Advertisement
ಯಕ್ಷಗಾನ : ಮಾತು-ಮಸೆತ

‘ಆಳು’ ಎಂಬ ಶಬ್ದ ಎರಡರ್ಥವನ್ನು ಕೊಡುತ್ತದೆ….

Share

(ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಹರಿಶ್ಚಂದ್ರ)
ಪ್ರಸಂಗ : ರಾಜಾ ಹರಿಶ್ಚಂದ್ರ

(ಸಂದರ್ಭ : ವೀರಬಾಹುಕನ ಸಾಂಗತ್ಯದಲ್ಲಿ ಹರಿಶ್ಚಂದ್ರ ಸ್ಮಶಾನವಾಸಿಯಾಗುತ್ತಾನೆ. ಇಲ್ಲಿ ಸಂಪಾದಿಸಿದ ಧನವನ್ನು ವಿಶ್ವಾಮಿತ್ರ ಶಿಷ್ಯ ನಕ್ಷತ್ರಿಕನಿಗೆ ಹಸ್ತಾಂತರಿಸುತ್ತಾನೆ)

“ವಿಶ್ವಾಮಿತ್ರ ಶಿಷ್ಯರೇ, ಈಗಲಾದರೂ ನನ್ನನ್ನು ಆ ಪಾಶದಿಂದ ಬಿಡುಗಡೆಗೊಳಿಸುತ್ತೀರಾ? ಆಗಲಿ. ಧನ್ಯನಾದೆ. ಚಕ್ರವರ್ತಿಯಾಗಿದ್ದ ನಾನು ವೀರ ಬಾಹುಕನ ಆಜ್ಞೆಯಂತೆ ಪ್ರತಿಯೊಂದು ಹೆಣಕ್ಕೂ ಎಷ್ಟು ಹಣವನ್ನು ಸಂಪಾದಿಸಬೇಕೋ, ಅಷ್ಟು ಹಣವನ್ನು ಸಂಪಾದಿಸುತ್ತಾ, ಒಡೆಯನಿಗೆ ಸಲ್ಲಬೇಕಾಗಿದ್ದ ಹಣವನ್ನು ಅವನಿಗೆ ಸಮರ್ಪಿಸುತ್ತಿದ್ದೇನೆ.

ಪಟ್ಟಾಭಿಷೇಕವಾಗುವಾಗ ಹಿರಿಯರು ಹೇಳಿದ ಮಾತು ನೆನಪಾಗುತ್ತದೆ ಪ್ರಜೆಗಳೆಲ್ಲಾ ನಿನ್ನನ್ನು ಕೇಂದ್ರೀಕರಿಸಿಯೇ ಗೃಹಸ್ಥಾಶ್ರಮಿಗಳಾಗುತಾರೆ, ಅಲ್ಲ ಬ್ರಹ್ಮಚಾರಿಗಳಾಗಿರುತ್ತಾರೆ. ಅವನು ಯಾವುದೇ ಆಶ್ರಮ ಸ್ವೀಕಾರ ಮಾಡಬೇಕಿದ್ದರೂ ಕೂಡಾ ಭರವಸೆ ಸಿಂಹಾಸನದಲ್ಲಿ ಕುಳಿತ ನಿನ್ನಿಂದ ಬರಬೇಕು. ಆದ ಕಾರಣ ನೀನು ಕಾವಲುಗಾರನಾಗಬೇಕಾಗುತ್ತದೆ.
ನೀನಾಳು, ರಾಜ್ಯವನ್ನಾಳು. ಇಲ್ಲಿ ‘ಆಳು’ ಎಂಬ ಶಬ್ದ ಎರಡರ್ಥವನ್ನು ಕೊಡುತ್ತದೆ. ಬಾಕಿದ್ದವರನ್ನೆಲ್ಲ ‘ಆಳುವುದು’ ಎಂಬ ಅರ್ಥ ಒಂದಾದರೆ, ರೂಢಿಯ ಮಾತಿನಂತೆ ನೀನು ‘ಆಳು’! ಅವರೆಲ್ಲಾ ಆಳುಗಳಲ್ಲ, ಎಲ್ಲರನ್ನು ಆಳುವ ಆಳಾಗಿ ನೀನು ಬಾಳಬೇಕು. ಆ ಮಾತು ಈ ಹೊತ್ತು ಅನುಭವಕ್ಕೆ ಬಂತು. ಒಮ್ಮೆ ಎಲ್ಲರನ್ನು ಆಳಿದೆ. ಈಗ ನಿಜವಾದಂತಹ ‘ಆಳು’ ಶಬ್ದಕ್ಕೆ ಪ್ರತೀಕವೆನಿಸಿದ್ದೇನೆ. ಸುಡುಗಾಡಿನಲ್ಲಿ ಸುಡುಗಾಡಿನ ಕಾವಲುಗಾರನಾದ ಒಬ್ಬ ಚಾಂಡಾಲನ ಆಳು. ವ್ಯಸನವಿಲ್ಲ. ಯಾಕೆಂದರೆ, ಹಂಸತೂಲಿಕಾತಲ್ಪದಲ್ಲಿ ಪವಡಿಸಿದಂತಹ ಸುಖವನ್ನು ಮರೆಯಬೇಕಿದ್ದರೆ ಬರೇ ನೆಲದಲ್ಲಿ ಮಲಗಬೇಕು. ಈ ಜೀವನದಲ್ಲಿ ಜೀವನದ ಎರಡು ಪುಟವನ್ನು ಯಾವನು ಅಧ್ಯಯನ ಮಾಡುತ್ತಾನೋ ಅವನು ಮರಳಿ ಹುಟ್ಟುವುದಿಲ್ಲವಂತೆ. ಪಾತ್ರಕ್ಕೆ ಬಂದುದೇ ಪಂಚಾಮೃತ. ಇಲ್ಲೇ ಇರುತ್ತೇನೆ…”

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

12 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

12 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

12 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

12 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

12 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

20 hours ago