಷ್ಯ ನಕ್ಷತ್ರಿಕನಿಗೆ ಹಸ್ತಾಂತರಿಸುತ್ತಾನೆ)

“ವಿಶ್ವಾಮಿತ್ರ ಶಿಷ್ಯರೇ, ಈಗಲಾದರೂ ನನ್ನನ್ನು ಆ ಪಾಶದಿಂದ ಬಿಡುಗಡೆಗೊಳಿಸುತ್ತೀರಾ? ಆಗಲಿ. ಧನ್ಯನಾದೆ. ಚಕ್ರವರ್ತಿಯಾಗಿದ್ದ ನಾನು ವೀರ ಬಾಹುಕನ ಆಜ್ಞೆಯಂತೆ ಪ್ರತಿಯೊಂದು ಹೆಣಕ್ಕೂ ಎಷ್ಟು ಹಣವನ್ನು ಸಂಪಾದಿಸಬೇಕೋ, ಅಷ್ಟು ಹಣವನ್ನು ಸಂಪಾದಿಸುತ್ತಾ, ಒಡೆಯನಿಗೆ ಸಲ್ಲಬೇಕಾಗಿದ್ದ ಹಣವನ್ನು ಅವನಿಗೆ ಸಮರ್ಪಿಸುತ್ತಿದ್ದೇನೆ.

ಪಟ್ಟಾಭಿಷೇಕವಾಗುವಾಗ ಹಿರಿಯರು ಹೇಳಿದ ಮಾತು ನೆನಪಾಗುತ್ತದೆ ಪ್ರಜೆಗಳೆಲ್ಲಾ ನಿನ್ನನ್ನು ಕೇಂದ್ರೀಕರಿಸಿಯೇ ಗೃಹಸ್ಥಾಶ್ರಮಿಗಳಾಗುತಾರೆ, ಅಲ್ಲ ಬ್ರಹ್ಮಚಾರಿಗಳಾಗಿರುತ್ತಾರೆ. ಅವನು ಯಾವುದೇ ಆಶ್ರಮ ಸ್ವೀಕಾರ ಮಾಡಬೇಕಿದ್ದರೂ ಕೂಡಾ ಭರವಸೆ ಸಿಂಹಾಸನದಲ್ಲಿ ಕುಳಿತ ನಿನ್ನಿಂದ ಬರಬೇಕು. ಆದ ಕಾರಣ ನೀನು ಕಾವಲುಗಾರನಾಗಬೇಕಾಗುತ್ತದೆ.
ನೀನಾಳು, ರಾಜ್ಯವನ್ನಾಳು. ಇಲ್ಲಿ ‘ಆಳು’ ಎಂಬ ಶಬ್ದ ಎರಡರ್ಥವನ್ನು ಕೊಡುತ್ತದೆ. ಬಾಕಿದ್ದವರನ್ನೆಲ್ಲ ‘ಆಳುವುದು’ ಎಂಬ ಅರ್ಥ ಒಂದಾದರೆ, ರೂಢಿಯ ಮಾತಿನಂತೆ ನೀನು ‘ಆಳು’! ಅವರೆಲ್ಲಾ ಆಳುಗಳಲ್ಲ, ಎಲ್ಲರನ್ನು ಆಳುವ ಆಳಾಗಿ ನೀನು ಬಾಳಬೇಕು. ಆ ಮಾತು ಈ ಹೊತ್ತು ಅನುಭವಕ್ಕೆ ಬಂತು. ಒಮ್ಮೆ ಎಲ್ಲರನ್ನು ಆಳಿದೆ. ಈಗ ನಿಜವಾದಂತಹ ‘ಆಳು’ ಶಬ್ದಕ್ಕೆ ಪ್ರತೀಕವೆನಿಸಿದ್ದೇನೆ. ಸುಡುಗಾಡಿನಲ್ಲಿ ಸುಡುಗಾಡಿನ ಕಾವಲುಗಾರನಾದ ಒಬ್ಬ ಚಾಂಡಾಲನ ಆಳು. ವ್ಯಸನವಿಲ್ಲ. ಯಾಕೆಂದರೆ, ಹಂಸತೂಲಿಕಾತಲ್ಪದಲ್ಲಿ ಪವಡಿಸಿದಂತಹ ಸುಖವನ್ನು ಮರೆಯಬೇಕಿದ್ದರೆ ಬರೇ ನೆಲದಲ್ಲಿ ಮಲಗಬೇಕು. ಈ ಜೀವನದಲ್ಲಿ ಜೀವನದ ಎರಡು ಪುಟವನ್ನು ಯಾವನು ಅಧ್ಯಯನ ಮಾಡುತ್ತಾನೋ ಅವನು ಮರಳಿ ಹುಟ್ಟುವುದಿಲ್ಲವಂತೆ. ಪಾತ್ರಕ್ಕೆ ಬಂದುದೇ ಪಂಚಾಮೃತ. ಇಲ್ಲೇ ಇರುತ್ತೇನೆ…”

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

15 hours ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

2 days ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

2 days ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

2 days ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

3 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

3 days ago