Advertisement
ಯಕ್ಷಗಾನ : ಮಾತು-ಮಸೆತ

‘ಆಳು’ ಎಂಬ ಶಬ್ದ ಎರಡರ್ಥವನ್ನು ಕೊಡುತ್ತದೆ….

Share

(ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಹರಿಶ್ಚಂದ್ರ)
ಪ್ರಸಂಗ : ರಾಜಾ ಹರಿಶ್ಚಂದ್ರ

(ಸಂದರ್ಭ : ವೀರಬಾಹುಕನ ಸಾಂಗತ್ಯದಲ್ಲಿ ಹರಿಶ್ಚಂದ್ರ ಸ್ಮಶಾನವಾಸಿಯಾಗುತ್ತಾನೆ. ಇಲ್ಲಿ ಸಂಪಾದಿಸಿದ ಧನವನ್ನು ವಿಶ್ವಾಮಿತ್ರ ಶಿಷ್ಯ ನಕ್ಷತ್ರಿಕನಿಗೆ ಹಸ್ತಾಂತರಿಸುತ್ತಾನೆ)

“ವಿಶ್ವಾಮಿತ್ರ ಶಿಷ್ಯರೇ, ಈಗಲಾದರೂ ನನ್ನನ್ನು ಆ ಪಾಶದಿಂದ ಬಿಡುಗಡೆಗೊಳಿಸುತ್ತೀರಾ? ಆಗಲಿ. ಧನ್ಯನಾದೆ. ಚಕ್ರವರ್ತಿಯಾಗಿದ್ದ ನಾನು ವೀರ ಬಾಹುಕನ ಆಜ್ಞೆಯಂತೆ ಪ್ರತಿಯೊಂದು ಹೆಣಕ್ಕೂ ಎಷ್ಟು ಹಣವನ್ನು ಸಂಪಾದಿಸಬೇಕೋ, ಅಷ್ಟು ಹಣವನ್ನು ಸಂಪಾದಿಸುತ್ತಾ, ಒಡೆಯನಿಗೆ ಸಲ್ಲಬೇಕಾಗಿದ್ದ ಹಣವನ್ನು ಅವನಿಗೆ ಸಮರ್ಪಿಸುತ್ತಿದ್ದೇನೆ.

ಪಟ್ಟಾಭಿಷೇಕವಾಗುವಾಗ ಹಿರಿಯರು ಹೇಳಿದ ಮಾತು ನೆನಪಾಗುತ್ತದೆ ಪ್ರಜೆಗಳೆಲ್ಲಾ ನಿನ್ನನ್ನು ಕೇಂದ್ರೀಕರಿಸಿಯೇ ಗೃಹಸ್ಥಾಶ್ರಮಿಗಳಾಗುತಾರೆ, ಅಲ್ಲ ಬ್ರಹ್ಮಚಾರಿಗಳಾಗಿರುತ್ತಾರೆ. ಅವನು ಯಾವುದೇ ಆಶ್ರಮ ಸ್ವೀಕಾರ ಮಾಡಬೇಕಿದ್ದರೂ ಕೂಡಾ ಭರವಸೆ ಸಿಂಹಾಸನದಲ್ಲಿ ಕುಳಿತ ನಿನ್ನಿಂದ ಬರಬೇಕು. ಆದ ಕಾರಣ ನೀನು ಕಾವಲುಗಾರನಾಗಬೇಕಾಗುತ್ತದೆ.
ನೀನಾಳು, ರಾಜ್ಯವನ್ನಾಳು. ಇಲ್ಲಿ ‘ಆಳು’ ಎಂಬ ಶಬ್ದ ಎರಡರ್ಥವನ್ನು ಕೊಡುತ್ತದೆ. ಬಾಕಿದ್ದವರನ್ನೆಲ್ಲ ‘ಆಳುವುದು’ ಎಂಬ ಅರ್ಥ ಒಂದಾದರೆ, ರೂಢಿಯ ಮಾತಿನಂತೆ ನೀನು ‘ಆಳು’! ಅವರೆಲ್ಲಾ ಆಳುಗಳಲ್ಲ, ಎಲ್ಲರನ್ನು ಆಳುವ ಆಳಾಗಿ ನೀನು ಬಾಳಬೇಕು. ಆ ಮಾತು ಈ ಹೊತ್ತು ಅನುಭವಕ್ಕೆ ಬಂತು. ಒಮ್ಮೆ ಎಲ್ಲರನ್ನು ಆಳಿದೆ. ಈಗ ನಿಜವಾದಂತಹ ‘ಆಳು’ ಶಬ್ದಕ್ಕೆ ಪ್ರತೀಕವೆನಿಸಿದ್ದೇನೆ. ಸುಡುಗಾಡಿನಲ್ಲಿ ಸುಡುಗಾಡಿನ ಕಾವಲುಗಾರನಾದ ಒಬ್ಬ ಚಾಂಡಾಲನ ಆಳು. ವ್ಯಸನವಿಲ್ಲ. ಯಾಕೆಂದರೆ, ಹಂಸತೂಲಿಕಾತಲ್ಪದಲ್ಲಿ ಪವಡಿಸಿದಂತಹ ಸುಖವನ್ನು ಮರೆಯಬೇಕಿದ್ದರೆ ಬರೇ ನೆಲದಲ್ಲಿ ಮಲಗಬೇಕು. ಈ ಜೀವನದಲ್ಲಿ ಜೀವನದ ಎರಡು ಪುಟವನ್ನು ಯಾವನು ಅಧ್ಯಯನ ಮಾಡುತ್ತಾನೋ ಅವನು ಮರಳಿ ಹುಟ್ಟುವುದಿಲ್ಲವಂತೆ. ಪಾತ್ರಕ್ಕೆ ಬಂದುದೇ ಪಂಚಾಮೃತ. ಇಲ್ಲೇ ಇರುತ್ತೇನೆ…”

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ಸುಳ್ಯ ಅಡಿಕೆ ಕೃಷಿಗೆ ಎಲೆಚುಕ್ಕಿ ಸಂಕಷ್ಟ | ಬೆಳೆಸಾಲ ಮನ್ನಾ ಮಾಡಲು ಆಗ್ರಹ – ಸಮೀಕ್ಷೆಗೆ ಸಹಕರಿಸುವಂತೆ ಕೃಷಿಕರಿಗೆ ಮನವಿ

ಸುಳ್ಯ ತಾಲೂಕಿನ ಅಡಿಕೆ ತೋಟಗಳಲ್ಲಿ ಎಲೆಚುಕ್ಕಿ ರೋಗದಿಂದ ಭಾರೀ ನಷ್ಟ. ಬೆಳೆಸಾಲ ಮನ್ನಾ,…

1 hour ago

ಹವಾಮಾನ ವರದಿ | 10-01-2026 | ತುಂತುರು ಮಳೆ ಇದೆ..! ಎಲ್ಲೆಲ್ಲಿ ಮಳೆ ಇದೆ…?

ಜನವರಿ 11 ಮತ್ತು 12ರಂದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲ…

1 hour ago

ಅಡಿಕೆ ಸಿಂಗಾರ ಒಣಗುತ್ತಿದೆಯೇ..? ನಿಮ್ಮ ತೋಟದ ಶತ್ರು ನೀವು ಬಳಸುವ ಬೇವಿನ ಎಣ್ಣೆಯೇ ಇರಬಹುದು…!

ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…

14 hours ago

ಕಳಪೆ ಅಡಿಕೆ ಪತ್ತೆ | 15.5 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…

14 hours ago

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ

ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್‌ Z ಗಾಗಿ…

23 hours ago

ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ

ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…

23 hours ago